Homeಕರ್ನಾಟಕಧರ್ಮಸ್ಥಳಕ್ಕೆ ಭೇಟಿ ನೀಡಿದ ಎನ್‌ಹೆಚ್‌ಆರ್‌ಸಿ ತಂಡ: ಪೊಲೀಸ್ ಠಾಣೆ, ಗ್ರಾಮ ಪಂಚಾಯತ್‌ನಿಂದ ಮಾಹಿತಿ ಸಂಗ್ರಹ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಎನ್‌ಹೆಚ್‌ಆರ್‌ಸಿ ತಂಡ: ಪೊಲೀಸ್ ಠಾಣೆ, ಗ್ರಾಮ ಪಂಚಾಯತ್‌ನಿಂದ ಮಾಹಿತಿ ಸಂಗ್ರಹ

- Advertisement -
- Advertisement -

ಧರ್ಮಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಶವ ಶೋಧ ಕಾರ್ಯಾಚರಣೆ ನಡೆಸುತ್ತಿರುವ ಮಧ್ಯೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಸದಸ್ಯರ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮಕ್ಕೆ ಸೋಮವಾರ (ಆ.11) ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದುಕೊಂಡಿದೆ.

ಎನ್‌ಹೆಚ್‌ಆರ್‌ಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಯುವರಾಜ್, ಡಿವೈಎಸ್‌ಪಿ ರವಿ ಸಿಂಗ್ ಹಾಗೂ ಇತರರನ್ನು ಒಳಗೊಂಡ ತಂಡ ಬೆಳ್ತಂಗಡಿಯ ಎಸ್‌ಐಟಿ ಕಚೇರಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಮತ್ತು ಪೊಲೀಸ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದೆ.

ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ಸಾಕ್ಷಿ ದೂರುದಾರ ಮತ್ತು ಅವರ ವಕೀಲರಿಂದ ಕೂಡ ಎನ್‌ಹೆಚ್‌ಆರ್‌ಸಿ ಹೇಳಿಕೆ ಪಡೆದುಕೊಂಡಿದೆ. ಅಲ್ಲದೆ, ಕಳೆದ ದಶಕಗಳಲ್ಲಿ ದಾಖಲಾದ ಅಸಹಜ ಸಾವು ಪ್ರಕರಣಗಳ ಮಾಹಿತಿಯನ್ನು ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಗ್ರಹಿಸಿದೆ.

ತಂಡದ ಕೆಲ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಭೇಟಿ ಕೊಟ್ಟು ಕಳೆದ ದಶಕಗಳಲ್ಲಿ ಗ್ರಾಮದಲ್ಲಿ ಹೂಳಲಾದ ಅನಾಥ ಶವಗಳ ಮಾಹಿತಿಯನ್ನು ಪಡೆದುಕೊಂಡಿದೆ.

ಈ ಅವಧಿಯಲ್ಲಿ ಶವಗಳ ಅಂತ್ಯಕ್ರಿಯೆಯಲ್ಲಿ ತೊಡಗಿದ್ದ ಕಾರ್ಮಿಕರ ಸಂಖ್ಯೆ ಮತ್ತು ಅವರೆಲ್ಲರೂ ಇನ್ನೂ ಜೀವಂತವಾಗಿದ್ದಾರೆಯೇ ಎಂಬ ವಿವರಗಳನ್ನು ಕೂಡ ಎನ್‌ಹೆಚ್‌ಆರ್‌ಸಿ ತಂಡ ಸಂಗ್ರಹಿಸಿದೆ.

ವರದಿಗಳ ಪ್ರಕಾರ, ಶವಗಳನ್ನು ಹೂಳಿದ್ದ ಕೆಲವು ಕಾರ್ಮಿಕರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಹೆಚ್ಚುವರಿಯಾಗಿ, ಪ್ರಸ್ತುತ ಗ್ರಾಮ ಪಂಚಾಯತ್‌ನಿಂದ ನೇಮಕಗೊಂಡಿರುವ ನೈರ್ಮಲ್ಯ ಕಾರ್ಮಿಕರನ್ನು ಪಂಚಾಯತ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.

ಆಗಸ್ಟ್ 9ರಂದು ಎಸ್‌ಐಟಿ ತಂಡವು ಧರ್ಮಸ್ಥಳದ ಬಾಹುಬಲಿ ಬೆಟ್ಟಕ್ಕೆ ಹೋಗುವ ರಸ್ತೆಯ ಬದಿ ಶವಶೋಧ ನಡೆಸಿತ್ತು. ಆ ಜಾಗವನ್ನು ಎನ್‌ಎಚ್‌ಆರ್‌ಸಿ ತಂಡ ಪರಿಶೀಲಿಸಿದೆ.

ಸ್ವಯಂ ಪ್ರೇರಿತ ತನಿಖೆ

“ಪ್ರಕರಣದ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ. ನಾವು ಸ್ವಯಂ ಪ್ರೇರಿತ ಪರಿಶೀಲನೆ ಮತ್ತು ತನಿಖೆ ನಡೆಸುತ್ತಿದ್ದೇವೆ” ಎಂದು ಎನ್‌ಹೆಚ್‌ಆರ್‌ಸಿಯ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

“ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಪೊಲೀಸರು ನಿಯಮಗಳನ್ನು ಪಾಲಿಸದೆ ಶವಗಳನ್ನು ವಿಲೇವಾರಿ ಮಾಡಿದ್ದಾರೆಯೇ?..ಯಾವುದೇ ಲೋಪಗಳಾಗಿವೆಯೇ ಎಂದು ನಾವು ಪರಿಶೀಲಿಸುತ್ತೇವೆ. ಸಾಕ್ಷಿ ದೂರುದಾರ, ಅವರ ವಕೀಲರು, ಅವರ ಬೆಂಬಲಿಗರು ಮತ್ತು ತನಿಖೆಯನ್ನು ವಿರೋಧಿಸುವವರಿಂದ ನಾವು ಹೇಳಿಕೆಗಳನ್ನು ದಾಖಲಿಸುತ್ತೇವೆ. ಎಸ್‌ಐಟಿ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಕೂಡ ನಾವು ಪರಿಶೀಲಿಸುತ್ತೇವೆ. ಎಲ್ಲಾ ಕೋನಗಳಿಂದ ಮಾಹಿತಿಯನ್ನು ಸಂಗ್ರಹಿಸಲು ನಾವು ಸುಮಾರು ನಾಲ್ಕು ದಿನಗಳ ಕಾಲ ಇಲ್ಲಿಯೇ ಇರಲು ಯೋಜಿಸಿದ್ದೇವೆ ಮತ್ತು ಅಗತ್ಯವಿದ್ದರೆ ಹೆಚ್ಚು ಕಾಲ ಉಳಿಯಬಹುದು” ಎಂದು ಅಧಿಕಾರಿ ಹೇಳಿದ್ದಾಗಿ ವರದಿ ವಿವರಿಸಿದೆ.

ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...