Homeಮುಖಪುಟರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಇಂಜಿನಿಯರ್‌ಗಳ ಅಕ್ರಮ ಬಂಧನ? ಕುಟುಂಬಸ್ಥರ ಆರೋಪಗಳೇನು?

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಇಂಜಿನಿಯರ್‌ಗಳ ಅಕ್ರಮ ಬಂಧನ? ಕುಟುಂಬಸ್ಥರ ಆರೋಪಗಳೇನು?

- Advertisement -
- Advertisement -

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಇಂಜಿನಿಯರ್‌ಗಳನ್ನು ಎನ್‌ಐಎ ಅಧಿಕಾರಿಗಳು ಕಾನೂನು ನಿಯಮಗಳನ್ನು ಪಾಲಿಸದೆ ಅಕ್ರಮವಾಗಿ ಬಂಧಿಸಿರುವ ಆರೋಪ ಕೇಳಿ ಬಂದಿದೆ. ಬಂಧಿತರ ಕುಟುಂಬಸ್ಥರು ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದು, ತಮ್ಮ ಮಕ್ಕಳ ಬರುವಿಕೆಗಾಗಿ ಎದುರು ನೋಡುತ್ತಿದ್ದಾರೆ.

ಮಂಗಳವಾರ(ಮೇ 21) ಬೆಳಿಗ್ಗೆ 5 ಗಂಟೆ ಸುಮಾರಿಗೆ ಎನ್‌ಐಎಯ 9 ಅಧಿಕಾರಿಗಳಿದ್ದ ತಂಡ ಸ್ಥಳೀಯ ಹುಬ್ಬಳ್ಳಿ ಪೊಲೀಸರ ನೆರವಿನೊಂದಿಗೆ ಬೆಂಗಳೂರಿನ ಖಾಸಗಿ ಐಟಿ ಸಂಸ್ಥೆಯೊಂದರಲ್ಲಿ ಕೆಲಸಮಾಡುತ್ತಿದ್ದ ಎಂಜಿನಿಯರ್ ಶೋಯೆಬ್ ಅಹಮದ್ ಮಿರ್ಜಾ(34) ಅವರ ಮನೆಗೆ ದಾಳಿ ನಡೆಸಿದ್ದಾರೆ. ಏಳು ಗಂಟೆಗಳ ಕಾಲ ಪರಿಶೀಲನೆ ನಡೆಸಿ ಒಂದು ಲ್ಯಾಪ್‌ಟಾಪ್, ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಶೋಯೆಬ್ ಮತ್ತು ಆತನ ಅಣ್ಣ ಐಜಾಜ್‌ಗೆ ಕೆಲವು ಬಟ್ಟೆಗಳನ್ನು ಪ್ಯಾಕ್ ಮಾಡುವಂತೆ ಪೊಲೀಸರು ಹೇಳಿದ್ದಾರೆ. ಎನ್‌ಐಎ ದಾಳಿ ವೇಳೆ ಮನೆಯಲ್ಲಿದ್ದ ಅವರ ತಂದೆಗೆ ಇಬ್ಬರನ್ನು ಬೆಂಗಳೂರಿಗೆ ಕರೆದೊಯ್ಯುವುದಾಗಿ ತಿಳಿಸಲಾಗಿತ್ತು.

ಆದರೆ, NIA ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41A ಅಡಿಯಲ್ಲಿ ಕಡ್ಡಾಯವಾಗಿ ಬಂಧನ ನೋಟಿಸ್‌ನ್ನು ನೀಡಿಲ್ಲ. ಬದಲಾಗಿ CrPCಯ ಸೆಕ್ಷನ್ 160ರಡಿಯಲ್ಲಿ ಅವರಿಗೆ ನೋಟಿಸ್ ನೀಡಲಾಗಿದೆ. ಮಾರ್ಚ್ 1ರಂದು ಬೆಂಗಳೂರಿನಲ್ಲಿ ಸಂಭವಿಸಿದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಸಂಖ್ಯೆ ‘01/2024/NIA/BLR’ ಎಂದು ಸಾಕ್ಷಿ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಏಪ್ರಿಲ್ 12ರಂದು ಎನ್ಐಎ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮಥೀನ್ ತಾಹಾ ಎಂಬ ಇಬ್ಬರನ್ನು ಬಂಧಿಸಿತ್ತು. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿಗಳಾದ ಇವರಿಬ್ಬರನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೆಸರಿಸಲಾಗಿದೆ.

ಮಂಗಳವಾರ ಸುದ್ದಿ ವಾಹಿನಿಗಳು ವಿವಿಧ ರಾಜ್ಯಗಳಾದ್ಯಂತ ಅನೇಕ ದಾಳಿಗಳು ನಡೆದಿರುವ ಬಗ್ಗೆ ವರದಿ ಮಾಡಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ನಾಲ್ಕು ರಾಜ್ಯಗಳ 11 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿರುವುದಾಗಿ ರಾತ್ರಿ 8 ಗಂಟೆಗೆ ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ. ಶಂಕಿತರಿಂದ ಎಲೆಕ್ಟ್ರಾನಿಕ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ದಾಳಿ ಪ್ರಾರಂಭವಾದ 15 ಗಂಟೆಗಳ ನಂತರ ಬಿಡುಗಡೆಯಾದ ಪತ್ರಿಕಾ ಹೇಳಿಕೆಯು ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಯಾವುದೇ ಹೊಸ ಬಂಧನಗಳು ನಡೆದಿರುವ ಬಗ್ಗೆ ಉಲ್ಲೇಖಿಸಿಲ್ಲ.

ಹಾಗಾದರೆ ಶೋಯೆಬ್ ಮತ್ತು ಐಜಾಜ್ ಅವರನ್ನು ಅಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆಯೇ? ಎಂಬ ಪ್ರಶ್ನೆ ಮೂಡಿದೆ. ಅವರ ಕುಟುಂಬದವರು ಹಂಚಿಕೊಂಡ ವಿವರಗಳು ಮತ್ತು ಇಬ್ಬರಿಗೆ ನೀಡಲಾದ ನೋಟಿಸ್‌ಗಳ ಆಧಾರದ ಮೇಲೆ ಅವರನ್ನು ನಿಜವಾಗಿಯೂ ಅಕ್ರಮವಾಗಿ ಬಂಧಿಸಿರುವಂತೆ ತೋರುತ್ತದೆ.

ವಿಚಾರಣೆ ಅಥವಾ ಬಂಧನದ ಸಂದರ್ಭದಲ್ಲಿ ಅನುಸರಿಸಬೇಕಾದ ಕಾನೂನು ವಿಧಾನಗಳನ್ನು ಎನ್‌ಐಎ ಉಲ್ಲಂಘಿಸಿದೆ. ಬಂಧನ ಕಾನೂನು ಪ್ರಕ್ರಿಯೆಗೆ ಬದ್ಧವಾಗಿರಬೇಕು ಎಂದು ಸುಪ್ರೀಂಕೋರ್ಟ್ ಪದೇ ಪದೇ ಒತ್ತಿ ಹೇಳುತ್ತಿದೆ. ಕಳೆದ ವಾರ, ಹಿರಿಯ ಪತ್ರಕರ್ತ ಮತ್ತು ನ್ಯೂಸ್‌ಕ್ಲಿಕ್ ಸುದ್ದಿ ಪೋರ್ಟಲ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರಿಗೆ ಜಾಮೀನು ನೀಡುವಾಗ, ತನಿಖಾ ಸಂಸ್ಥೆಯು ಬಂಧನಕ್ಕೆ ಕಾರಣಗಳನ್ನು ಲಿಖಿತವಾಗಿ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. ಆದರೆ ಶೋಯೆಬ್ ಮತ್ತು ಐಜಾಜ್‌ಗೆ ಬಂಧನದ ಬಗ್ಗೆ ಕಾರಣವನ್ನು ಎನ್‌ಐಎ ಒದಗಿಸಿಲ್ಲ ಎನ್ನಲಾಗಿದೆ.

ಈ ಎಲ್ಲ ಬೆಳವಣಿಗೆಯಿಂದ ಮಿರ್ಜಾ ಕುಟುಂಬವು ಒತ್ತಡಕ್ಕೆ ಒಳಗಾಗಿದೆ. ಮೂರು ತಿಂಗಳ ಗರ್ಭಿಣಿಯಾಗಿರುವ ಶೋಯೆಬ್ ಅವರ ಪತ್ನಿ ಲಾಜಿನಾ ಈ ಬಗ್ಗೆ ಮಾತನಾಡಿ, ಅವರನ್ನು ಎಲ್ಲಿಗೆ ಕರೆದೊಯ್ಯಲಾಗಿದೆ ಎಂದು ಕಂಡುಹಿಡಿಯಲು ಕುಟುಂಬವು ಇಡೀ ದಿನ ಕಾಯುತ್ತಿದೆ. ಅವರನ್ನು ಬಂಧಿಸದ್ದರೆ ಎನ್ಐಎ ಅವರನ್ನು ಏಕೆ ಹೀಗೆ ಕರೆದುಕೊಂಡು ಹೋಗಿದೆ? ಎಂದು ಪ್ರಶ್ನಿಸಿದ್ದಾರೆ.

ಏಪ್ರಿಲ್ 13ರಂದು, ಪಶ್ಚಿಮ ಬಂಗಾಳದಲ್ಲಿ ಎನ್ಐಎ ಇಬ್ಬರನ್ನು ಬಂಧಿಸಿದ ಒಂದು ದಿನದ ನಂತರ, ಶೋಯೆಬ್ ಅವರನ್ನು ವಿಚಾರಣೆಗಾಗಿ ಕರೆಸಲಾಗಿತ್ತು. NIA ಅಧಿಕಾರಿಗಳು ಕೆಲವು ಹೆಸರುಗಳ ಬಗ್ಗೆ ಕೇಳಿದರು ಮತ್ತು ಫೋನ್‌ಗಳಲ್ಲಿ ಅವರ ಮೊಬೈಲ್‌ ಸಂಖ್ಯೆ ಏಕೆ ಇದೆ ಎಂದು ವಿಚಾರಿಸಿದ್ದಾರೆ. ಕೆಲವು ಗಂಟೆಗಳ ನಂತರ ಅವರನ್ನು ವಾಪಾಸ್ಸು ಬಿಟ್ಟಿದ್ದಾರೆ ಎಂದು ಇದಕ್ಕೆ ಮೊದಲು ಶೋಯೆಬ್‌ ಹೇಳಿದ್ದರು.

ಇದನ್ನು ಓದಿ: ವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...