Homeಮುಖಪುಟದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

ದಾವೂದ್ ಇಬ್ರಾಹಿಂ ಮಾಹಿತಿ ನೀಡಿದವರಿಗೆ 25 ಲಕ್ಷ ಬಹುಮಾನ ಘೋಷಿಸಿದ ಎನ್ಐಎ

- Advertisement -
- Advertisement -

1993 ರ ಮುಂಬೈ ಸ್ಫೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ ಕುರಿತು ನೀಡುವ ಮಾಹಿತಿಗೆ ಎನ್‌ಐಎ 25 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಇಷ್ಟೆ ಅಲ್ಲದೆ ದಾವೂದ್‌‌‌‌ನ  ಹೊಸ ಫೋಟೋವನ್ನು ಕೂಡ ಏಜೆನ್ಸಿ ಬಿಡುಗಡೆ ಮಾಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾವೂದ್‌ ಮಾತ್ರವಲ್ಲದೆ, ಆತನ ಸಹಾಯಕ ಛೋಟಾ ಶಕೀಲ್‌ಗೆ 20 ಲಕ್ಷ ರೂಪಾಯಿ ಮತ್ತು ಇತರ ಸಹಚರರಾದ ಅನೀಸ್ ಇಬ್ರಾಹಿಂ, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್‌ಗೆ ತಲಾ 15 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಇವರೆಲ್ಲರೂ 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾವೂದ್ ಇಬ್ರಾಹಿಂ ಮತ್ತು ಇತರರು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ, ಜೈಶ್-ಎ-ಮೊಹಮ್ಮದ್ ಮತ್ತು ಅಲ್ ಖೈದಾದೊಂದಿಗೆ ಸಕ್ರಿಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಎನ್ಐಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ!

ಶಸ್ತ್ರಾಸ್ತ್ರ ಕಳ್ಳಸಾಗಣೆ, ನಾರ್ಕೋ-ಭಯೋತ್ಪಾದನೆ, ಭೂಗತ ಪಾತಕಿ ಸಿಂಡಿಕೇಟ್ ಮತ್ತು ಮನಿ ಲಾಂಡರಿಂಗ್, ನಕಲಿ ಕರೆನ್ಸಿ ಚಲಾವಣೆ ಮತ್ತು ನಿಧಿ ಸಂಗ್ರಹಿಸಲು ಪ್ರಮುಖ ಆಸ್ತಿಗಳನ್ನು ಅನಧಿಕೃತವಾಗಿ ಹೊಂದಿರುವಂತಹ ವಿವಿಧ ಭಯೋತ್ಪಾದನೆ ಹಾಗೂ ಅಪರಾಧ ಚಟುವಟಿಕೆಗಳಲ್ಲಿ ದಾವೂದ್ ಮತ್ತು ಅವರ ಸಹಚರರು ತೊಡಗಿಸಿಕೊಂಡಿದ್ದಾರೆ ಎಂದು ಎನ್‌ಐಎ ಹೇಳಿದೆ.

ದಾವೂದ್‌‌ನನ್ನು ‘ವಿಶ್ವಸಂಸ್ಥೆ ಭದ್ರತಾ ನಿರ್ಣಯ-1267’ ರ ಅಡಿಯಲ್ಲಿ ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯಿಂದ ಗೊತ್ತುಪಡಿಸಲಾಗಿದೆ ಎಂದು ಎನ್‌ಐಎ ಹೇಳಿದ್ದು, “UAPA ಕಾಯಿದೆಯ ನಾಲ್ಕನೇ ವೇಳಾಪಟ್ಟಿಯ ಅಡಿಯಲ್ಲಿ ಆತನನ್ನು ಪಟ್ಟಿಮಾಡಲಾಗಿದೆ” ಎಂದು ಹೇಳಿದೆ.

ತನ್ನ ಸಹಚರರಾದ ಅನೀಸ್ ಇಬ್ರಾಹಿಂ, ಛೋಟಾ ಶಕೀಲ್, ಜಾವೇದ್ ಚಿಕ್ನಾ ಮತ್ತು ಟೈಗರ್ ಮೆಮನ್ ಸೇರಿದಂತೆ ಇತರರ ಸಹಾಯದಿಂದ ಅಂತರರಾಷ್ಟ್ರೀಯ ಭಯೋತ್ಪಾದನಾ ಜಾಲ ಡಿ ಕಂಪನಿಯನ್ನು ದಾವೂದ್ ಇಬ್ರಾಹಿಂ ನಡೆಸುತ್ತಿದ್ದಾನೆ ಎಂದು ಎನ್‌ಐಎ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ದಾವೂದ್ ಇಬ್ರಾಹಿಂ 1993 ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಮುಂಬೈನ ವಿವಿಧ ಸ್ಥಳಗಳಲ್ಲಿ 12 ಬಾಂಬ್‌ಗಳು ಸ್ಫೋಟಗೊಂಡು, 257 ಜನರು ಸಾವನ್ನಪ್ಪಿದರು ಮತ್ತು 700 ಜನರು ಗಾಯಗೊಂಡರು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯಿಂದ ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡಲಾದ ದಾವೂದ್ ಇಬ್ರಾಹಿಂ ತಲೆಮರೆಸಿಕೊಂಡಿದ್ದು ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾನೆ ಎಂದು ನಂಬಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....