Homeಮುಖಪುಟ25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

25ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ NIA ದಾಳಿ: ತೀವ್ರ ಖಂಡನೆ

- Advertisement -
- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದ ಹೈಕೋರ್ಟ್‌ ವಕೀಲರು ಸೇರಿದಂತೆ ಅನೇಕ ನಾಗರಿಕ ಹಕ್ಕುಗಳ ಹೋರಾಟಗಾರರ ನಿವಾಸಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ. ಕಾನೂನುಬಾಹಿರ ಮಾವೋವಾದಿ ಪಕ್ಷಗಳೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ ಎಂದು ಸಂಸ್ಥೆ ಹೇಳಿದೆ. ಆದರೆ ಹೋರಾಟದ ದನಿಗಳನ್ನು ಹತ್ತಿಕ್ಕುವ ಪ್ರಯತ್ನ ಇದು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾನವ ಹಕ್ಕುಗಳ ಹೋರಾಟಗಾರರು, ಸ್ತ್ರೀವಾದಿ ಹೋರಾಟಗಾರರು, ಪ್ರಗತಿಪರ ಸಾಹಿತಿಗಳು ಮತ್ತು ವಕೀಲರು ಸೇರಿದಂತೆ 25 ಕ್ಕೂ ಹೆಚ್ಚು ಹೋರಾಟಗಾರರ ನಿವಾಸಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ. ಅವರ ಫೋನ್‌ಗಳು, ಕಂಪ್ಯೂಟರ್‌ಗಳು, ಲ್ಯಾಪ್‌ಟಾಪ್‌ಗಳು, ಕೆಲವು ಪುಸ್ತಕಗಳು ಮತ್ತು ಪೇಪರ್‌ಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ.

ಹೈದರಾಬಾದ್‌ನಲ್ಲಿ ಖ್ಯಾತ ಹೈಕೋರ್ಟ್ ವಕೀಲ ಮತ್ತು ನಾಗರಿಕ ಹಕ್ಕುಗಳ ಸಮಿತಿಯ ಉಪಾಧ್ಯಕ್ಷ ವಿ ರಘುನಾಥ್ ಅವರ ನಿವಾಸ ಸೇರಿದಂತೆ ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ನ್ಯೂಸ್ ಮೀಟರ್ ವರದಿ ಮಾಡಿದೆ.

ಆಂಧ್ರಪ್ರದೇಶದಲ್ಲಿ ಕಡಪಾ ಜಿಲ್ಲೆಯ ವಿರಸಂ (ಕ್ರಾಂತಿಕಾರಿ ಬರಹಗಾರರ ಸಂಘ) ಮಾಜಿ ಕಾರ್ಯದರ್ಶಿ ವರಲಕ್ಷ್ಮಿ ಅವರ ನಿವಾಸದಲ್ಲಿ ಶೋಧ ನಡೆಸಲಾಯಿತು. ಕರ್ನೂಲ್ ಮತ್ತು ಗುಂಟೂರು ಜಿಲ್ಲೆಗಳಲ್ಲೂ ಶೋಧ ನಡೆಸಲಾಗಿದೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ಮಾರ್ಚ್ 2021 ರಲ್ಲಿ ಎನ್ಐಎ ನೋಂದಾಯಿಸಿದ ಪ್ರಕರಣಕ್ಕೆ ಈ ದಾಳಿಗಳು ಸಂಬಂಧಿಸಿದೆ. 2020 ರ ನವೆಂಬರ್‌ನಲ್ಲಿ ಆಂಧ್ರಪ್ರದೇಶ ಪೊಲೀಸರು 64 ಜನರ ವಿರುದ್ಧ ವಿಶಾಖಪಟ್ಟಣಂ ಜಿಲ್ಲೆಯ ಮಂಚಿಂಗ್‌ಪುಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮಾವೋವಾದಿ ಬೆಂಬಲಿಗ ಎಂದು ಪತ್ರಕರ್ತ ಮತ್ತು ಪಂಗಿ ನಾಗಣ್ಣ ಅವರನ್ನು ಬಂಧಿಸಿದ್ದರು.

ಮಾವೋವಾದಿ ಸಾಹಿತ್ಯ, ಪತ್ರಿಕಾ ಟಿಪ್ಪಣಿಗಳು, ಔಷಧಿಗಳು, ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಪೊಲೀಸರು 63 ಇತರರನ್ನು ಪ್ರಕರಣದ ಆರೋಪಿಗಳೆಂದು ಹೆಸರಿಸಿದ್ದರು.

ನಂತರ ಎನ್‌ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತು. ತನಿಖೆಯ ಭಾಗವಾಗಿ ಎನ್‌ಐಎ ಶೋಧ ನಡೆಸಿತು. ಶೋಧಗಳು ಬುಧವಾರ ಸಂಜೆ 6 ಗಂಟೆಗೆ ಪ್ರಾರಂಭವಾಗಿ ತಡರಾತ್ರಿಯವರೆಗೂ ಮುಂದುವರೆದವು.

“ಅನ್ಯಾಯದ ವಿರುದ್ಧ ಎದ್ದಿರುವ ಮತ್ತು ಸರ್ಕಾರವನ್ನು ಪ್ರಶ್ನಿಸುವ ದನಿಗಳನ್ನು ಅಡಗಿಸುವ ಪ್ರಯತ್ನ ಇದು. ಈಗ ದಾಳಿಗೆ ಒಳಗಾಗಿರುವವರೆಲ್ಲರೂ ತೆಲಂಗಾಣ ಮತ್ತು ಆಂದ್ರಪ್ರದೇಶ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಕಾನೂನುಗಳು ಮತ್ತು ಅಕ್ರಮ ಬಂಧನಗಳ ವಿರುದ್ಧ ಹೋರಾಡಿದವರು. ಜೊತೆಗೆ ಮಹಿಳೆಯರ ವಿರುದ್ಧದ ಹಿಂಸಾಚಾರ, ಜಾತಿ, ಪಿತೃಪ್ರಧಾನತೆಯ ಹಿಂಸಾಚಾರ, ಮುಸ್ಲಿಮರ ವಿರುದ್ಧ ಹಿಂದುತ್ವ ಪಡೆಗಳ ಅಧಿಪತ್ಯದ ದಾಳಿ, ಜನರ ಭೂಮಿ ಮತ್ತು ಅರಣ್ಯ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ಇತರೆ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದವರು” ಎಂದು ಪಿಯುಸಿಎಲ್‌ನ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಇವರ ವಿರುದ್ಧ ಅಕ್ರಮ ಪ್ರಕರಣಗಳನ್ನು ದಾಖಲಿಸಿ, ಯುಎಪಿಎ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ಹಾಕಿರುವ ವೈ ಎಸ್ ಜಗನ್‌ಮೋಹನ್ ರೆಡ್ಡಿ ಸರ್ಕಾರದ ಕ್ರಮ ಸರಿಯಲ್ಲ. ಇದು ಹೋರಾಟಗಾರರನ್ನು ತಡೆಯಲು ಸರ್ಕಾರ ಮಾಡಿರುವ ಅತ್ಯಂತ ಕೆಟ್ಟ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ವಿಧಾನಸಭಾ ಚುನಾವಣೆ: ದ್ರಾವಿಡ ರಾಜಕೀಯಕ್ಕೆ ಹೊಸ ಸವಾಲುಗಳು!

ಎಎನ್‌ಐ ದಾಳಿಗೆ ಒಳಗಾದವರು:

ಕ್ರಾಂತಿಕಾರಿ ಬರಹಗಾರರ ಸಂಘದ ಸದಸ್ಯರು: 1. ಪಾನಿ, (ಕರ್ನೂಲ್ ಜಿಲ್ಲೆ), 2. ವರಲಕ್ಷ್ಮಿ (ಕಡಪ ಜಿಲ್ಲೆ), 3. ಅರುಣ್ (ಕರ್ನೂಲ್ ಜಿಲ್ಲೆ).

ಚೈತನ್ಯ ಮಹಿಳಾ ಸಂಗಮ್ ಸದಸ್ಯರು: 4. ದೇವೇಂದ್ರ, 5. ಶಿಲ್ಪಾ, 6. ಸ್ವಪ್ನಾ, 7. ರಾಜೇಶ್ವರಿ (ಗುಂಟೂರು), 8. ಪದ್ಮ (ವಿಶಾಖಪಟ್ಟಣಂ).

ಆಂಧ್ರಪ್ರದೇಶ ನಾಗರಿಕ ಸ್ವಾತಂತ್ರ್ಯ ಸಮಿತಿ (ಎಪಿಸಿಎಲ್ಸಿ): 9. ರಘುನಾಥ್, (ಹೈದರಾಬಾದ್, 10. ಚಿಲಿಕ ಚಂದ್ರಶೇಖರ್ (ಗುಂಟೂರು ಜಿಲ್ಲೆ), 11. ಚಿಟ್ಟಿ ಬಾಬು (ಪೂರ್ವ ಗೋದಾವರಿ).

ಮಾನವ ಹಕ್ಕುಗಳ ವೇದಿಕೆ: (ಎಚ್‌ಆರ್‌ಎಫ್), 12, ಕೃಷ್ಣ (ವಿಶಾಖಪಟ್ಟಣಂ)

ಪ್ರಜಾಕಲಾ ಮಂಡಳಿ: 13. ಡಪ್ಪು ರಮೇಶ್ (ಹೈದರಾಬಾದ್)

ಅಮರುಲಾ ಬಂಧು ಮಿತ್ರುಲಾ ಸಂಘಂ, ಮಾರ್ಕ್ಸ್‌ವಾದಿ ಸ್ನೇಹಿತರು ಮತ್ತು ಸಂಬಂಧಿಗಳು (ಎಬಿಎಂಎಸ್) 14. ಅಂಜಮ್ಮ (ಪ್ರಕಾಶಂ ಜಿಲ್ಲೆ), 15. ಸಿರಿಶಾ (ಪ್ರಕಾಶಂ ಜಿಲ್ಲೆ).

ವಕೀಲ: 16. ಕೆ.ಎಸ್.ಚೆಲಂ (ವಿಶಾಖಪಟ್ಟಣಂನ) ಮತ್ತು ಇತರರು.


ಇದನ್ನೂ ಓದಿ: ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...