Homeಮುಖಪುಟ25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

- Advertisement -
- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದ ಹೈಕೋರ್ಟ್‌ ವಕೀಲರು ಸೇರಿದಂತೆ ಅನೇಕ ನಾಗರಿಕ ಹಕ್ಕುಗಳ ಹೋರಾಟಗಾರರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ. ಕಾನೂನುಬಾಹಿರ ಮಾವೋವಾದಿ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಹೋರಾಟದ ದನಿಗಳನ್ನು ಹತ್ತಿಕ್ಕುವ ಪ್ರಯತ್ನ ಇದು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರರು, ಸ್ತ್ರೀವಾದಿ ಹೋರಾಟಗಾರರು, ಪ್ರಗತಿಪರ ಸಾಹಿತಿಗಳು ಮತ್ತು ವಕೀಲರು ಸೇರಿದಂತೆ 25 ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ. ಅವರ ಫೋನ್‌ಗಳು, ಕಂಪ್ಯೂಟರ್‌ಗಳು, ಲ್ಯಾಪ್‌ಟಾಪ್‌ಗಳು, ಕೆಲವು ಪುಸ್ತಕಗಳು ಮತ್ತು ಪೇಪರ್‌ಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ.

ಹೈದರಾಬಾದ್‌ನಲ್ಲಿ ಖ್ಯಾತ ಹೈಕೋರ್ಟ್ ವಕೀಲ ಮತ್ತು ನಾಗರಿಕ ಹಕ್ಕುಗಳ ಸಮಿತಿಯ ಉಪಾಧ್ಯಕ್ಷ ವಿ ರಘುನಾಥ್ ಅವರ ನಿವಾಸ ಸೇರಿದಂತೆ ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ನ್ಯೂಸ್ ಮೀಟರ್ ವರದಿ ಮಾಡಿದೆ.

ಆಂಧ್ರಪ್ರದೇಶದಲ್ಲಿ ಕಡಪಾ ಜಿಲ್ಲೆಯ ವಿರಸಂ (ಕ್ರಾಂತಿಕಾರಿ ಬರಹಗಾರರ ಸಂಘ) ಮಾಜಿ ಕಾರ್ಯದರ್ಶಿ ವರಲಕ್ಷ್ಮಿ ಅವರ ನಿವಾಸದಲ್ಲಿ ಶೋಧ ನಡೆಸಲಾಯಿತು. ಕರ್ನೂಲ್ ಮತ್ತು ಗುಂಟೂರು ಜಿಲ್ಲೆಗಳಲ್ಲೂ ಶೋಧ ನಡೆಸಲಾಗಿದೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮಾರ್ಚ್ 2021 ರಲ್ಲಿ ಎನ್ಐಎ ನೋಂದಾಯಿಸಿದ ಪ್ರಕರಣಕ್ಕೆ ಈ ದಾಳಿಗಳು ಸಂಬಂಧಿಸಿದೆ. 2020 ರ ನವೆಂಬರ್‌ನಲ್ಲಿ ಆಂಧ್ರಪ್ರದೇಶ ಪೊಲೀಸರು 64 ಜನರ ವಿರುದ್ಧ ವಿಶಾಖಪಟ್ಟಣಂ ಜಿಲ್ಲೆಯ ಮಂಚಿಂಗ್‌ಪುಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮಾವೋವಾದಿ ಬೆಂಬಲಿಗ ಎಂದು ಪತ್ರಕರ್ತ ಮತ್ತು ಪಂಗಿ ನಾಗಣ್ಣ ಅವರನ್ನು ಬಂಧಿಸಿದ್ದರು.

ಮಾವೋವಾದಿ ಸಾಹಿತ್ಯ, ಪತ್ರಿಕಾ ಟಿಪ್ಪಣಿಗಳು, ಔಷಧಿಗಳು, ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಪೊಲೀಸರು 63 ಇತರರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಿದ್ದರು.

ನಂತರ ಎನ್‌ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತು. ತನಿಖೆಯ ಭಾಗವಾಗಿ ಎನ್‌ಐಎ ಶೋಧ ನಡೆಸಿತು. ಶೋಧಗಳು ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಗಿ ತಡರಾತ್ರಿಯವರೆಗೂ ಮುಂದುವರೆದವು.

“ಅನ್ಯಾಯದ ವಿರುದ್ಧ ಎದ್ದಿರುವ ಮತ್ತು ಸರ್ಕಾರವನ್ನು ಪ್ರಶ್ನಿಸುವ ದನಿಗಳನ್ನು ಅಡಗಿಸುವ ಪ್ರಯತ್ನ ಇದು. ಈಗ ದಾಳಿಗೆ ಒಳಗಾಗಿರುವವರೆಲ್ಲರೂ ತೆಲಂಗಾಣ ಮತ್ತು ಆಂದ್ರಪ್ರದೇಶ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳು ಮತ್ತು ಅಕ್ರಮ ಬಂಧನಗಳ ವಿರುದ್ಧ ಹೋರಾಡಿದವರು. ಜೊತೆಗೆ ಮಹಿಳೆಯರ ವಿರುದ್ಧದ ಹಿಂಸಾಚಾರ, ಜಾತಿ, ಪಿತೃಪ್ರಧಾನತೆಯ ಹಿಂಸಾಚಾರ, ಮುಸ್ಲಿಮರ ವಿರುದ್ಧ ಹಿಂದುತ್ವ ಪಡೆಗಳ ಅಧಿಪತ್ಯದ ದಾಳಿ, ಜನರ ಭೂಮಿ ಮತ್ತು ಅರಣ್ಯ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ಇತರೆ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದವರು” ಎಂದು ಪಿಯುಸಿಎಲ್‌ನ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಇವರ ವಿರುದ್ಧ ಅಕ್ರಮ ಪ್ರಕರಣಗಳನ್ನು ದಾಖಲಿಸಿ, ಯುಎಪಿಎ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ಹಾಕಿರುವ ವೈ ಎಸ್ ಜಗನ್‌ಮೋಹನ್ ರೆಡ್ಡಿ ಸರ್ಕಾರದ ಕ್ರಮ ಸರಿಯಲ್ಲ. ಇದು ಹೋರಾಟಗಾರರನ್ನು ತಡೆಯಲು ಸರ್ಕಾರ ಮಾಡಿರುವ ಅತ್ಯಂತ ಕೆಟ್ಟ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ಎಎನ್‌ಐ ದಾಳಿಗೆ ಒಳಗಾದವರು:

ಕ್ರಾಂತಿಕಾರಿ ಬರಹಗಾರರ ಸಂಘದ ಸದಸ್ಯರು: 1. ಪಾನಿ, (ಕರ್ನೂಲ್ ಜಿಲ್ಲೆ), 2. ವರಲಕ್ಷ್ಮಿ (ಕಡಪ ಜಿಲ್ಲೆ), 3. ಅರುಣ್ (ಕರ್ನೂಲ್ ಜಿಲ್ಲೆ).

ಚೈತನ್ಯ ಮಹಿಳಾ ಸಂಗಮ್ ಸದಸ್ಯರು: 4. ದೇವೇಂದ್ರ, 5. ಶಿಲ್ಪಾ, 6. ಸ್ವಪ್ನಾ, 7. ರಾಜೇಶ್ವರಿ (ಗುಂಟೂರು), 8. ಪದ್ಮ (ವಿಶಾಖಪಟ್ಟಣಂ).

ಆಂಧ್ರಪ್ರದೇಶ ನಾಗರಿಕ ಸ್ವಾತಂತ್ರ್ಯ ಸಮಿತಿ (ಎಪಿಸಿಎಲ್ಸಿ): 9. ರಘುನಾಥ್, (ಹೈದರಾಬಾದ್, 10. ಚಿಲಿಕ ಚಂದ್ರಶೇಖರ್ (ಗುಂಟೂರು ಜಿಲ್ಲೆ), 11. ಚಿಟ್ಟಿ ಬಾಬು (ಪೂರ್ವ ಗೋದಾವರಿ).

ಮಾನವ ಹಕ್ಕುಗಳ ವೇದಿಕೆ: (ಎಚ್‌ಆರ್‌ಎಫ್), 12, ಕೃಷ್ಣ (ವಿಶಾಖಪಟ್ಟಣಂ)

ಪ್ರಜಾಕಲಾ ಮಂಡಳಿ: 13. ಡಪ್ಪು ರಮೇಶ್ (ಹೈದರಾಬಾದ್)

ಅಮರುಲಾ ಬಂಧು ಮಿತ್ರುಲಾ ಸಂಘಂ, ಮಾರ್ಕ್ಸ್‌ವಾದಿ ಸ್ನೇಹಿತರು ಮತ್ತು ಸಂಬಂಧಿಗಳು (ಎಬಿಎಂಎಸ್) 14. ಅಂಜಮ್ಮ (ಪ್ರಕಾಶಂ ಜಿಲ್ಲೆ), 15. ಸಿರಿಶಾ (ಪ್ರಕಾಶಂ ಜಿಲ್ಲೆ).

ವಕೀಲ: 16. ಕೆ.ಎಸ್.ಚೆಲಂ (ವಿಶಾಖಪಟ್ಟಣಂನ) ಮತ್ತು ಇತರರು.


ಇದನ್ನೂ ಓದಿ: ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...