Homeಮುಖಪುಟ25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

- Advertisement -
- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದ ಹೈಕೋರ್ಟ್‌ ವಕೀಲರು ಸೇರಿದಂತೆ ಅನೇಕ ನಾಗರಿಕ ಹಕ್ಕುಗಳ ಹೋರಾಟಗಾರರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ. ಕಾನೂನುಬಾಹಿರ ಮಾವೋವಾದಿ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಹೋರಾಟದ ದನಿಗಳನ್ನು ಹತ್ತಿಕ್ಕುವ ಪ್ರಯತ್ನ ಇದು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರರು, ಸ್ತ್ರೀವಾದಿ ಹೋರಾಟಗಾರರು, ಪ್ರಗತಿಪರ ಸಾಹಿತಿಗಳು ಮತ್ತು ವಕೀಲರು ಸೇರಿದಂತೆ 25 ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ. ಅವರ ಫೋನ್‌ಗಳು, ಕಂಪ್ಯೂಟರ್‌ಗಳು, ಲ್ಯಾಪ್‌ಟಾಪ್‌ಗಳು, ಕೆಲವು ಪುಸ್ತಕಗಳು ಮತ್ತು ಪೇಪರ್‌ಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ.

ಹೈದರಾಬಾದ್‌ನಲ್ಲಿ ಖ್ಯಾತ ಹೈಕೋರ್ಟ್ ವಕೀಲ ಮತ್ತು ನಾಗರಿಕ ಹಕ್ಕುಗಳ ಸಮಿತಿಯ ಉಪಾಧ್ಯಕ್ಷ ವಿ ರಘುನಾಥ್ ಅವರ ನಿವಾಸ ಸೇರಿದಂತೆ ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ನ್ಯೂಸ್ ಮೀಟರ್ ವರದಿ ಮಾಡಿದೆ.

ಆಂಧ್ರಪ್ರದೇಶದಲ್ಲಿ ಕಡಪಾ ಜಿಲ್ಲೆಯ ವಿರಸಂ (ಕ್ರಾಂತಿಕಾರಿ ಬರಹಗಾರರ ಸಂಘ) ಮಾಜಿ ಕಾರ್ಯದರ್ಶಿ ವರಲಕ್ಷ್ಮಿ ಅವರ ನಿವಾಸದಲ್ಲಿ ಶೋಧ ನಡೆಸಲಾಯಿತು. ಕರ್ನೂಲ್ ಮತ್ತು ಗುಂಟೂರು ಜಿಲ್ಲೆಗಳಲ್ಲೂ ಶೋಧ ನಡೆಸಲಾಗಿದೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮಾರ್ಚ್ 2021 ರಲ್ಲಿ ಎನ್ಐಎ ನೋಂದಾಯಿಸಿದ ಪ್ರಕರಣಕ್ಕೆ ಈ ದಾಳಿಗಳು ಸಂಬಂಧಿಸಿದೆ. 2020 ರ ನವೆಂಬರ್‌ನಲ್ಲಿ ಆಂಧ್ರಪ್ರದೇಶ ಪೊಲೀಸರು 64 ಜನರ ವಿರುದ್ಧ ವಿಶಾಖಪಟ್ಟಣಂ ಜಿಲ್ಲೆಯ ಮಂಚಿಂಗ್‌ಪುಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮಾವೋವಾದಿ ಬೆಂಬಲಿಗ ಎಂದು ಪತ್ರಕರ್ತ ಮತ್ತು ಪಂಗಿ ನಾಗಣ್ಣ ಅವರನ್ನು ಬಂಧಿಸಿದ್ದರು.

ಮಾವೋವಾದಿ ಸಾಹಿತ್ಯ, ಪತ್ರಿಕಾ ಟಿಪ್ಪಣಿಗಳು, ಔಷಧಿಗಳು, ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಪೊಲೀಸರು 63 ಇತರರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಿದ್ದರು.

ನಂತರ ಎನ್‌ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತು. ತನಿಖೆಯ ಭಾಗವಾಗಿ ಎನ್‌ಐಎ ಶೋಧ ನಡೆಸಿತು. ಶೋಧಗಳು ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಗಿ ತಡರಾತ್ರಿಯವರೆಗೂ ಮುಂದುವರೆದವು.

“ಅನ್ಯಾಯದ ವಿರುದ್ಧ ಎದ್ದಿರುವ ಮತ್ತು ಸರ್ಕಾರವನ್ನು ಪ್ರಶ್ನಿಸುವ ದನಿಗಳನ್ನು ಅಡಗಿಸುವ ಪ್ರಯತ್ನ ಇದು. ಈಗ ದಾಳಿಗೆ ಒಳಗಾಗಿರುವವರೆಲ್ಲರೂ ತೆಲಂಗಾಣ ಮತ್ತು ಆಂದ್ರಪ್ರದೇಶ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳು ಮತ್ತು ಅಕ್ರಮ ಬಂಧನಗಳ ವಿರುದ್ಧ ಹೋರಾಡಿದವರು. ಜೊತೆಗೆ ಮಹಿಳೆಯರ ವಿರುದ್ಧದ ಹಿಂಸಾಚಾರ, ಜಾತಿ, ಪಿತೃಪ್ರಧಾನತೆಯ ಹಿಂಸಾಚಾರ, ಮುಸ್ಲಿಮರ ವಿರುದ್ಧ ಹಿಂದುತ್ವ ಪಡೆಗಳ ಅಧಿಪತ್ಯದ ದಾಳಿ, ಜನರ ಭೂಮಿ ಮತ್ತು ಅರಣ್ಯ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ಇತರೆ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದವರು” ಎಂದು ಪಿಯುಸಿಎಲ್‌ನ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಇವರ ವಿರುದ್ಧ ಅಕ್ರಮ ಪ್ರಕರಣಗಳನ್ನು ದಾಖಲಿಸಿ, ಯುಎಪಿಎ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ಹಾಕಿರುವ ವೈ ಎಸ್ ಜಗನ್‌ಮೋಹನ್ ರೆಡ್ಡಿ ಸರ್ಕಾರದ ಕ್ರಮ ಸರಿಯಲ್ಲ. ಇದು ಹೋರಾಟಗಾರರನ್ನು ತಡೆಯಲು ಸರ್ಕಾರ ಮಾಡಿರುವ ಅತ್ಯಂತ ಕೆಟ್ಟ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ಎಎನ್‌ಐ ದಾಳಿಗೆ ಒಳಗಾದವರು:

ಕ್ರಾಂತಿಕಾರಿ ಬರಹಗಾರರ ಸಂಘದ ಸದಸ್ಯರು: 1. ಪಾನಿ, (ಕರ್ನೂಲ್ ಜಿಲ್ಲೆ), 2. ವರಲಕ್ಷ್ಮಿ (ಕಡಪ ಜಿಲ್ಲೆ), 3. ಅರುಣ್ (ಕರ್ನೂಲ್ ಜಿಲ್ಲೆ).

ಚೈತನ್ಯ ಮಹಿಳಾ ಸಂಗಮ್ ಸದಸ್ಯರು: 4. ದೇವೇಂದ್ರ, 5. ಶಿಲ್ಪಾ, 6. ಸ್ವಪ್ನಾ, 7. ರಾಜೇಶ್ವರಿ (ಗುಂಟೂರು), 8. ಪದ್ಮ (ವಿಶಾಖಪಟ್ಟಣಂ).

ಆಂಧ್ರಪ್ರದೇಶ ನಾಗರಿಕ ಸ್ವಾತಂತ್ರ್ಯ ಸಮಿತಿ (ಎಪಿಸಿಎಲ್ಸಿ): 9. ರಘುನಾಥ್, (ಹೈದರಾಬಾದ್, 10. ಚಿಲಿಕ ಚಂದ್ರಶೇಖರ್ (ಗುಂಟೂರು ಜಿಲ್ಲೆ), 11. ಚಿಟ್ಟಿ ಬಾಬು (ಪೂರ್ವ ಗೋದಾವರಿ).

ಮಾನವ ಹಕ್ಕುಗಳ ವೇದಿಕೆ: (ಎಚ್‌ಆರ್‌ಎಫ್), 12, ಕೃಷ್ಣ (ವಿಶಾಖಪಟ್ಟಣಂ)

ಪ್ರಜಾಕಲಾ ಮಂಡಳಿ: 13. ಡಪ್ಪು ರಮೇಶ್ (ಹೈದರಾಬಾದ್)

ಅಮರುಲಾ ಬಂಧು ಮಿತ್ರುಲಾ ಸಂಘಂ, ಮಾರ್ಕ್ಸ್‌ವಾದಿ ಸ್ನೇಹಿತರು ಮತ್ತು ಸಂಬಂಧಿಗಳು (ಎಬಿಎಂಎಸ್) 14. ಅಂಜಮ್ಮ (ಪ್ರಕಾಶಂ ಜಿಲ್ಲೆ), 15. ಸಿರಿಶಾ (ಪ್ರಕಾಶಂ ಜಿಲ್ಲೆ).

ವಕೀಲ: 16. ಕೆ.ಎಸ್.ಚೆಲಂ (ವಿಶಾಖಪಟ್ಟಣಂನ) ಮತ್ತು ಇತರರು.


ಇದನ್ನೂ ಓದಿ: ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...