Homeಮುಖಪುಟದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

ದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

- Advertisement -
- Advertisement -

1993 ರ ಮುಂಬೈ ಸ್ಫೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ ಕುರಿತು ನೀಡುವ ಮಾಹಿತಿಗೆ ಎನ್‌ಐಎ 25 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಇಷ್ಟೆ ಅಲ್ಲದೆ ದಾವೂದ್‌‌‌‌ನ  ಹೊಸ ಫೋಟೋವನ್ನು ಕೂಡ ಏಜೆನ್ಸಿ ಬಿಡುಗಡೆ ಮಾಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾವೂದ್‌ ಮಾತ್ರವಲ್ಲದೆ, ಆತನ ಸಹಾಯಕ ಛೋಟಾ ಶಕೀಲ್‌ಗೆ 20 ಲಕ್ಷ ರೂಪಾಯಿ ಮತ್ತು ಇತರ ಸಹಚರರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್‌ಗೆ ತಲಾ 15 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಇವರೆಲ್ಲರೂ 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾವೂದ್ ಇಬ್ರಾಹಿಂ ಮತ್ತು ಇತರರು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಮತ್ತು ಅಲ್ ಖೈದಾದೊಂದಿಗೆ ಸಕ್ರಿಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಎನ್ಐಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ!

ಶಸ್ತ್ರಾಸ್ತ್ರ ಕಳ್ಳಸಾಗಣೆ, ನಾರ್ಕೋ-ಭಯೋತ್ಪಾದನೆ, ಭೂಗತ ಪಾತಕಿ ಸಿಂಡಿಕೇಟ್ ಮತ್ತು ಮನಿ ಲಾಂಡರಿಂಗ್, ನಕಲಿ ಕರೆನ್ಸಿ ಚಲಾವಣೆ ಮತ್ತು ನಿಧಿ ಸಂಗ್ರಹಿಸಲು ಪ್ರಮುಖ ಆಸ್ತಿಗಳನ್ನು ಅನಧಿಕೃತವಾಗಿ ಹೊಂದಿರುವಂತಹ ವಿವಿಧ ಭಯೋತ್ಪಾದನೆ ಹಾಗೂ ಅಪರಾಧ ಚಟುವಟಿಕೆಗಳಲ್ಲಿ ದಾವೂದ್ ಮತ್ತು ಅವರ ಸಹಚರರು ತೊಡಗಿಸಿಕೊಂಡಿದ್ದಾರೆ ಎಂದು ಎನ್‌ಐಎ ಹೇಳಿದೆ.

ದಾವೂದ್‌‌ನನ್ನು ‘ವಿಶ್ವಸಂಸ್ಥೆ ಭದ್ರತಾ ನಿರ್ಣಯ-1267’ ರ ಅಡಿಯಲ್ಲಿ ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯಿಂದ ಗೊತ್ತುಪಡಿಸಲಾಗಿದೆ ಎಂದು ಎನ್‌ಐಎ ಹೇಳಿದ್ದು, “UAPA ಕಾಯಿದೆಯ ನಾಲ್ಕನೇ ವೇಳಾಪಟ್ಟಿಯ ಅಡಿಯಲ್ಲಿ ಆತನನ್ನು ಪಟ್ಟಿಮಾಡಲಾಗಿದೆ” ಎಂದು ಹೇಳಿದೆ.

ತನ್ನ ಸಹಚರರಾದ ಅನೀಸ್ ಇಬ್ರಾಹಿಂ, ಛೋಟಾ ಶಕೀಲ್, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್ ಸೇರಿದಂತೆ ಇತರರ ಸಹಾಯದಿಂದ ಅಂತರರಾಷ್ಟ್ರೀಯ ಭಯೋತ್ಪಾದನಾ ಜಾಲ ಡಿ ಕಂಪನಿಯನ್ನು ದಾವೂದ್ ಇಬ್ರಾಹಿಂ ನಡೆಸುತ್ತಿದ್ದಾನೆ ಎಂದು ಎನ್‌ಐಎ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ದಾವೂದ್ ಇಬ್ರಾಹಿಂ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಮುಂಬೈನ ವಿವಿಧ ಸ್ಥಳಗಳಲ್ಲಿ 12 ಬಾಂಬ್‌ಗಳು ಸ್ಫೋಟಗೊಂಡು, 257 ಜನರು ಸಾವನ್ನಪ್ಪಿದರು ಮತ್ತು 700 ಜನರು ಗಾಯಗೊಂಡರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯಿಂದ ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಲಾದ ದಾವೂದ್ ಇಬ್ರಾಹಿಂ ತಲೆಮರೆಸಿಕೊಂಡಿದ್ದು ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾನೆ ಎಂದು ನಂಬಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...