Homeಮುಖಪುಟ25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

- Advertisement -
- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದ ಹೈಕೋರ್ಟ್‌ ವಕೀಲರು ಸೇರಿದಂತೆ ಅನೇಕ ನಾಗರಿಕ ಹಕ್ಕುಗಳ ಹೋರಾಟಗಾರರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ. ಕಾನೂನುಬಾಹಿರ ಮಾವೋವಾದಿ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಹೋರಾಟದ ದನಿಗಳನ್ನು ಹತ್ತಿಕ್ಕುವ ಪ್ರಯತ್ನ ಇದು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರರು, ಸ್ತ್ರೀವಾದಿ ಹೋರಾಟಗಾರರು, ಪ್ರಗತಿಪರ ಸಾಹಿತಿಗಳು ಮತ್ತು ವಕೀಲರು ಸೇರಿದಂತೆ 25 ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ. ಅವರ ಫೋನ್‌ಗಳು, ಕಂಪ್ಯೂಟರ್‌ಗಳು, ಲ್ಯಾಪ್‌ಟಾಪ್‌ಗಳು, ಕೆಲವು ಪುಸ್ತಕಗಳು ಮತ್ತು ಪೇಪರ್‌ಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ.

ಹೈದರಾಬಾದ್‌ನಲ್ಲಿ ಖ್ಯಾತ ಹೈಕೋರ್ಟ್ ವಕೀಲ ಮತ್ತು ನಾಗರಿಕ ಹಕ್ಕುಗಳ ಸಮಿತಿಯ ಉಪಾಧ್ಯಕ್ಷ ವಿ ರಘುನಾಥ್ ಅವರ ನಿವಾಸ ಸೇರಿದಂತೆ ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ನ್ಯೂಸ್ ಮೀಟರ್ ವರದಿ ಮಾಡಿದೆ.

ಆಂಧ್ರಪ್ರದೇಶದಲ್ಲಿ ಕಡಪಾ ಜಿಲ್ಲೆಯ ವಿರಸಂ (ಕ್ರಾಂತಿಕಾರಿ ಬರಹಗಾರರ ಸಂಘ) ಮಾಜಿ ಕಾರ್ಯದರ್ಶಿ ವರಲಕ್ಷ್ಮಿ ಅವರ ನಿವಾಸದಲ್ಲಿ ಶೋಧ ನಡೆಸಲಾಯಿತು. ಕರ್ನೂಲ್ ಮತ್ತು ಗುಂಟೂರು ಜಿಲ್ಲೆಗಳಲ್ಲೂ ಶೋಧ ನಡೆಸಲಾಗಿದೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮಾರ್ಚ್ 2021 ರಲ್ಲಿ ಎನ್ಐಎ ನೋಂದಾಯಿಸಿದ ಪ್ರಕರಣಕ್ಕೆ ಈ ದಾಳಿಗಳು ಸಂಬಂಧಿಸಿದೆ. 2020 ರ ನವೆಂಬರ್‌ನಲ್ಲಿ ಆಂಧ್ರಪ್ರದೇಶ ಪೊಲೀಸರು 64 ಜನರ ವಿರುದ್ಧ ವಿಶಾಖಪಟ್ಟಣಂ ಜಿಲ್ಲೆಯ ಮಂಚಿಂಗ್‌ಪುಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮಾವೋವಾದಿ ಬೆಂಬಲಿಗ ಎಂದು ಪತ್ರಕರ್ತ ಮತ್ತು ಪಂಗಿ ನಾಗಣ್ಣ ಅವರನ್ನು ಬಂಧಿಸಿದ್ದರು.

ಮಾವೋವಾದಿ ಸಾಹಿತ್ಯ, ಪತ್ರಿಕಾ ಟಿಪ್ಪಣಿಗಳು, ಔಷಧಿಗಳು, ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಪೊಲೀಸರು 63 ಇತರರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಿದ್ದರು.

ನಂತರ ಎನ್‌ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತು. ತನಿಖೆಯ ಭಾಗವಾಗಿ ಎನ್‌ಐಎ ಶೋಧ ನಡೆಸಿತು. ಶೋಧಗಳು ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಗಿ ತಡರಾತ್ರಿಯವರೆಗೂ ಮುಂದುವರೆದವು.

“ಅನ್ಯಾಯದ ವಿರುದ್ಧ ಎದ್ದಿರುವ ಮತ್ತು ಸರ್ಕಾರವನ್ನು ಪ್ರಶ್ನಿಸುವ ದನಿಗಳನ್ನು ಅಡಗಿಸುವ ಪ್ರಯತ್ನ ಇದು. ಈಗ ದಾಳಿಗೆ ಒಳಗಾಗಿರುವವರೆಲ್ಲರೂ ತೆಲಂಗಾಣ ಮತ್ತು ಆಂದ್ರಪ್ರದೇಶ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳು ಮತ್ತು ಅಕ್ರಮ ಬಂಧನಗಳ ವಿರುದ್ಧ ಹೋರಾಡಿದವರು. ಜೊತೆಗೆ ಮಹಿಳೆಯರ ವಿರುದ್ಧದ ಹಿಂಸಾಚಾರ, ಜಾತಿ, ಪಿತೃಪ್ರಧಾನತೆಯ ಹಿಂಸಾಚಾರ, ಮುಸ್ಲಿಮರ ವಿರುದ್ಧ ಹಿಂದುತ್ವ ಪಡೆಗಳ ಅಧಿಪತ್ಯದ ದಾಳಿ, ಜನರ ಭೂಮಿ ಮತ್ತು ಅರಣ್ಯ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ಇತರೆ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದವರು” ಎಂದು ಪಿಯುಸಿಎಲ್‌ನ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಇವರ ವಿರುದ್ಧ ಅಕ್ರಮ ಪ್ರಕರಣಗಳನ್ನು ದಾಖಲಿಸಿ, ಯುಎಪಿಎ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ಹಾಕಿರುವ ವೈ ಎಸ್ ಜಗನ್‌ಮೋಹನ್ ರೆಡ್ಡಿ ಸರ್ಕಾರದ ಕ್ರಮ ಸರಿಯಲ್ಲ. ಇದು ಹೋರಾಟಗಾರರನ್ನು ತಡೆಯಲು ಸರ್ಕಾರ ಮಾಡಿರುವ ಅತ್ಯಂತ ಕೆಟ್ಟ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ಎಎನ್‌ಐ ದಾಳಿಗೆ ಒಳಗಾದವರು:

ಕ್ರಾಂತಿಕಾರಿ ಬರಹಗಾರರ ಸಂಘದ ಸದಸ್ಯರು: 1. ಪಾನಿ, (ಕರ್ನೂಲ್ ಜಿಲ್ಲೆ), 2. ವರಲಕ್ಷ್ಮಿ (ಕಡಪ ಜಿಲ್ಲೆ), 3. ಅರುಣ್ (ಕರ್ನೂಲ್ ಜಿಲ್ಲೆ).

ಚೈತನ್ಯ ಮಹಿಳಾ ಸಂಗಮ್ ಸದಸ್ಯರು: 4. ದೇವೇಂದ್ರ, 5. ಶಿಲ್ಪಾ, 6. ಸ್ವಪ್ನಾ, 7. ರಾಜೇಶ್ವರಿ (ಗುಂಟೂರು), 8. ಪದ್ಮ (ವಿಶಾಖಪಟ್ಟಣಂ).

ಆಂಧ್ರಪ್ರದೇಶ ನಾಗರಿಕ ಸ್ವಾತಂತ್ರ್ಯ ಸಮಿತಿ (ಎಪಿಸಿಎಲ್ಸಿ): 9. ರಘುನಾಥ್, (ಹೈದರಾಬಾದ್, 10. ಚಿಲಿಕ ಚಂದ್ರಶೇಖರ್ (ಗುಂಟೂರು ಜಿಲ್ಲೆ), 11. ಚಿಟ್ಟಿ ಬಾಬು (ಪೂರ್ವ ಗೋದಾವರಿ).

ಮಾನವ ಹಕ್ಕುಗಳ ವೇದಿಕೆ: (ಎಚ್‌ಆರ್‌ಎಫ್), 12, ಕೃಷ್ಣ (ವಿಶಾಖಪಟ್ಟಣಂ)

ಪ್ರಜಾಕಲಾ ಮಂಡಳಿ: 13. ಡಪ್ಪು ರಮೇಶ್ (ಹೈದರಾಬಾದ್)

ಅಮರುಲಾ ಬಂಧು ಮಿತ್ರುಲಾ ಸಂಘಂ, ಮಾರ್ಕ್ಸ್‌ವಾದಿ ಸ್ನೇಹಿತರು ಮತ್ತು ಸಂಬಂಧಿಗಳು (ಎಬಿಎಂಎಸ್) 14. ಅಂಜಮ್ಮ (ಪ್ರಕಾಶಂ ಜಿಲ್ಲೆ), 15. ಸಿರಿಶಾ (ಪ್ರಕಾಶಂ ಜಿಲ್ಲೆ).

ವಕೀಲ: 16. ಕೆ.ಎಸ್.ಚೆಲಂ (ವಿಶಾಖಪಟ್ಟಣಂನ) ಮತ್ತು ಇತರರು.


ಇದನ್ನೂ ಓದಿ: ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...