Homeಮುಖಪುಟವಿದೇಶಗಳಲ್ಲಿ ಭಾರತೀಯ ಕಚೇರಿಗಳನ್ನು ಗುರಿಯಾಗಿಸಿ ದಾಳಿ ಆರೋಪ: 43 ಖಲಿಸ್ತಾನಿ ಬೆಂಬಲಿಗರನ್ನು ಪತ್ತೆ ಹಚ್ಚಿದ ಎನ್‌ಐಎ

ವಿದೇಶಗಳಲ್ಲಿ ಭಾರತೀಯ ಕಚೇರಿಗಳನ್ನು ಗುರಿಯಾಗಿಸಿ ದಾಳಿ ಆರೋಪ: 43 ಖಲಿಸ್ತಾನಿ ಬೆಂಬಲಿಗರನ್ನು ಪತ್ತೆ ಹಚ್ಚಿದ ಎನ್‌ಐಎ

- Advertisement -
- Advertisement -

ವಿದೇಶಗಳಲ್ಲಿ ಭಾರತೀಯ ರಾಯಭಾರಿ ಕಚೇರಿಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದ ಆರೋಪದಲ್ಲಿ 43 ಖಲಿಸ್ತಾನಿ ಬೆಂಬಲಿಗರನ್ನು ಭಾರತೀಯ ತನಿಖಾ ಸಂಸ್ಥೆ ಎನ್‌ಐಎ ಪತ್ತೆ ಹಚ್ಚಿದೆ. ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ಮಾ.19ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರದಲ್ಲಿ ಭಾಗಿಯಾದ ಮತ್ತು ಜು.2ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದ ಆರೋಪದಲ್ಲಿ 43 ಖಲಿಸ್ತಾನಿ ಬೆಂಬಲಿಗರನ್ನು ಪತ್ತೆಹಚ್ಚಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿಕೊಂಡಿದೆ.

NIA ಪ್ರಕಾರ, ಒಟ್ಟಾವಾ ಮತ್ತು ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ಗಳ ಮೇಲಿನ ದಾಳಿಗಳು, ಹಾಗೆಯೇ  ಸ್ಯಾನ್ ಫ್ರಾನ್ಸಿಸ್ಕೋ ಭಾರತದ ಕಾನ್ಸುಲೇಟ್ ಜನರಲ್ ಕಚೇರಿ ಮತ್ತು USನಲ್ಲಿ ಭಾರತದ ಕಚೇರಿಗಳ ಮೇಲಿನ ದಾಳಿಯ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ವಿದೇಶದಲ್ಲಿ ಭಾರತೀಯ ಕಚೇರಿಗಳ ಮೇಲಿನ ದಾಳಿಯ ಹಿಂದಿನ ಪಿತೂರಿಯನ್ನು ಬಿಚ್ಚಿಡುವ ಎನ್‌ಐಎ ಪ್ರಯತ್ನಗಳ ಭಾಗವಾಗಿ 50ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದೆ. ಈ ದಾಳಿಗಳು ವಿದೇಶಗಳಲ್ಲಿನ ಭಾರತೀಯ ಹಿತಾಸಕ್ತಿಗಳ ವಿರುದ್ಧದ ಅಪರಾಧಗಳ ಮೇಲೆ NIA ಗಮನಹರಿಸುವುದರ ಭಾಗವಾಗಿತ್ತು ಎಂದು ಎನ್‌ಐಎಎ ತಿಳಿಸಿದೆ.

ದಾಳಿಗಳಲ್ಲಿ ಕ್ರಿಮಿನಲ್ ಅತಿಕ್ರಮಣ, ವಿಧ್ವಂಸಕ ಕೃತ್ಯ, ಸಾರ್ವಜನಿಕ ಆಸ್ತಿಗಳಿಗೆ ಹಾನಿ, ಮತ್ತು ಭಾರತೀಯ ಅಧಿಕಾರಿಗಳಿಗೆ ನೋವುಂಟುಮಾಡುವ ಪ್ರಯತ್ನಗಳು ಮತ್ತು ಭಾರತೀಯ ಕಟ್ಟಡವನ್ನು ಹಾನಿಗೊಳಿಸುವ ಪ್ರಯತ್ನಗಳನ್ನು ಮಾಡಲಾಗಿದೆ. NIA ಈ ಬಗ್ಗೆ ಹಲವಾರು ವಿಧಾನಗಳನ್ನು ಬಳಸಿ ತನಿಖೆ ನಡೆಸಿದ್ದು,
43 ಜನರನ್ನು ಶಂಕಿತರು ಎಂದು ಗುರುತಿಸಿಕೊಂಡಿದೆ ಎಂದು ಹೇಳಿಕೊಂಡಿದೆ.

ಎನ್‌ಐಎ ಇತ್ತೀಚಿನ ತಿಂಗಳುಗಳಲ್ಲಿ ಈ ಪ್ರಕರಣಗಳ ಬಗ್ಗೆ ತನ್ನ ತನಿಖೆಯನ್ನು ಚುರುಕುಗೊಳಿಸಿದೆ ಮತ್ತು ದಾಳಿಯ ಸಂಚಿನ ಭಾಗವೆಂದು ಶಂಕಿಸಲಾದ ಭಾರತದಲ್ಲಿನ 80ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

ಇನ್ನು  NIA 2023ರಲ್ಲಿ 625 ಜನರನ್ನು ಬಂಧಿಸಿದೆ. 2022ರಲ್ಲಿ 490 ಮಂದಿಯನ್ನು ಬಂಧಿಸಿತ್ತು. ಇದು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಸುಮಾರು 28 ಪ್ರತಿಶತದಷ್ಟು ಹೆಚ್ಚಾಗಿದೆ. 625 ಬಂಧನದಲ್ಲಿ 65 ಮಂದಿ ಐಸಿಸ್ ಪ್ರಕರಣಗಳಲ್ಲಿ, 114 ಮಂದಿ ಭಯೋತ್ಪಾದನೆ ಪ್ರಕರಣಗಳಲ್ಲಿ, 45 ಮಂದಿಯನ್ನು ಮಾನವ ಕಳ್ಳಸಾಗಣೆ ಪ್ರಕರಣಗಳಲ್ಲಿ, 28 ಭಯೋತ್ಪಾದಕ ಕೃತ್ಯಗಳಡಿಯಲ್ಲಿ ಬಂಧಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯವು 2018- 2023ರವರೆಗೆ 324 ಪ್ರಕರಣಗಳನ್ನು NIA ಗೆ ಹಸ್ತಾಂತರಿಸಿದೆ. 2022ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ 10.53 ಕೋಟಿ ಮೌಲ್ಯದ 37 ಆಸ್ತಿಗಳನ್ನು ವಶಪಡಿಸಿಕೊಂಡಿದೆ. 2023ರಲ್ಲಿ ಅದು 240ಕ್ಕೆ ಏರಿಕೆಯಾಗಿದೆ. ಇದರಲ್ಲಿ 156 ಬ್ಯಾಂಕ್ ಖಾತೆಗಳ ಒಟ್ಟು 55.90 ಕೋಟಿ ರೂ.ಮೌಲ್ಯದ ಆಸ್ತಿಗಳನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಆಸ್ತಿಗಳು ಭಯೋತ್ಪಾದನೆ, ಸ್ಫೋಟಕಗಳು ಮತ್ತು ಇತರ ಮಹತ್ವದ ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಮತ್ತು ಶಂಕಿತರ ಒಡೆತನದಲ್ಲಿದೆ. ಇವುಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ  ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...