Homeಮುಖಪುಟರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಇಂಜಿನಿಯರ್‌ಗಳ ಅಕ್ರಮ ಬಂಧನ? ಕುಟುಂಬಸ್ಥರ ಆರೋಪಗಳೇನು?

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಇಂಜಿನಿಯರ್‌ಗಳ ಅಕ್ರಮ ಬಂಧನ? ಕುಟುಂಬಸ್ಥರ ಆರೋಪಗಳೇನು?

- Advertisement -
- Advertisement -

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಇಂಜಿನಿಯರ್‌ಗಳನ್ನು ಎನ್‌ಐಎ ಅಧಿಕಾರಿಗಳು ಕಾನೂನು ನಿಯಮಗಳನ್ನು ಪಾಲಿಸದೆ ಅಕ್ರಮವಾಗಿ ಬಂಧಿಸಿರುವ ಆರೋಪ ಕೇಳಿ ಬಂದಿದೆ. ಬಂಧಿತರ ಕುಟುಂಬಸ್ಥರು ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದು, ತಮ್ಮ ಮಕ್ಕಳ ಬರುವಿಕೆಗಾಗಿ ಎದುರು ನೋಡುತ್ತಿದ್ದಾರೆ.

ಮಂಗಳವಾರ(ಮೇ 21) ಬೆಳಿಗ್ಗೆ 5 ಗಂಟೆ ಸುಮಾರಿಗೆ ಎನ್‌ಐಎಯ 9 ಅಧಿಕಾರಿಗಳಿದ್ದ ತಂಡ ಸ್ಥಳೀಯ ಹುಬ್ಬಳ್ಳಿ ಪೊಲೀಸರ ನೆರವಿನೊಂದಿಗೆ ಬೆಂಗಳೂರಿನ ಖಾಸಗಿ ಐಟಿ ಸಂಸ್ಥೆಯೊಂದರಲ್ಲಿ ಕೆಲಸಮಾಡುತ್ತಿದ್ದ ಎಂಜಿನಿಯರ್ ಶೋಯೆಬ್ ಅಹಮದ್ ಮಿರ್ಜಾ(34) ಅವರ ಮನೆಗೆ ದಾಳಿ ನಡೆಸಿದ್ದಾರೆ. ಏಳು ಗಂಟೆಗಳ ಕಾಲ ಪರಿಶೀಲನೆ ನಡೆಸಿ ಒಂದು ಲ್ಯಾಪ್‌ಟಾಪ್, ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಶೋಯೆಬ್ ಮತ್ತು ಆತನ ಅಣ್ಣ ಐಜಾಜ್‌ಗೆ ಕೆಲವು ಬಟ್ಟೆಗಳನ್ನು ಪ್ಯಾಕ್ ಮಾಡುವಂತೆ ಪೊಲೀಸರು ಹೇಳಿದ್ದಾರೆ. ಎನ್‌ಐಎ ದಾಳಿ ವೇಳೆ ಮನೆಯಲ್ಲಿದ್ದ ಅವರ ತಂದೆಗೆ ಇಬ್ಬರನ್ನು ಬೆಂಗಳೂರಿಗೆ ಕರೆದೊಯ್ಯುವುದಾಗಿ ತಿಳಿಸಲಾಗಿತ್ತು.

ಆದರೆ, NIA ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41A ಅಡಿಯಲ್ಲಿ ಕಡ್ಡಾಯವಾಗಿ ಬಂಧನ ನೋಟಿಸ್‌ನ್ನು ನೀಡಿಲ್ಲ. ಬದಲಾಗಿ CrPCಯ ಸೆಕ್ಷನ್ 160ರಡಿಯಲ್ಲಿ ಅವರಿಗೆ ನೋಟಿಸ್ ನೀಡಲಾಗಿದೆ. ಮಾರ್ಚ್ 1ರಂದು ಬೆಂಗಳೂರಿನಲ್ಲಿ ಸಂಭವಿಸಿದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಸಂಖ್ಯೆ ‘01/2024/NIA/BLR’ ಎಂದು ಸಾಕ್ಷಿ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಏಪ್ರಿಲ್ 12ರಂದು ಎನ್ಐಎ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮಥೀನ್ ತಾಹಾ ಎಂಬ ಇಬ್ಬರನ್ನು ಬಂಧಿಸಿತ್ತು. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿಗಳಾದ ಇವರಿಬ್ಬರನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೆಸರಿಸಲಾಗಿದೆ.

ಮಂಗಳವಾರ ಸುದ್ದಿ ವಾಹಿನಿಗಳು ವಿವಿಧ ರಾಜ್ಯಗಳಾದ್ಯಂತ ಅನೇಕ ದಾಳಿಗಳು ನಡೆದಿರುವ ಬಗ್ಗೆ ವರದಿ ಮಾಡಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ನಾಲ್ಕು ರಾಜ್ಯಗಳ 11 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿರುವುದಾಗಿ ರಾತ್ರಿ 8 ಗಂಟೆಗೆ ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ. ಶಂಕಿತರಿಂದ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ದಾಳಿ ಪ್ರಾರಂಭವಾದ 15 ಗಂಟೆಗಳ ನಂತರ ಬಿಡುಗಡೆಯಾದ ಪತ್ರಿಕಾ ಹೇಳಿಕೆಯು ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಯಾವುದೇ ಹೊಸ ಬಂಧನಗಳು ನಡೆದಿರುವ ಬಗ್ಗೆ ಉಲ್ಲೇಖಿಸಿಲ್ಲ.

ಹಾಗಾದರೆ ಶೋಯೆಬ್ ಮತ್ತು ಐಜಾಜ್ ಅವರನ್ನು ಅಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆಯೇ? ಎಂಬ ಪ್ರಶ್ನೆ ಮೂಡಿದೆ. ಅವರ ಕುಟುಂಬದವರು ಹಂಚಿಕೊಂಡ ವಿವರಗಳು ಮತ್ತು ಇಬ್ಬರಿಗೆ ನೀಡಲಾದ ನೋಟಿಸ್‌ಗಳ ಆಧಾರದ ಮೇಲೆ ಅವರನ್ನು ನಿಜವಾಗಿಯೂ ಅಕ್ರಮವಾಗಿ ಬಂಧಿಸಿರುವಂತೆ ತೋರುತ್ತದೆ.

ವಿಚಾರಣೆ ಅಥವಾ ಬಂಧನದ ಸಂದರ್ಭದಲ್ಲಿ ಅನುಸರಿಸಬೇಕಾದ ಕಾನೂನು ವಿಧಾನಗಳನ್ನು ಎನ್‌ಐಎ ಉಲ್ಲಂಘಿಸಿದೆ. ಬಂಧನ ಕಾನೂನು ಪ್ರಕ್ರಿಯೆಗೆ ಬದ್ಧವಾಗಿರಬೇಕು ಎಂದು ಸುಪ್ರೀಂಕೋರ್ಟ್ ಪದೇ ಪದೇ ಒತ್ತಿ ಹೇಳುತ್ತಿದೆ. ಕಳೆದ ವಾರ, ಹಿರಿಯ ಪತ್ರಕರ್ತ ಮತ್ತು ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ಜಾಮೀನು ನೀಡುವಾಗ, ತನಿಖಾ ಸಂಸ್ಥೆಯು ಬಂಧನಕ್ಕೆ ಕಾರಣಗಳನ್ನು ಲಿಖಿತವಾಗಿ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. ಆದರೆ ಶೋಯೆಬ್ ಮತ್ತು ಐಜಾಜ್‌ಗೆ ಬಂಧನದ ಬಗ್ಗೆ ಕಾರಣವನ್ನು ಎನ್‌ಐಎ ಒದಗಿಸಿಲ್ಲ ಎನ್ನಲಾಗಿದೆ.

ಈ ಎಲ್ಲ ಬೆಳವಣಿಗೆಯಿಂದ ಮಿರ್ಜಾ ಕುಟುಂಬವು ಒತ್ತಡಕ್ಕೆ ಒಳಗಾಗಿದೆ. ಮೂರು ತಿಂಗಳ ಗರ್ಭಿಣಿಯಾಗಿರುವ ಶೋಯೆಬ್ ಅವರ ಪತ್ನಿ ಲಾಜಿನಾ ಈ ಬಗ್ಗೆ ಮಾತನಾಡಿ, ಅವರನ್ನು ಎಲ್ಲಿಗೆ ಕರೆದೊಯ್ಯಲಾಗಿದೆ ಎಂದು ಕಂಡುಹಿಡಿಯಲು ಕುಟುಂಬವು ಇಡೀ ದಿನ ಕಾಯುತ್ತಿದೆ. ಅವರನ್ನು ಬಂಧಿಸದ್ದರೆ ಎನ್ಐಎ ಅವರನ್ನು ಏಕೆ ಹೀಗೆ ಕರೆದುಕೊಂಡು ಹೋಗಿದೆ? ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್ 13ರಂದು, ಪಶ್ಚಿಮ ಬಂಗಾಳದಲ್ಲಿ ಎನ್ಐಎ ಇಬ್ಬರನ್ನು ಬಂಧಿಸಿದ ಒಂದು ದಿನದ ನಂತರ, ಶೋಯೆಬ್ ಅವರನ್ನು ವಿಚಾರಣೆಗಾಗಿ ಕರೆಸಲಾಗಿತ್ತು. NIA ಅಧಿಕಾರಿಗಳು ಕೆಲವು ಹೆಸರುಗಳ ಬಗ್ಗೆ ಕೇಳಿದರು ಮತ್ತು ಫೋನ್‌ಗಳಲ್ಲಿ ಅವರ ಮೊಬೈಲ್‌ ಸಂಖ್ಯೆ ಏಕೆ ಇದೆ ಎಂದು ವಿಚಾರಿಸಿದ್ದಾರೆ. ಕೆಲವು ಗಂಟೆಗಳ ನಂತರ ಅವರನ್ನು ವಾಪಾಸ್ಸು ಬಿಟ್ಟಿದ್ದಾರೆ ಎಂದು ಇದಕ್ಕೆ ಮೊದಲು ಶೋಯೆಬ್‌ ಹೇಳಿದ್ದರು.

ಇದನ್ನು ಓದಿ: ವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...