Homeಕರ್ನಾಟಕಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು...

ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಇದು ಪೂರ್ವಾಗ್ರಹ ಪೀಡಿತವಾದ ದಾಳಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ

- Advertisement -
- Advertisement -

ಕರ್ನಾಟಕ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ದಾಳಿ ನಡೆಸುತ್ತಿದೆ. 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿಚಾರಣೆಯನ್ನು ಆಧರಿಸಿ ಬಂಧಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ, ಪರ್ಭಾನಿ ಜಿಲ್ಲೆಗಳಲ್ಲಿ; ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಜಿಲ್ಲೆಗಳು; ಅಸ್ಸಾಂನ ನಾಗರ್ಬೆರಾ; ಬುಲಂದ್‌ಶಹರ್‌ನ ಕಸ್ಬಾ ಸಯಾನ, ಸರೂರ್‌ಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೀರತ್‌ನ ಲಿಸಾರಿ ಗೇಟ್ ಪ್ರದೇಶ; ಮತ್ತು ದೆಹಲಿಯ ಹಲವಾರು ಸ್ಥಳಗಳಲ್ಲಿ ದಾಳಿಗಳು ನಡೆದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮುಂಜಾನೆಯೇ ದಾಳಿ ಆರಂಭವಾಗಿದ್ದು, ಅದು ಮುಂದುವರಿದಿದೆ. ಕೆಲವು ರಾಜ್ಯಗಳಲ್ಲಿ ತಮ್ಮ ಸೂಚನೆಯ ಮೇರೆಗೆ ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ವಿಶೇಷ ಶಾಖೆ) ಹಿರೇನ್ ನಾಥ್ ಅವರು ನಗರ್‌ಬೆರಾ ಪ್ರದೇಶದಿಂದ ಐವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ಎನ್‌ಐಎ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 11 ಮಂದಿಯನ್ನು ಬಂಧಿಸಲಾಗಿತ್ತು.

ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. “ನಾವು ಅವರನ್ನು  ಪರಿಶೀಲನೆ ಮಾಡುತ್ತಿದ್ದೇವೆ. ಸದ್ಯಕ್ಕೆ ಅವರಲ್ಲಿ ಯಾರೊಬ್ಬರ ವಿರುದ್ಧವೂ ಯಾವುದೇ ಬಂಧನ ಮೆಮೊಗಳನ್ನು ದಾಖಲಿಸಲಾಗಿಲ್ಲ. ಅವರು ಪಿಎಫ್‌ಐ ಸದಸ್ಯರಿದ್ದು, ಈ ಹಿಂದೆ ಬಂಧಿತರಾದ ಪಿಎಫ್‌ಐ ಸದಸ್ಯರನ್ನು ಪ್ರಶ್ನಿಸಿದ ನಂತರ ನಮಗೆ ಹೊಸ ಮಾಹಿತಿ ಸಿಕ್ಕಿತ್ತು. ಹೀಗಾಗಿ ದಾಳಿ ನಡೆಸುತ್ತಿದ್ದೇವೆ” ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ ಮತ್ತು ಪರ್ಭಾನಿ ಜಿಲ್ಲೆಗಳಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಭಾಗದಲ್ಲಿ ದಾಳಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಐವರು, ಬಳ್ಳಾರಿಯಲ್ಲಿ ನಾಲ್ವರು, ಹುಬ್ಬಳ್ಳಿಯಲ್ಲಿ ಇಬ್ಬರು, ಕೋಲಾರ ಜಿಲ್ಲೆಯಿಂದ ಆರು ಮಂದಿಯನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲಾಧ್ಯಕ್ಷ ಮತ್ತು ಕಲಬುರಗಿ ಮಾಧ್ಯಮ ಸಂಯೋಜಕನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ, ನಿಜಾಮುದ್ದೀನ್, ರೋಹಿಣಿ, ಜಾಮಿಯಾ ಮತ್ತು ಶಾಹಿನ್ ಬಾಗ್‌ನಲ್ಲಿ ದಾಳಿಗಳು ನಡೆಯುತ್ತಿವೆ. ಬಂಧಿತ ಪಿಎಫ್‌ಐ ಸದಸ್ಯರ ವಿಚಾರಣೆ ವೇಳೆ ಎನ್‌ಐಎಗೆ ಹೊಸ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ವಾರದ ಆರಂಭದಲ್ಲಿ, ಪಿಎಫ್‌ಐನ 106 ಕ್ಕೂ ಹೆಚ್ಚು ಸದಸ್ಯರನ್ನು ಎನ್‌ಐಎ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸೋಮವಾರ ಇಬ್ಬರು ಪಿಎಫ್‌ಐ ಸದಸ್ಯರ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ. ಸದ್ಯಕ್ಕೆ, ಎನ್‌ಐಎ ಒಟ್ಟು 19 ಪಿಎಫ್‌ಐ ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

“2010-2011ರಲ್ಲಿ ಸುಮಾರು 46 ಆರೋಪಿಗಳನ್ನು ಬಂಧಿಸಿ ನಂತರ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಎನ್ಐಎ ಹೇಳಿದೆ” ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಸುಮಾರು 355 ಪಿಎಫ್‌ಐ ಸದಸ್ಯರ ವಿರುದ್ಧ ಈಗಾಗಲೇ ಎನ್‌ಐಎ ಚಾರ್ಜ್‌ಶೀಟ್ ಮಾಡಿದೆ.

ಪಿಎಫ್‌ಐ ವಿರುದ್ಧ ಎನ್‌ಐಎ ನಡೆಸುತ್ತಿರುವ ದಾಳಿಯು ಪೂರ್ವಾಗ್ರಹ ಪೀಡಿತವಾದದ್ದು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ದಾಳಿಗೆ ಏನು ಕಾರಣ ಎಂಬ ಬಗ್ಗೆ ಎನ್‌ಐಎ ಏನೂ ಹೇಳುತ್ತಿಲ್ಲ. ಪೂರ್ವಾಗ್ರಹ ಪೀಡಿತರಾಗಿ ದಾಳಿ ನಡೆಸುತ್ತಿದೆ. ಮುನ್ಸೂಚನಾ ಕ್ರಮವಾಗಿ ಶಾಂತಿ ಕದಡುವ ಪ್ರಯತ್ನ ಆಗಬಹುದು ಎಂದು ಐಪಿಸಿ 107 ಅಡಿಯಲ್ಲಿ ಬಂಧಿಸುತ್ತಿದ್ದಾರೆ” ಎಂದು ಹೇಳಿದರು.

“ಆರೆಸ್ಸೆಸ್‌ ಮತ್ತು ಬಜರಂಗದಳ ಇಲ್ಲಿವರೆಗೆ ಬಹಿರಂಗವಾಗಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸುತ್ತಿದೆ. ವಿಜಯದಶಮಿ ದಿನ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಸಾವಿರಾರು ಶಸ್ತ್ರಾಸ್ತ್ರಗಳನ್ನು ಜೋಡಿಸಿಕೊಂಡು ಪೂಜೆ ಮಾಡುತ್ತಾರೆ. ಈ ಶಸ್ತ್ರಾಸ್ತ್ರಗಳ ಲೈಸನ್ಸ್‌ ಯಾರ ಹೆಸರಿನಲ್ಲಿದೆ ಎಂಬುವುದನ್ನು ಎನ್‌ಐಎ ಇಲ್ಲಿವರೆಗೂ ಪ್ರಶ್ನೆ ಮಾಡಿಲ್ಲ” ಎಂದು ಭಾಸ್ಕರ್‌ ಪ್ರಸಾದ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ಪಿಎಫ್‌ಐ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಪೆನ್ನು, ಪೇಪರ್‌, ಕಂಪ್ಯೂಟರ್‌ಗಳು ಬಿಟ್ಟರೆ ಈವರೆಗೂ ಒಂದು ರೇಝರ್‌ ಕೂಡಾ ಎನ್‌ಐಎ‌ಗೆ ಸಿಕ್ಕಿಲ್ಲ. ಆದರೆ ಮಾಧ್ಯಮಗಳು ಮಾತ್ರ ಭಯಂಕರವಾಗಿರುವು ಏನೋ ಸಿಕ್ಕಿದೆ ಎಂದು ಹೇಳುತ್ತಿವೆ. ಆದರೆ ಅದು ಏನು ಎಂದು ಅವುಗಳು ಹೇಳುತ್ತಿಲ್ಲ. ಅಷ್ಟೆ ಅಲ್ಲದೆ, ಎನ್‌ಐಎ ಕೂಡಾ ಒಂದೇ ಒಂದು ಸಣ್ಣ ವಿಚಾರವನ್ನು ಅಧೀಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಮಾಧ್ಯಮಗಳು ಮಾತ್ರ ಎನ್‌ಐಎ ಹೇಳದೆ ಇರುವುದನ್ನು ಮಾಧ್ಯಮಗಳು ಹೇಳುತ್ತಿವೆ. ಯಾಕೆಂದರೆ ಈ ಮಾಧ್ಯಮಗಳು ಎಲ್ಲವೂ ಬಿಜೆಪಿ ಸಾಕಿಕೊಂಡಿರುವವುಗಳಾಗಿವೆ” ಎಂದು ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...