Homeಕರ್ನಾಟಕಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು...

ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಇದು ಪೂರ್ವಾಗ್ರಹ ಪೀಡಿತವಾದ ದಾಳಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ

- Advertisement -
- Advertisement -

ಕರ್ನಾಟಕ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ದಾಳಿ ನಡೆಸುತ್ತಿದೆ. 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿಚಾರಣೆಯನ್ನು ಆಧರಿಸಿ ಬಂಧಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ, ಪರ್ಭಾನಿ ಜಿಲ್ಲೆಗಳಲ್ಲಿ; ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಜಿಲ್ಲೆಗಳು; ಅಸ್ಸಾಂನ ನಾಗರ್ಬೆರಾ; ಬುಲಂದ್‌ಶಹರ್‌ನ ಕಸ್ಬಾ ಸಯಾನ, ಸರೂರ್‌ಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೀರತ್‌ನ ಲಿಸಾರಿ ಗೇಟ್ ಪ್ರದೇಶ; ಮತ್ತು ದೆಹಲಿಯ ಹಲವಾರು ಸ್ಥಳಗಳಲ್ಲಿ ದಾಳಿಗಳು ನಡೆದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮುಂಜಾನೆಯೇ ದಾಳಿ ಆರಂಭವಾಗಿದ್ದು, ಅದು ಮುಂದುವರಿದಿದೆ. ಕೆಲವು ರಾಜ್ಯಗಳಲ್ಲಿ ತಮ್ಮ ಸೂಚನೆಯ ಮೇರೆಗೆ ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ವಿಶೇಷ ಶಾಖೆ) ಹಿರೇನ್ ನಾಥ್ ಅವರು ನಗರ್‌ಬೆರಾ ಪ್ರದೇಶದಿಂದ ಐವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ಎನ್‌ಐಎ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 11 ಮಂದಿಯನ್ನು ಬಂಧಿಸಲಾಗಿತ್ತು.

ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. “ನಾವು ಅವರನ್ನು  ಪರಿಶೀಲನೆ ಮಾಡುತ್ತಿದ್ದೇವೆ. ಸದ್ಯಕ್ಕೆ ಅವರಲ್ಲಿ ಯಾರೊಬ್ಬರ ವಿರುದ್ಧವೂ ಯಾವುದೇ ಬಂಧನ ಮೆಮೊಗಳನ್ನು ದಾಖಲಿಸಲಾಗಿಲ್ಲ. ಅವರು ಪಿಎಫ್‌ಐ ಸದಸ್ಯರಿದ್ದು, ಈ ಹಿಂದೆ ಬಂಧಿತರಾದ ಪಿಎಫ್‌ಐ ಸದಸ್ಯರನ್ನು ಪ್ರಶ್ನಿಸಿದ ನಂತರ ನಮಗೆ ಹೊಸ ಮಾಹಿತಿ ಸಿಕ್ಕಿತ್ತು. ಹೀಗಾಗಿ ದಾಳಿ ನಡೆಸುತ್ತಿದ್ದೇವೆ” ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ ಮತ್ತು ಪರ್ಭಾನಿ ಜಿಲ್ಲೆಗಳಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಭಾಗದಲ್ಲಿ ದಾಳಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಐವರು, ಬಳ್ಳಾರಿಯಲ್ಲಿ ನಾಲ್ವರು, ಹುಬ್ಬಳ್ಳಿಯಲ್ಲಿ ಇಬ್ಬರು, ಕೋಲಾರ ಜಿಲ್ಲೆಯಿಂದ ಆರು ಮಂದಿಯನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲಾಧ್ಯಕ್ಷ ಮತ್ತು ಕಲಬುರಗಿ ಮಾಧ್ಯಮ ಸಂಯೋಜಕನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ, ನಿಜಾಮುದ್ದೀನ್, ರೋಹಿಣಿ, ಜಾಮಿಯಾ ಮತ್ತು ಶಾಹಿನ್ ಬಾಗ್‌ನಲ್ಲಿ ದಾಳಿಗಳು ನಡೆಯುತ್ತಿವೆ. ಬಂಧಿತ ಪಿಎಫ್‌ಐ ಸದಸ್ಯರ ವಿಚಾರಣೆ ವೇಳೆ ಎನ್‌ಐಎಗೆ ಹೊಸ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ವಾರದ ಆರಂಭದಲ್ಲಿ, ಪಿಎಫ್‌ಐನ 106 ಕ್ಕೂ ಹೆಚ್ಚು ಸದಸ್ಯರನ್ನು ಎನ್‌ಐಎ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸೋಮವಾರ ಇಬ್ಬರು ಪಿಎಫ್‌ಐ ಸದಸ್ಯರ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ. ಸದ್ಯಕ್ಕೆ, ಎನ್‌ಐಎ ಒಟ್ಟು 19 ಪಿಎಫ್‌ಐ ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

“2010-2011ರಲ್ಲಿ ಸುಮಾರು 46 ಆರೋಪಿಗಳನ್ನು ಬಂಧಿಸಿ ನಂತರ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಎನ್ಐಎ ಹೇಳಿದೆ” ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಸುಮಾರು 355 ಪಿಎಫ್‌ಐ ಸದಸ್ಯರ ವಿರುದ್ಧ ಈಗಾಗಲೇ ಎನ್‌ಐಎ ಚಾರ್ಜ್‌ಶೀಟ್ ಮಾಡಿದೆ.

ಪಿಎಫ್‌ಐ ವಿರುದ್ಧ ಎನ್‌ಐಎ ನಡೆಸುತ್ತಿರುವ ದಾಳಿಯು ಪೂರ್ವಾಗ್ರಹ ಪೀಡಿತವಾದದ್ದು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ದಾಳಿಗೆ ಏನು ಕಾರಣ ಎಂಬ ಬಗ್ಗೆ ಎನ್‌ಐಎ ಏನೂ ಹೇಳುತ್ತಿಲ್ಲ. ಪೂರ್ವಾಗ್ರಹ ಪೀಡಿತರಾಗಿ ದಾಳಿ ನಡೆಸುತ್ತಿದೆ. ಮುನ್ಸೂಚನಾ ಕ್ರಮವಾಗಿ ಶಾಂತಿ ಕದಡುವ ಪ್ರಯತ್ನ ಆಗಬಹುದು ಎಂದು ಐಪಿಸಿ 107 ಅಡಿಯಲ್ಲಿ ಬಂಧಿಸುತ್ತಿದ್ದಾರೆ” ಎಂದು ಹೇಳಿದರು.

“ಆರೆಸ್ಸೆಸ್‌ ಮತ್ತು ಬಜರಂಗದಳ ಇಲ್ಲಿವರೆಗೆ ಬಹಿರಂಗವಾಗಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸುತ್ತಿದೆ. ವಿಜಯದಶಮಿ ದಿನ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಸಾವಿರಾರು ಶಸ್ತ್ರಾಸ್ತ್ರಗಳನ್ನು ಜೋಡಿಸಿಕೊಂಡು ಪೂಜೆ ಮಾಡುತ್ತಾರೆ. ಈ ಶಸ್ತ್ರಾಸ್ತ್ರಗಳ ಲೈಸನ್ಸ್‌ ಯಾರ ಹೆಸರಿನಲ್ಲಿದೆ ಎಂಬುವುದನ್ನು ಎನ್‌ಐಎ ಇಲ್ಲಿವರೆಗೂ ಪ್ರಶ್ನೆ ಮಾಡಿಲ್ಲ” ಎಂದು ಭಾಸ್ಕರ್‌ ಪ್ರಸಾದ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ಪಿಎಫ್‌ಐ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಪೆನ್ನು, ಪೇಪರ್‌, ಕಂಪ್ಯೂಟರ್‌ಗಳು ಬಿಟ್ಟರೆ ಈವರೆಗೂ ಒಂದು ರೇಝರ್‌ ಕೂಡಾ ಎನ್‌ಐಎ‌ಗೆ ಸಿಕ್ಕಿಲ್ಲ. ಆದರೆ ಮಾಧ್ಯಮಗಳು ಮಾತ್ರ ಭಯಂಕರವಾಗಿರುವು ಏನೋ ಸಿಕ್ಕಿದೆ ಎಂದು ಹೇಳುತ್ತಿವೆ. ಆದರೆ ಅದು ಏನು ಎಂದು ಅವುಗಳು ಹೇಳುತ್ತಿಲ್ಲ. ಅಷ್ಟೆ ಅಲ್ಲದೆ, ಎನ್‌ಐಎ ಕೂಡಾ ಒಂದೇ ಒಂದು ಸಣ್ಣ ವಿಚಾರವನ್ನು ಅಧೀಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಮಾಧ್ಯಮಗಳು ಮಾತ್ರ ಎನ್‌ಐಎ ಹೇಳದೆ ಇರುವುದನ್ನು ಮಾಧ್ಯಮಗಳು ಹೇಳುತ್ತಿವೆ. ಯಾಕೆಂದರೆ ಈ ಮಾಧ್ಯಮಗಳು ಎಲ್ಲವೂ ಬಿಜೆಪಿ ಸಾಕಿಕೊಂಡಿರುವವುಗಳಾಗಿವೆ” ಎಂದು ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...