Homeಕರ್ನಾಟಕಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು...

ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಇದು ಪೂರ್ವಾಗ್ರಹ ಪೀಡಿತವಾದ ದಾಳಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ

- Advertisement -
- Advertisement -

ಕರ್ನಾಟಕ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ದಾಳಿ ನಡೆಸುತ್ತಿದೆ. 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿಚಾರಣೆಯನ್ನು ಆಧರಿಸಿ ಬಂಧಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ, ಪರ್ಭಾನಿ ಜಿಲ್ಲೆಗಳಲ್ಲಿ; ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಜಿಲ್ಲೆಗಳು; ಅಸ್ಸಾಂನ ನಾಗರ್ಬೆರಾ; ಬುಲಂದ್‌ಶಹರ್‌ನ ಕಸ್ಬಾ ಸಯಾನ, ಸರೂರ್‌ಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೀರತ್‌ನ ಲಿಸಾರಿ ಗೇಟ್ ಪ್ರದೇಶ; ಮತ್ತು ದೆಹಲಿಯ ಹಲವಾರು ಸ್ಥಳಗಳಲ್ಲಿ ದಾಳಿಗಳು ನಡೆದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮುಂಜಾನೆಯೇ ದಾಳಿ ಆರಂಭವಾಗಿದ್ದು, ಅದು ಮುಂದುವರಿದಿದೆ. ಕೆಲವು ರಾಜ್ಯಗಳಲ್ಲಿ ತಮ್ಮ ಸೂಚನೆಯ ಮೇರೆಗೆ ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ವಿಶೇಷ ಶಾಖೆ) ಹಿರೇನ್ ನಾಥ್ ಅವರು ನಗರ್‌ಬೆರಾ ಪ್ರದೇಶದಿಂದ ಐವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ಎನ್‌ಐಎ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 11 ಮಂದಿಯನ್ನು ಬಂಧಿಸಲಾಗಿತ್ತು.

ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. “ನಾವು ಅವರನ್ನು  ಪರಿಶೀಲನೆ ಮಾಡುತ್ತಿದ್ದೇವೆ. ಸದ್ಯಕ್ಕೆ ಅವರಲ್ಲಿ ಯಾರೊಬ್ಬರ ವಿರುದ್ಧವೂ ಯಾವುದೇ ಬಂಧನ ಮೆಮೊಗಳನ್ನು ದಾಖಲಿಸಲಾಗಿಲ್ಲ. ಅವರು ಪಿಎಫ್‌ಐ ಸದಸ್ಯರಿದ್ದು, ಈ ಹಿಂದೆ ಬಂಧಿತರಾದ ಪಿಎಫ್‌ಐ ಸದಸ್ಯರನ್ನು ಪ್ರಶ್ನಿಸಿದ ನಂತರ ನಮಗೆ ಹೊಸ ಮಾಹಿತಿ ಸಿಕ್ಕಿತ್ತು. ಹೀಗಾಗಿ ದಾಳಿ ನಡೆಸುತ್ತಿದ್ದೇವೆ” ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ ಮತ್ತು ಪರ್ಭಾನಿ ಜಿಲ್ಲೆಗಳಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಭಾಗದಲ್ಲಿ ದಾಳಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಐವರು, ಬಳ್ಳಾರಿಯಲ್ಲಿ ನಾಲ್ವರು, ಹುಬ್ಬಳ್ಳಿಯಲ್ಲಿ ಇಬ್ಬರು, ಕೋಲಾರ ಜಿಲ್ಲೆಯಿಂದ ಆರು ಮಂದಿಯನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲಾಧ್ಯಕ್ಷ ಮತ್ತು ಕಲಬುರಗಿ ಮಾಧ್ಯಮ ಸಂಯೋಜಕನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ, ನಿಜಾಮುದ್ದೀನ್, ರೋಹಿಣಿ, ಜಾಮಿಯಾ ಮತ್ತು ಶಾಹಿನ್ ಬಾಗ್‌ನಲ್ಲಿ ದಾಳಿಗಳು ನಡೆಯುತ್ತಿವೆ. ಬಂಧಿತ ಪಿಎಫ್‌ಐ ಸದಸ್ಯರ ವಿಚಾರಣೆ ವೇಳೆ ಎನ್‌ಐಎಗೆ ಹೊಸ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ವಾರದ ಆರಂಭದಲ್ಲಿ, ಪಿಎಫ್‌ಐನ 106 ಕ್ಕೂ ಹೆಚ್ಚು ಸದಸ್ಯರನ್ನು ಎನ್‌ಐಎ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸೋಮವಾರ ಇಬ್ಬರು ಪಿಎಫ್‌ಐ ಸದಸ್ಯರ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ. ಸದ್ಯಕ್ಕೆ, ಎನ್‌ಐಎ ಒಟ್ಟು 19 ಪಿಎಫ್‌ಐ ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

“2010-2011ರಲ್ಲಿ ಸುಮಾರು 46 ಆರೋಪಿಗಳನ್ನು ಬಂಧಿಸಿ ನಂತರ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಎನ್ಐಎ ಹೇಳಿದೆ” ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಸುಮಾರು 355 ಪಿಎಫ್‌ಐ ಸದಸ್ಯರ ವಿರುದ್ಧ ಈಗಾಗಲೇ ಎನ್‌ಐಎ ಚಾರ್ಜ್‌ಶೀಟ್ ಮಾಡಿದೆ.

ಪಿಎಫ್‌ಐ ವಿರುದ್ಧ ಎನ್‌ಐಎ ನಡೆಸುತ್ತಿರುವ ದಾಳಿಯು ಪೂರ್ವಾಗ್ರಹ ಪೀಡಿತವಾದದ್ದು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ದಾಳಿಗೆ ಏನು ಕಾರಣ ಎಂಬ ಬಗ್ಗೆ ಎನ್‌ಐಎ ಏನೂ ಹೇಳುತ್ತಿಲ್ಲ. ಪೂರ್ವಾಗ್ರಹ ಪೀಡಿತರಾಗಿ ದಾಳಿ ನಡೆಸುತ್ತಿದೆ. ಮುನ್ಸೂಚನಾ ಕ್ರಮವಾಗಿ ಶಾಂತಿ ಕದಡುವ ಪ್ರಯತ್ನ ಆಗಬಹುದು ಎಂದು ಐಪಿಸಿ 107 ಅಡಿಯಲ್ಲಿ ಬಂಧಿಸುತ್ತಿದ್ದಾರೆ” ಎಂದು ಹೇಳಿದರು.

“ಆರೆಸ್ಸೆಸ್‌ ಮತ್ತು ಬಜರಂಗದಳ ಇಲ್ಲಿವರೆಗೆ ಬಹಿರಂಗವಾಗಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸುತ್ತಿದೆ. ವಿಜಯದಶಮಿ ದಿನ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಸಾವಿರಾರು ಶಸ್ತ್ರಾಸ್ತ್ರಗಳನ್ನು ಜೋಡಿಸಿಕೊಂಡು ಪೂಜೆ ಮಾಡುತ್ತಾರೆ. ಈ ಶಸ್ತ್ರಾಸ್ತ್ರಗಳ ಲೈಸನ್ಸ್‌ ಯಾರ ಹೆಸರಿನಲ್ಲಿದೆ ಎಂಬುವುದನ್ನು ಎನ್‌ಐಎ ಇಲ್ಲಿವರೆಗೂ ಪ್ರಶ್ನೆ ಮಾಡಿಲ್ಲ” ಎಂದು ಭಾಸ್ಕರ್‌ ಪ್ರಸಾದ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ಪಿಎಫ್‌ಐ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಪೆನ್ನು, ಪೇಪರ್‌, ಕಂಪ್ಯೂಟರ್‌ಗಳು ಬಿಟ್ಟರೆ ಈವರೆಗೂ ಒಂದು ರೇಝರ್‌ ಕೂಡಾ ಎನ್‌ಐಎ‌ಗೆ ಸಿಕ್ಕಿಲ್ಲ. ಆದರೆ ಮಾಧ್ಯಮಗಳು ಮಾತ್ರ ಭಯಂಕರವಾಗಿರುವು ಏನೋ ಸಿಕ್ಕಿದೆ ಎಂದು ಹೇಳುತ್ತಿವೆ. ಆದರೆ ಅದು ಏನು ಎಂದು ಅವುಗಳು ಹೇಳುತ್ತಿಲ್ಲ. ಅಷ್ಟೆ ಅಲ್ಲದೆ, ಎನ್‌ಐಎ ಕೂಡಾ ಒಂದೇ ಒಂದು ಸಣ್ಣ ವಿಚಾರವನ್ನು ಅಧೀಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಮಾಧ್ಯಮಗಳು ಮಾತ್ರ ಎನ್‌ಐಎ ಹೇಳದೆ ಇರುವುದನ್ನು ಮಾಧ್ಯಮಗಳು ಹೇಳುತ್ತಿವೆ. ಯಾಕೆಂದರೆ ಈ ಮಾಧ್ಯಮಗಳು ಎಲ್ಲವೂ ಬಿಜೆಪಿ ಸಾಕಿಕೊಂಡಿರುವವುಗಳಾಗಿವೆ” ಎಂದು ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....