Homeಚಳವಳಿಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಎನ್‌ಐಎ ಮೂಲಕ ಸಮನ್ಸ್ ನೀಡಿ ರೈತರನ್ನು ಹೆದರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

- Advertisement -
- Advertisement -

ಅಮೆರಿಕ ಮೂಲದ ಖಾಲಿಸ್ತಾನಿ ಪರ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ, ರೈತ ಹೋರಾಟದಲ್ಲಿ ಪಾಲ್ಗೊಳ್ಳುವ 12 ಕ್ಕಿಂತಲೂ ಪಂಜಾಬಿ ಮತ್ತು ಸಿಖ್ ಸಾಮಾಜಿಕ ಕಾರ್ಯಕರ್ತರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೋಟಿಸ್ ನೀಡಿದೆ. ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದವರ ಸಂಖ್ಯೆ 40 ಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ.

ಅಮೆರಿಕ ಮೂಲದ ಗುರ್‌ಪತ್ವಂತ್ ಸಿಂಗ್ ಪನ್ನು, ಯುನೈಟೆಡ್ ಕಿಂಗ್‌ಡಮ್ ಮೂಲದ ಪರಮ್‌ಜಿತ್ ಸಿಂಗ್ ಪಮ್ಮಾ ಮತ್ತು ಕೆನಡಾದ ಹರ್‌ದೀಪ್ ಸಿಂಗ್ ನಿಜ್ಜಾರ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಎನ್‌ಐಎ 2020 ರ ಡಿಸೆಂಬರ್ 15 ರಂದು ದೆಹಲಿಯಲ್ಲಿ ಎಫ್‌ಐಆರ್ ದಾಖಲಿಸಿತ್ತು. ಗುರ್‌ಪತ್ವಂತ್ ಸಿಂಗ್ ಪನ್ನು ಎಸ್‌ಎಫ್‌ಜೆ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಎಫ್‌ಐಆ‌ರ್‌‌ನಲ್ಲಿ, “ಸಿಖ್ಸ್ ಫಾರ್‌ ಜಸ್ಟಿಸ್‌ ಎಂಬ ಸಂಘಟನೆಯು ಇತರ ಖಾಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಾದ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್, ಖಲಿಸ್ತಾನ್ ಟೈಗರ್ ಫೋರ್ಸ್ ಮತ್ತು ಖಾಲಿಸ್ತಾನ್ ಜಿಂದಾಬಾದ್ ಫೋರ್ಸ್ ಸಂಘಟನೆಗಳೊಂದಿಗೆ ಯುಎಪಿಎ ಅಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದೆ ಎಂಬ ಮಾಹಿತಿ ಕೇಂದ್ರ ಸರ್ಕಾರ ಪಡೆದಿದೆ. ಈ ಸಂಘಟನೆಗಳು ಭಯ ಮತ್ತು ಅರಾಜಕತೆಯ ವಾತಾವರಣವನ್ನು ಸೃಷ್ಟಿಸುವ ಹಾಗೂ ಜನರಲ್ಲಿ ಅಸಮಾಧಾನ ಉಂಟುಮಾಡಿ ಭಾರತ ಸರ್ಕಾರದ ವಿರುದ್ಧ ದಂಗೆ ಏಳುವಂತೆ ಪ್ರಚೋದಿಸುವ ಪಿತೂರಿ ಮಾಡಿದೆ” ಎಂದು ಹೇಳಲಾಗಿದೆ.

“ಭಾರತದ ಜನರಲ್ಲಿ ಭಯೋತ್ಪಾದನೆಯನ್ನು ಬಿತ್ತಲು ಮತ್ತು ಪ್ರಭಾವಶಾಲಿ ಯುವಕರನ್ನು ಪ್ರಚೋದಿಸಲು ಎನ್‌‌ಜಿಒಗಳ ಮೂಲಕ ಭಾರತ ಮೂಲದ ಖಾಲಿಸ್ತಾನಿ ಪರ ಸಂಘಟನೆಗಳಿಗೆ ದೊಡ್ಡ ಪ್ರಮಾಣದ ಹಣವನ್ನು ಸಂಗ್ರಹಿಸಿ ಕಳುಹಿಸಲಾಗುತ್ತಿದೆ” ಎಂದು ಎಫ್ಐಆರ್ ಹೇಳುತ್ತದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಲೋಕ್ ಭಾಲೈ ಇನ್ಸಾಫ್ ವೆಲ್ಫೇರ್ ಸೊಸೈಟಿ (ಎಲ್‌ಬಿಐಡಬ್ಲ್ಯುಎಸ್) ಅಧ್ಯಕ್ಷ ಬಾಲ್‌ದೇವ್ ಸಿಂಗ್ ಸಿರ್ಸಾ ಮತ್ತು ಚಿತ್ರ ನಟ ದೀಪ್ ಸಿಧು ಅವರ ಸಹೋದರ ಮಂದೀಪ್ ಸಿಂಗ್ ಅವರಿಗೆ ತನಿಖಾ ಸಂಸ್ಥೆಯು ನೋಟಿಸ್ ನೀಡಿದೆ.

ಜಲಂಧರ್ ಮೂಲದ ಬರಹಗಾರ ಮತ್ತು ನಿರೂಪಕ ಬಲ್ವಿಂದರ್ ಪಾಲ್ ಸಿಂಗ್, ಪತ್ರಕರ್ತ ಬಾಲ್ತೆಜ್ ಪನ್ನು, ಅಕಾಲಿ ನಾಯಕ ಪರ್ಮ್‌ಜಿತ್ ಸಿಂಗ್ ಅಕಾಲಿ, ಮೊಗಾದ ಪಾಲ್ವಿಂದರ್ ಸಿಂಗ್, ಹೋಶಿಯಾರ್‌ಪುರದ ನೊಬೆಲ್ಜಿತ್ ಸಿಂಗ್, ಸಿಖ್ ಯೂತ್ ಫೆಡರೇಶನ್ ಭಿಂದರ್‌ವಾಲಾ (ಎಸ್‌ವೈಎಫ್‌ಬಿ) ಉಪಾಧ್ಯಕ್ಷ ರಂಜಿತ್ ಸಿಂಗ್ ದಮ್‌ದಮಿ ತಕ್ಸಲ್, ಸುರಿಂದರ್ ಸಿಂಗ್ ಥಿಕ್ರಿವಾಲಾ ಸೇರಿದಂತೆ ಅಮೃತಸರ, ಲುಧಿಯಾನ ಮತ್ತು ಹೋಶಿಯಾರ್‌ಪುರ ಮೂಲದ ಸಿಖ್ ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಪಂಜಾಬಿ ಬರಹಗಾರರು, ಕಲಾವಿದರು, ಪತ್ರಕರ್ತರು ಕೂಡ ನೋಟಿಸ್ ಪಡೆದಿದ್ದಾರೆ.

‘ಪ್ರತಿಭಟನೆಗೆ ಸಹಾಯ ಮಾಡುವವರನ್ನು ಟಾರ್ಗೇಟ್’

ಪ್ರತಿಭಟನಾ ಸ್ಥಳಗಳಿಗೆ ಜನರನ್ನು ಕರೆದೊಯ್ಯಲು ಬಸ್ಸುಗಳನ್ನು ನೀಡಿದ ಟ್ರಾನ್ಸ್‌‌ಪೋರ್ಟ್‌ ಸಂಸ್ಥೆಗಳನ್ನೂ ಎನ್ಐಎ ಗುರಿಯಾಗಿಸುತ್ತಿದೆ ಎಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್ಕೆಎಂ) ಪ್ರತಿನಿಧಿಗಳು ತಿಳಿಸಿದ್ದಾರೆ. ಅಲ್ಲದೆ, ಕೆಲವು ಕೇಬಲ್ ಚಾನೆಲ್ ಆಪರೇಟರ್‌ಗಳಿಗೆ ನೋಟಿಸ್ ಕಳುಹಿಸಲಾಗಿದೆ. ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಕಳುಹಿಸಲಾಗಿರುವ ಎಲ್ಲ ಜನರನ್ನು ನವದೆಹಲಿಯ ಪ್ರಧಾನ ಕಚೇರಿಯಲ್ಲಿ ಹಾಜರಾಗುವಂತೆ ಎನ್ಐಎ ಕೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಸಮರ್ಥನೆ: ತೊಂದರೆಗೊಳಗಾದವರಿಗೆ ರಕ್ಷಣೆ ಅಗತ್ಯವೆಂದ IMF

ಪ್ರತಿಭಟನೆಯನ್ನು ಮುಗಿಸಲು ಸರ್ಕಾರ ಈಗ ಎನ್ಐಎಯನ್ನು ಬಳಸುತ್ತಿದೆ ಎಂದು ಬಾಲ್‌ದೇವ್ ಸಿಂಗ್ ಸಿರ್ಸಾ ತಿಳಿಸಿದ್ದಾರೆಂದು ’ಫೆಡರಲ್’ ವರದಿ ಮಾಡಿದೆ.

“ನಮ್ಮ ಹೋರಾಟವನ್ನು ಧಮನಿಸಲು ಸುಪ್ರೀಂಕೋರ್ಟ್ ಸೇರಿದಂತೆ ಪ್ರತಿಯೊಂದು ತಂತ್ರವನ್ನು ಬಳಸಲಾಯಿತು, ಆದರೆ ಸರ್ಕಾರಕ್ಕೆ ನಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಲು ಸಾಧ್ಯವಾಗಲಿಲ್ಲ. ದೆಹಲಿಯ ಗಡಿಯಲ್ಲಿ ರೈತರ ಸಂಖ್ಯೆ ದಿನೇ ದಿನ ಹೆಚ್ಚುತ್ತಿದೆ. ಎನ್‌ಐಎ ಮೂಲಕ ಸಮನ್ಸ್‌ ನೀಡಿ ರೈತರನ್ನು ಹೆದರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಆದರೆ ಇದಕ್ಕೆ ನಾವು ಹೆದರುವುದಿಲ್ಲ, ನಮ್ಮ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತೇವೆ” ಎಂದು ಬಾಲ್‌ದೇವ್ ಸಿಂಗ್ ಸಿರ್ಸಾ ಹೇಳಿದ್ದಾರೆ.

ರೈತ ಪ್ರತಿಭಟನೆಗೆ ಸಹಾಯ ಮಾಡುವವರನ್ನು ಗುರಿಯಾಗಿಸಿ ಎನ್ಐಎ ಬಳಸುವುದನ್ನು ನಿಲ್ಲಿಸುವಂತೆ, ಜನವರಿ 15 ರಂದು ನಡೆದ 9 ನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಸಂಯುಕ್ತಾ ಕಿಸಾನ್ ಮೋರ್ಚಾ ಸರ್ಕಾರವನ್ನು ಒತ್ತಾಯಿಸಿದೆ. ನಾವು ಖಾಲಿಸ್ತಾನಿ ಪರ ಗುಂಪು ಎಸ್‌ಎಫ್‌ಜೆ ಜೊತೆ ಯಾವುದೇ ರೀತಿಯಿಂದ ಸಂಪರ್ಕ ಹೊಂದಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...