Homeಮುಖಪುಟದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

ದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

- Advertisement -
- Advertisement -

1993 ರ ಮುಂಬೈ ಸ್ಫೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ ಕುರಿತು ನೀಡುವ ಮಾಹಿತಿಗೆ ಎನ್‌ಐಎ 25 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಇಷ್ಟೆ ಅಲ್ಲದೆ ದಾವೂದ್‌‌‌‌ನ  ಹೊಸ ಫೋಟೋವನ್ನು ಕೂಡ ಏಜೆನ್ಸಿ ಬಿಡುಗಡೆ ಮಾಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾವೂದ್‌ ಮಾತ್ರವಲ್ಲದೆ, ಆತನ ಸಹಾಯಕ ಛೋಟಾ ಶಕೀಲ್‌ಗೆ 20 ಲಕ್ಷ ರೂಪಾಯಿ ಮತ್ತು ಇತರ ಸಹಚರರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್‌ಗೆ ತಲಾ 15 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಇವರೆಲ್ಲರೂ 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾವೂದ್ ಇಬ್ರಾಹಿಂ ಮತ್ತು ಇತರರು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಮತ್ತು ಅಲ್ ಖೈದಾದೊಂದಿಗೆ ಸಕ್ರಿಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಎನ್ಐಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ!

ಶಸ್ತ್ರಾಸ್ತ್ರ ಕಳ್ಳಸಾಗಣೆ, ನಾರ್ಕೋ-ಭಯೋತ್ಪಾದನೆ, ಭೂಗತ ಪಾತಕಿ ಸಿಂಡಿಕೇಟ್ ಮತ್ತು ಮನಿ ಲಾಂಡರಿಂಗ್, ನಕಲಿ ಕರೆನ್ಸಿ ಚಲಾವಣೆ ಮತ್ತು ನಿಧಿ ಸಂಗ್ರಹಿಸಲು ಪ್ರಮುಖ ಆಸ್ತಿಗಳನ್ನು ಅನಧಿಕೃತವಾಗಿ ಹೊಂದಿರುವಂತಹ ವಿವಿಧ ಭಯೋತ್ಪಾದನೆ ಹಾಗೂ ಅಪರಾಧ ಚಟುವಟಿಕೆಗಳಲ್ಲಿ ದಾವೂದ್ ಮತ್ತು ಅವರ ಸಹಚರರು ತೊಡಗಿಸಿಕೊಂಡಿದ್ದಾರೆ ಎಂದು ಎನ್‌ಐಎ ಹೇಳಿದೆ.

ದಾವೂದ್‌‌ನನ್ನು ‘ವಿಶ್ವಸಂಸ್ಥೆ ಭದ್ರತಾ ನಿರ್ಣಯ-1267’ ರ ಅಡಿಯಲ್ಲಿ ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯಿಂದ ಗೊತ್ತುಪಡಿಸಲಾಗಿದೆ ಎಂದು ಎನ್‌ಐಎ ಹೇಳಿದ್ದು, “UAPA ಕಾಯಿದೆಯ ನಾಲ್ಕನೇ ವೇಳಾಪಟ್ಟಿಯ ಅಡಿಯಲ್ಲಿ ಆತನನ್ನು ಪಟ್ಟಿಮಾಡಲಾಗಿದೆ” ಎಂದು ಹೇಳಿದೆ.

ತನ್ನ ಸಹಚರರಾದ ಅನೀಸ್ ಇಬ್ರಾಹಿಂ, ಛೋಟಾ ಶಕೀಲ್, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್ ಸೇರಿದಂತೆ ಇತರರ ಸಹಾಯದಿಂದ ಅಂತರರಾಷ್ಟ್ರೀಯ ಭಯೋತ್ಪಾದನಾ ಜಾಲ ಡಿ ಕಂಪನಿಯನ್ನು ದಾವೂದ್ ಇಬ್ರಾಹಿಂ ನಡೆಸುತ್ತಿದ್ದಾನೆ ಎಂದು ಎನ್‌ಐಎ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ದಾವೂದ್ ಇಬ್ರಾಹಿಂ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಮುಂಬೈನ ವಿವಿಧ ಸ್ಥಳಗಳಲ್ಲಿ 12 ಬಾಂಬ್‌ಗಳು ಸ್ಫೋಟಗೊಂಡು, 257 ಜನರು ಸಾವನ್ನಪ್ಪಿದರು ಮತ್ತು 700 ಜನರು ಗಾಯಗೊಂಡರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯಿಂದ ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಲಾದ ದಾವೂದ್ ಇಬ್ರಾಹಿಂ ತಲೆಮರೆಸಿಕೊಂಡಿದ್ದು ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾನೆ ಎಂದು ನಂಬಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...