Homeಮುಖಪುಟಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಕಾಶ್ಮೀರದಲ್ಲಿ ಎನ್‌ಐಎ ದಾಳಿಯಲ್ಲಿ ಆರು ಜನರ ಬಂಧನ

ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಕಾಶ್ಮೀರದಲ್ಲಿ ಎನ್‌ಐಎ ದಾಳಿಯಲ್ಲಿ ಆರು ಜನರ ಬಂಧನ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಉಗ್ರರ ಸಂಘಟನೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣಗಳಿಗೆ ಸಂಬಂಧಿಸಿ ಶ್ರೀನಗರ, ಅನಂತ್‌ನಾಗ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ದಾಳಿಯಲ್ಲಿ ಆರು ಜನರನ್ನು ಬಂಧಿಸಿದ್ದಾರೆ.

ಶನಿವಾರವಷ್ಟೇ ಜಮ್ಮು ಮತ್ತು ಕಾಶ್ಮೀರ ಸರ್ಕಾರ 11 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿತ್ತು. ವಜಾಗೊಳಿಸಿದ ನೌಕರರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲ್ಲಾಹುದ್ದೀನ್ ಅವರ ಇಬ್ಬರು ಪುತ್ರರಾದ ಸೈಯದ್ ಅಹ್ಮದ್ ಶಕೀಲ್ ಮತ್ತು ಶಾಹಿದ್ ಯೂಸುಫ್ ಸೇರಿದ್ದಾರೆ.

ಎನ್‌ಐಎ ದಕ್ಷಿಣ ಕಾಶ್ಮೀರದ ಪುಶ್ರೂ, ಸನ್‌ಸೂಮಾ ಮತ್ತು ಅಚಬಲ್ ಗ್ರಾಮಗಳಲ್ಲಿ ದಾಳಿ ನಡೆಸಿ ಐದು ಜನರನ್ನು ಬಂಧಿಸಿದೆ. ಶ್ರೀನಗರದಲ್ಲಿ ಧಾರ್ಮಿಕ ಸಂಸ್ಥೆ ದಾರುಲ್ ಉಲೂಮ್ ಕಚೇರಿಯ ಮೇಲೆ ದಾಳಿ ನಡೆಸಿ ಸಂಸ್ಥೆಯ ಮುಖ್ಯಸ್ಥ ನೂರ್ ದಿನ್ ಭಟ್ ಅವರನ್ನು ಬಂಧಿಸಲಾಗಿದೆ. ಜೊತೆಗೆ ಲ್ಯಾಪ್‌ಟಾಪ್, ಬ್ಯಾಂಕ್ ಸ್ಟೇಟ್‌ಮೆಂಟ್‌ಗಳು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಸ್ಥೆಗೆ ಸೇರಿದ ದಲಾಲ್‌ ಮೊಹಲ್ಲಾ, ನವಾಬ್‌ ಬಜಾರ್ ಮತ್ತು ಓಲ್ಡ್‌ ಸಿಟಿಯಲ್ಲಿ ಇರುವ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

ಈ ಹಿಂದೆ, ಶೆರಿ ಕಾಶ್ಮೀರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಿರಿಯ ಪ್ರಯೋಗಾಲಯ ತಂತ್ರಜ್ಞ ಸೈಯದ್ ಶಕೀಲ್ ಅವರನ್ನು ಭಯೋತ್ಪಾದನೆಗೆ ಹಣಕಾಸು ನೆರವು ಆರೋಪದಲ್ಲಿ ಶ್ರೀನಗರದ ರಾಂಬಾಗ್ ಪ್ರದೇಶದ ನಿವಾಸದಿಂದ 2018 ರಲ್ಲಿ ಬಂಧಿಸಲಾಗಿತ್ತು. ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಶಾಹಿದ್ ಯೂಸುಫ್ ಅವರನ್ನು 2017 ರಲ್ಲಿ ಇದೇ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಿಂದ ವಜಾಗೊಳಿಸಿರುವ ಇಬ್ಬರು ಕಾನ್‌ಸ್ಟೆಬಲ್‌ಗಳು ಪೊಲೀಸ್ ಇಲಾಖೆಯೊಳಗಿನಿಂದ ಉಗ್ರಗಾಳಿಗೆ ಬೆಂಬಲಿಸುತ್ತಿದ್ದರು ಮತ್ತು ಬೆಂಬಲದ ಜೊತೆಗೆ ಉಗ್ರರಿಗೆ ಮಾಹಿತಿಯನ್ನು ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅನಂತನಾಗ್, ಬಾರಾಮುಲ್ಲಾ ಜಿಲ್ಲೆಗಳಲ್ಲಿಯೂ ವಿವಿಧೆಡೆ ದಾಳಿ ನಡೆದಿದ್ದು, ವ್ಯಾಪಾರಿಗಳಾದ ಉಮರ್‌ ಭಟ್, ತನ್ವೀರ್ ಭಟ್, ಜಾವೇದ್‌ ಭಟ್‌, ಔಷಧ ವ್ಯಾಪಾರಿ ಜೀಶನ್ ಮಲಿಕ್‌, ವೈದ್ಯಕೀಯ ಪ್ರಯೋಗಾಲಯದ ತಂತ್ರಜ್ಞ ಒವೈಸಿ ಭಟ್ ಎಂಬುವವರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: 2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...