Homeಕರ್ನಾಟಕಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು...

ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ವಿರುದ್ಧ ಮತ್ತೆ ದಾಳಿ ನಡೆಸಿದ NIA; 50 ಜನರು ವಶಕ್ಕೆ

ಇದು ಪೂರ್ವಾಗ್ರಹ ಪೀಡಿತವಾದ ದಾಳಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ

- Advertisement -
- Advertisement -

ಕರ್ನಾಟಕ ಸೇರಿದಂತೆ ದೇಶದ ಎಂಟು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ದಾಳಿ ನಡೆಸುತ್ತಿದೆ. 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರ ವಿಚಾರಣೆಯನ್ನು ಆಧರಿಸಿ ಬಂಧಿಸಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ, ಪರ್ಭಾನಿ ಜಿಲ್ಲೆಗಳಲ್ಲಿ; ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಜಿಲ್ಲೆಗಳು; ಅಸ್ಸಾಂನ ನಾಗರ್ಬೆರಾ; ಬುಲಂದ್‌ಶಹರ್‌ನ ಕಸ್ಬಾ ಸಯಾನ, ಸರೂರ್‌ಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೀರತ್‌ನ ಲಿಸಾರಿ ಗೇಟ್ ಪ್ರದೇಶ; ಮತ್ತು ದೆಹಲಿಯ ಹಲವಾರು ಸ್ಥಳಗಳಲ್ಲಿ ದಾಳಿಗಳು ನಡೆದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಂಗಳವಾರ ಮುಂಜಾನೆಯೇ ದಾಳಿ ಆರಂಭವಾಗಿದ್ದು, ಅದು ಮುಂದುವರಿದಿದೆ. ಕೆಲವು ರಾಜ್ಯಗಳಲ್ಲಿ ತಮ್ಮ ಸೂಚನೆಯ ಮೇರೆಗೆ ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿ ‘ಸೆರಗು’ ಧರಿಸುತ್ತಾರೆ, ಅದು ಪಿಎಫ್‌ಐನ ಪಿತೂರಿಯೇ?: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ವಿಶೇಷ ಶಾಖೆ) ಹಿರೇನ್ ನಾಥ್ ಅವರು ನಗರ್‌ಬೆರಾ ಪ್ರದೇಶದಿಂದ ಐವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಅಸ್ಸಾಂನ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ. ಎನ್‌ಐಎ ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 11 ಮಂದಿಯನ್ನು ಬಂಧಿಸಲಾಗಿತ್ತು.

ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. “ನಾವು ಅವರನ್ನು  ಪರಿಶೀಲನೆ ಮಾಡುತ್ತಿದ್ದೇವೆ. ಸದ್ಯಕ್ಕೆ ಅವರಲ್ಲಿ ಯಾರೊಬ್ಬರ ವಿರುದ್ಧವೂ ಯಾವುದೇ ಬಂಧನ ಮೆಮೊಗಳನ್ನು ದಾಖಲಿಸಲಾಗಿಲ್ಲ. ಅವರು ಪಿಎಫ್‌ಐ ಸದಸ್ಯರಿದ್ದು, ಈ ಹಿಂದೆ ಬಂಧಿತರಾದ ಪಿಎಫ್‌ಐ ಸದಸ್ಯರನ್ನು ಪ್ರಶ್ನಿಸಿದ ನಂತರ ನಮಗೆ ಹೊಸ ಮಾಹಿತಿ ಸಿಕ್ಕಿತ್ತು. ಹೀಗಾಗಿ ದಾಳಿ ನಡೆಸುತ್ತಿದ್ದೇವೆ” ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಔರಂಗಾಬಾದ್, ಜಲನಾ ಮತ್ತು ಪರ್ಭಾನಿ ಜಿಲ್ಲೆಗಳಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಸ್ಥಳೀಯ ಪೊಲೀಸರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಥರದ ಸಂಘಟನೆಗಳನ್ನು ನಿಷೇಧಿಸಿ: ಸರ್ವಧರ್ಮ ಸಮ್ಮೇಳನದಲ್ಲಿ ಸೂಫಿ ಸಂಸ್ಥೆ ಒತ್ತಾಯ

ಕರ್ನಾಟಕದ ಶಿವಮೊಗ್ಗ, ಬೀದರ್, ಬಳ್ಳಾರಿ, ಹುಬ್ಬಳ್ಳಿ, ಕಲಬುರಗಿ ಭಾಗದಲ್ಲಿ ದಾಳಿ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಐವರು, ಬಳ್ಳಾರಿಯಲ್ಲಿ ನಾಲ್ವರು, ಹುಬ್ಬಳ್ಳಿಯಲ್ಲಿ ಇಬ್ಬರು, ಕೋಲಾರ ಜಿಲ್ಲೆಯಿಂದ ಆರು ಮಂದಿಯನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲಾಧ್ಯಕ್ಷ ಮತ್ತು ಕಲಬುರಗಿ ಮಾಧ್ಯಮ ಸಂಯೋಜಕನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ, ನಿಜಾಮುದ್ದೀನ್, ರೋಹಿಣಿ, ಜಾಮಿಯಾ ಮತ್ತು ಶಾಹಿನ್ ಬಾಗ್‌ನಲ್ಲಿ ದಾಳಿಗಳು ನಡೆಯುತ್ತಿವೆ. ಬಂಧಿತ ಪಿಎಫ್‌ಐ ಸದಸ್ಯರ ವಿಚಾರಣೆ ವೇಳೆ ಎನ್‌ಐಎಗೆ ಹೊಸ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ವಾರದ ಆರಂಭದಲ್ಲಿ, ಪಿಎಫ್‌ಐನ 106 ಕ್ಕೂ ಹೆಚ್ಚು ಸದಸ್ಯರನ್ನು ಎನ್‌ಐಎ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಸೋಮವಾರ ಇಬ್ಬರು ಪಿಎಫ್‌ಐ ಸದಸ್ಯರ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಲಾಗಿದೆ. ಸದ್ಯಕ್ಕೆ, ಎನ್‌ಐಎ ಒಟ್ಟು 19 ಪಿಎಫ್‌ಐ ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ

“2010-2011ರಲ್ಲಿ ಸುಮಾರು 46 ಆರೋಪಿಗಳನ್ನು ಬಂಧಿಸಿ ನಂತರ ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಎನ್ಐಎ ಹೇಳಿದೆ” ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಸುಮಾರು 355 ಪಿಎಫ್‌ಐ ಸದಸ್ಯರ ವಿರುದ್ಧ ಈಗಾಗಲೇ ಎನ್‌ಐಎ ಚಾರ್ಜ್‌ಶೀಟ್ ಮಾಡಿದೆ.

ಪಿಎಫ್‌ಐ ವಿರುದ್ಧ ಎನ್‌ಐಎ ನಡೆಸುತ್ತಿರುವ ದಾಳಿಯು ಪೂರ್ವಾಗ್ರಹ ಪೀಡಿತವಾದದ್ದು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಅವರು, “ದಾಳಿಗೆ ಏನು ಕಾರಣ ಎಂಬ ಬಗ್ಗೆ ಎನ್‌ಐಎ ಏನೂ ಹೇಳುತ್ತಿಲ್ಲ. ಪೂರ್ವಾಗ್ರಹ ಪೀಡಿತರಾಗಿ ದಾಳಿ ನಡೆಸುತ್ತಿದೆ. ಮುನ್ಸೂಚನಾ ಕ್ರಮವಾಗಿ ಶಾಂತಿ ಕದಡುವ ಪ್ರಯತ್ನ ಆಗಬಹುದು ಎಂದು ಐಪಿಸಿ 107 ಅಡಿಯಲ್ಲಿ ಬಂಧಿಸುತ್ತಿದ್ದಾರೆ” ಎಂದು ಹೇಳಿದರು.

“ಆರೆಸ್ಸೆಸ್‌ ಮತ್ತು ಬಜರಂಗದಳ ಇಲ್ಲಿವರೆಗೆ ಬಹಿರಂಗವಾಗಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸುತ್ತಿದೆ. ವಿಜಯದಶಮಿ ದಿನ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಸಾವಿರಾರು ಶಸ್ತ್ರಾಸ್ತ್ರಗಳನ್ನು ಜೋಡಿಸಿಕೊಂಡು ಪೂಜೆ ಮಾಡುತ್ತಾರೆ. ಈ ಶಸ್ತ್ರಾಸ್ತ್ರಗಳ ಲೈಸನ್ಸ್‌ ಯಾರ ಹೆಸರಿನಲ್ಲಿದೆ ಎಂಬುವುದನ್ನು ಎನ್‌ಐಎ ಇಲ್ಲಿವರೆಗೂ ಪ್ರಶ್ನೆ ಮಾಡಿಲ್ಲ” ಎಂದು ಭಾಸ್ಕರ್‌ ಪ್ರಸಾದ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪ್ಪಿನಂಗಡಿ ಅಶಾಂತಿ ಪ್ರಕರಣಕ್ಕೆ ಪಿಎಫ್‌ಐ, ಸಂಘ ಪರಿವಾರ, ಪೊಲೀಸರು ಸಮಾನ ಹೊಣೆಗಾರರು- ಸಿಪಿಐ(ಎಂ)

“ಪಿಎಫ್‌ಐ ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಪೆನ್ನು, ಪೇಪರ್‌, ಕಂಪ್ಯೂಟರ್‌ಗಳು ಬಿಟ್ಟರೆ ಈವರೆಗೂ ಒಂದು ರೇಝರ್‌ ಕೂಡಾ ಎನ್‌ಐಎ‌ಗೆ ಸಿಕ್ಕಿಲ್ಲ. ಆದರೆ ಮಾಧ್ಯಮಗಳು ಮಾತ್ರ ಭಯಂಕರವಾಗಿರುವು ಏನೋ ಸಿಕ್ಕಿದೆ ಎಂದು ಹೇಳುತ್ತಿವೆ. ಆದರೆ ಅದು ಏನು ಎಂದು ಅವುಗಳು ಹೇಳುತ್ತಿಲ್ಲ. ಅಷ್ಟೆ ಅಲ್ಲದೆ, ಎನ್‌ಐಎ ಕೂಡಾ ಒಂದೇ ಒಂದು ಸಣ್ಣ ವಿಚಾರವನ್ನು ಅಧೀಕೃತವಾಗಿ ಬಹಿರಂಗಪಡಿಸಿಲ್ಲ. ಆದರೆ ಮಾಧ್ಯಮಗಳು ಮಾತ್ರ ಎನ್‌ಐಎ ಹೇಳದೆ ಇರುವುದನ್ನು ಮಾಧ್ಯಮಗಳು ಹೇಳುತ್ತಿವೆ. ಯಾಕೆಂದರೆ ಈ ಮಾಧ್ಯಮಗಳು ಎಲ್ಲವೂ ಬಿಜೆಪಿ ಸಾಕಿಕೊಂಡಿರುವವುಗಳಾಗಿವೆ” ಎಂದು ಭಾಸ್ಕರ್‌ ಪ್ರಸಾದ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...