Homeಮುಖಪುಟ25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

- Advertisement -
- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದ ಹೈಕೋರ್ಟ್‌ ವಕೀಲರು ಸೇರಿದಂತೆ ಅನೇಕ ನಾಗರಿಕ ಹಕ್ಕುಗಳ ಹೋರಾಟಗಾರರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ. ಕಾನೂನುಬಾಹಿರ ಮಾವೋವಾದಿ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಹೋರಾಟದ ದನಿಗಳನ್ನು ಹತ್ತಿಕ್ಕುವ ಪ್ರಯತ್ನ ಇದು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರರು, ಸ್ತ್ರೀವಾದಿ ಹೋರಾಟಗಾರರು, ಪ್ರಗತಿಪರ ಸಾಹಿತಿಗಳು ಮತ್ತು ವಕೀಲರು ಸೇರಿದಂತೆ 25 ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ. ಅವರ ಫೋನ್‌ಗಳು, ಕಂಪ್ಯೂಟರ್‌ಗಳು, ಲ್ಯಾಪ್‌ಟಾಪ್‌ಗಳು, ಕೆಲವು ಪುಸ್ತಕಗಳು ಮತ್ತು ಪೇಪರ್‌ಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ.

ಹೈದರಾಬಾದ್‌ನಲ್ಲಿ ಖ್ಯಾತ ಹೈಕೋರ್ಟ್ ವಕೀಲ ಮತ್ತು ನಾಗರಿಕ ಹಕ್ಕುಗಳ ಸಮಿತಿಯ ಉಪಾಧ್ಯಕ್ಷ ವಿ ರಘುನಾಥ್ ಅವರ ನಿವಾಸ ಸೇರಿದಂತೆ ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ನ್ಯೂಸ್ ಮೀಟರ್ ವರದಿ ಮಾಡಿದೆ.

ಆಂಧ್ರಪ್ರದೇಶದಲ್ಲಿ ಕಡಪಾ ಜಿಲ್ಲೆಯ ವಿರಸಂ (ಕ್ರಾಂತಿಕಾರಿ ಬರಹಗಾರರ ಸಂಘ) ಮಾಜಿ ಕಾರ್ಯದರ್ಶಿ ವರಲಕ್ಷ್ಮಿ ಅವರ ನಿವಾಸದಲ್ಲಿ ಶೋಧ ನಡೆಸಲಾಯಿತು. ಕರ್ನೂಲ್ ಮತ್ತು ಗುಂಟೂರು ಜಿಲ್ಲೆಗಳಲ್ಲೂ ಶೋಧ ನಡೆಸಲಾಗಿದೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮಾರ್ಚ್ 2021 ರಲ್ಲಿ ಎನ್ಐಎ ನೋಂದಾಯಿಸಿದ ಪ್ರಕರಣಕ್ಕೆ ಈ ದಾಳಿಗಳು ಸಂಬಂಧಿಸಿದೆ. 2020 ರ ನವೆಂಬರ್‌ನಲ್ಲಿ ಆಂಧ್ರಪ್ರದೇಶ ಪೊಲೀಸರು 64 ಜನರ ವಿರುದ್ಧ ವಿಶಾಖಪಟ್ಟಣಂ ಜಿಲ್ಲೆಯ ಮಂಚಿಂಗ್‌ಪುಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮಾವೋವಾದಿ ಬೆಂಬಲಿಗ ಎಂದು ಪತ್ರಕರ್ತ ಮತ್ತು ಪಂಗಿ ನಾಗಣ್ಣ ಅವರನ್ನು ಬಂಧಿಸಿದ್ದರು.

ಮಾವೋವಾದಿ ಸಾಹಿತ್ಯ, ಪತ್ರಿಕಾ ಟಿಪ್ಪಣಿಗಳು, ಔಷಧಿಗಳು, ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಪೊಲೀಸರು 63 ಇತರರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಿದ್ದರು.

ನಂತರ ಎನ್‌ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತು. ತನಿಖೆಯ ಭಾಗವಾಗಿ ಎನ್‌ಐಎ ಶೋಧ ನಡೆಸಿತು. ಶೋಧಗಳು ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಗಿ ತಡರಾತ್ರಿಯವರೆಗೂ ಮುಂದುವರೆದವು.

“ಅನ್ಯಾಯದ ವಿರುದ್ಧ ಎದ್ದಿರುವ ಮತ್ತು ಸರ್ಕಾರವನ್ನು ಪ್ರಶ್ನಿಸುವ ದನಿಗಳನ್ನು ಅಡಗಿಸುವ ಪ್ರಯತ್ನ ಇದು. ಈಗ ದಾಳಿಗೆ ಒಳಗಾಗಿರುವವರೆಲ್ಲರೂ ತೆಲಂಗಾಣ ಮತ್ತು ಆಂದ್ರಪ್ರದೇಶ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳು ಮತ್ತು ಅಕ್ರಮ ಬಂಧನಗಳ ವಿರುದ್ಧ ಹೋರಾಡಿದವರು. ಜೊತೆಗೆ ಮಹಿಳೆಯರ ವಿರುದ್ಧದ ಹಿಂಸಾಚಾರ, ಜಾತಿ, ಪಿತೃಪ್ರಧಾನತೆಯ ಹಿಂಸಾಚಾರ, ಮುಸ್ಲಿಮರ ವಿರುದ್ಧ ಹಿಂದುತ್ವ ಪಡೆಗಳ ಅಧಿಪತ್ಯದ ದಾಳಿ, ಜನರ ಭೂಮಿ ಮತ್ತು ಅರಣ್ಯ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ಇತರೆ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದವರು” ಎಂದು ಪಿಯುಸಿಎಲ್‌ನ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಇವರ ವಿರುದ್ಧ ಅಕ್ರಮ ಪ್ರಕರಣಗಳನ್ನು ದಾಖಲಿಸಿ, ಯುಎಪಿಎ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ಹಾಕಿರುವ ವೈ ಎಸ್ ಜಗನ್‌ಮೋಹನ್ ರೆಡ್ಡಿ ಸರ್ಕಾರದ ಕ್ರಮ ಸರಿಯಲ್ಲ. ಇದು ಹೋರಾಟಗಾರರನ್ನು ತಡೆಯಲು ಸರ್ಕಾರ ಮಾಡಿರುವ ಅತ್ಯಂತ ಕೆಟ್ಟ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ಎಎನ್‌ಐ ದಾಳಿಗೆ ಒಳಗಾದವರು:

ಕ್ರಾಂತಿಕಾರಿ ಬರಹಗಾರರ ಸಂಘದ ಸದಸ್ಯರು: 1. ಪಾನಿ, (ಕರ್ನೂಲ್ ಜಿಲ್ಲೆ), 2. ವರಲಕ್ಷ್ಮಿ (ಕಡಪ ಜಿಲ್ಲೆ), 3. ಅರುಣ್ (ಕರ್ನೂಲ್ ಜಿಲ್ಲೆ).

ಚೈತನ್ಯ ಮಹಿಳಾ ಸಂಗಮ್ ಸದಸ್ಯರು: 4. ದೇವೇಂದ್ರ, 5. ಶಿಲ್ಪಾ, 6. ಸ್ವಪ್ನಾ, 7. ರಾಜೇಶ್ವರಿ (ಗುಂಟೂರು), 8. ಪದ್ಮ (ವಿಶಾಖಪಟ್ಟಣಂ).

ಆಂಧ್ರಪ್ರದೇಶ ನಾಗರಿಕ ಸ್ವಾತಂತ್ರ್ಯ ಸಮಿತಿ (ಎಪಿಸಿಎಲ್ಸಿ): 9. ರಘುನಾಥ್, (ಹೈದರಾಬಾದ್, 10. ಚಿಲಿಕ ಚಂದ್ರಶೇಖರ್ (ಗುಂಟೂರು ಜಿಲ್ಲೆ), 11. ಚಿಟ್ಟಿ ಬಾಬು (ಪೂರ್ವ ಗೋದಾವರಿ).

ಮಾನವ ಹಕ್ಕುಗಳ ವೇದಿಕೆ: (ಎಚ್‌ಆರ್‌ಎಫ್), 12, ಕೃಷ್ಣ (ವಿಶಾಖಪಟ್ಟಣಂ)

ಪ್ರಜಾಕಲಾ ಮಂಡಳಿ: 13. ಡಪ್ಪು ರಮೇಶ್ (ಹೈದರಾಬಾದ್)

ಅಮರುಲಾ ಬಂಧು ಮಿತ್ರುಲಾ ಸಂಘಂ, ಮಾರ್ಕ್ಸ್‌ವಾದಿ ಸ್ನೇಹಿತರು ಮತ್ತು ಸಂಬಂಧಿಗಳು (ಎಬಿಎಂಎಸ್) 14. ಅಂಜಮ್ಮ (ಪ್ರಕಾಶಂ ಜಿಲ್ಲೆ), 15. ಸಿರಿಶಾ (ಪ್ರಕಾಶಂ ಜಿಲ್ಲೆ).

ವಕೀಲ: 16. ಕೆ.ಎಸ್.ಚೆಲಂ (ವಿಶಾಖಪಟ್ಟಣಂನ) ಮತ್ತು ಇತರರು.


ಇದನ್ನೂ ಓದಿ: ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...