Homeಕರ್ನಾಟಕಧರ್ಮಸ್ಥಳಕ್ಕೆ ಭೇಟಿ ನೀಡಿದ ಎನ್‌ಹೆಚ್‌ಆರ್‌ಸಿ ತಂಡ: ಪೊಲೀಸ್ ಠಾಣೆ, ಗ್ರಾಮ ಪಂಚಾಯತ್‌ನಿಂದ ಮಾಹಿತಿ ಸಂಗ್ರಹ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಎನ್‌ಹೆಚ್‌ಆರ್‌ಸಿ ತಂಡ: ಪೊಲೀಸ್ ಠಾಣೆ, ಗ್ರಾಮ ಪಂಚಾಯತ್‌ನಿಂದ ಮಾಹಿತಿ ಸಂಗ್ರಹ

- Advertisement -
- Advertisement -

ಧರ್ಮಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಶವ ಶೋಧ ಕಾರ್ಯಾಚರಣೆ ನಡೆಸುತ್ತಿರುವ ಮಧ್ಯೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಸದಸ್ಯರ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮಕ್ಕೆ ಸೋಮವಾರ (ಆ.11) ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದುಕೊಂಡಿದೆ.

ಎನ್‌ಹೆಚ್‌ಆರ್‌ಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಯುವರಾಜ್, ಡಿವೈಎಸ್‌ಪಿ ರವಿ ಸಿಂಗ್ ಹಾಗೂ ಇತರರನ್ನು ಒಳಗೊಂಡ ತಂಡ ಬೆಳ್ತಂಗಡಿಯ ಎಸ್‌ಐಟಿ ಕಚೇರಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಮತ್ತು ಪೊಲೀಸ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದೆ.

ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ಸಾಕ್ಷಿ ದೂರುದಾರ ಮತ್ತು ಅವರ ವಕೀಲರಿಂದ ಕೂಡ ಎನ್‌ಹೆಚ್‌ಆರ್‌ಸಿ ಹೇಳಿಕೆ ಪಡೆದುಕೊಂಡಿದೆ. ಅಲ್ಲದೆ, ಕಳೆದ ದಶಕಗಳಲ್ಲಿ ದಾಖಲಾದ ಅಸಹಜ ಸಾವು ಪ್ರಕರಣಗಳ ಮಾಹಿತಿಯನ್ನು ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಗ್ರಹಿಸಿದೆ.

ತಂಡದ ಕೆಲ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಭೇಟಿ ಕೊಟ್ಟು ಕಳೆದ ದಶಕಗಳಲ್ಲಿ ಗ್ರಾಮದಲ್ಲಿ ಹೂಳಲಾದ ಅನಾಥ ಶವಗಳ ಮಾಹಿತಿಯನ್ನು ಪಡೆದುಕೊಂಡಿದೆ.

ಈ ಅವಧಿಯಲ್ಲಿ ಶವಗಳ ಅಂತ್ಯಕ್ರಿಯೆಯಲ್ಲಿ ತೊಡಗಿದ್ದ ಕಾರ್ಮಿಕರ ಸಂಖ್ಯೆ ಮತ್ತು ಅವರೆಲ್ಲರೂ ಇನ್ನೂ ಜೀವಂತವಾಗಿದ್ದಾರೆಯೇ ಎಂಬ ವಿವರಗಳನ್ನು ಕೂಡ ಎನ್‌ಹೆಚ್‌ಆರ್‌ಸಿ ತಂಡ ಸಂಗ್ರಹಿಸಿದೆ.

ವರದಿಗಳ ಪ್ರಕಾರ, ಶವಗಳನ್ನು ಹೂಳಿದ್ದ ಕೆಲವು ಕಾರ್ಮಿಕರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಹೆಚ್ಚುವರಿಯಾಗಿ, ಪ್ರಸ್ತುತ ಗ್ರಾಮ ಪಂಚಾಯತ್‌ನಿಂದ ನೇಮಕಗೊಂಡಿರುವ ನೈರ್ಮಲ್ಯ ಕಾರ್ಮಿಕರನ್ನು ಪಂಚಾಯತ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.

ಆಗಸ್ಟ್ 9ರಂದು ಎಸ್‌ಐಟಿ ತಂಡವು ಧರ್ಮಸ್ಥಳದ ಬಾಹುಬಲಿ ಬೆಟ್ಟಕ್ಕೆ ಹೋಗುವ ರಸ್ತೆಯ ಬದಿ ಶವಶೋಧ ನಡೆಸಿತ್ತು. ಆ ಜಾಗವನ್ನು ಎನ್‌ಎಚ್‌ಆರ್‌ಸಿ ತಂಡ ಪರಿಶೀಲಿಸಿದೆ.

ಸ್ವಯಂ ಪ್ರೇರಿತ ತನಿಖೆ

“ಪ್ರಕರಣದ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ. ನಾವು ಸ್ವಯಂ ಪ್ರೇರಿತ ಪರಿಶೀಲನೆ ಮತ್ತು ತನಿಖೆ ನಡೆಸುತ್ತಿದ್ದೇವೆ” ಎಂದು ಎನ್‌ಹೆಚ್‌ಆರ್‌ಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಪೊಲೀಸರು ನಿಯಮಗಳನ್ನು ಪಾಲಿಸದೆ ಶವಗಳನ್ನು ವಿಲೇವಾರಿ ಮಾಡಿದ್ದಾರೆಯೇ?..ಯಾವುದೇ ಲೋಪಗಳಾಗಿವೆಯೇ ಎಂದು ನಾವು ಪರಿಶೀಲಿಸುತ್ತೇವೆ. ಸಾಕ್ಷಿ ದೂರುದಾರ, ಅವರ ವಕೀಲರು, ಅವರ ಬೆಂಬಲಿಗರು ಮತ್ತು ತನಿಖೆಯನ್ನು ವಿರೋಧಿಸುವವರಿಂದ ನಾವು ಹೇಳಿಕೆಗಳನ್ನು ದಾಖಲಿಸುತ್ತೇವೆ. ಎಸ್‌ಐಟಿ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಕೂಡ ನಾವು ಪರಿಶೀಲಿಸುತ್ತೇವೆ. ಎಲ್ಲಾ ಕೋನಗಳಿಂದ ಮಾಹಿತಿಯನ್ನು ಸಂಗ್ರಹಿಸಲು ನಾವು ಸುಮಾರು ನಾಲ್ಕು ದಿನಗಳ ಕಾಲ ಇಲ್ಲಿಯೇ ಇರಲು ಯೋಜಿಸಿದ್ದೇವೆ ಮತ್ತು ಅಗತ್ಯವಿದ್ದರೆ ಹೆಚ್ಚು ಕಾಲ ಉಳಿಯಬಹುದು” ಎಂದು ಅಧಿಕಾರಿ ಹೇಳಿದ್ದಾಗಿ ವರದಿ ವಿವರಿಸಿದೆ.

ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...