Homeಚಳವಳಿಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಎನ್‌ಐಎ ಮೂಲಕ ಸಮನ್ಸ್ ನೀಡಿ ರೈತರನ್ನು ಹೆದರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

- Advertisement -
- Advertisement -

ಅಮೆರಿಕ ಮೂಲದ ಖಾಲಿಸ್ತಾನಿ ಪರ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ, ರೈತ ಹೋರಾಟದಲ್ಲಿ ಪಾಲ್ಗೊಳ್ಳುವ 12 ಕ್ಕಿಂತಲೂ ಪಂಜಾಬಿ ಮತ್ತು ಸಿಖ್ ಸಾಮಾಜಿಕ ಕಾರ್ಯಕರ್ತರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೋಟಿಸ್ ನೀಡಿದೆ. ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದವರ ಸಂಖ್ಯೆ 40 ಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ.

ಅಮೆರಿಕ ಮೂಲದ ಗುರ್‌ಪತ್ವಂತ್ ಸಿಂಗ್ ಪನ್ನು, ಯುನೈಟೆಡ್ ಕಿಂಗ್‌ಡಮ್ ಮೂಲದ ಪರಮ್‌ಜಿತ್ ಸಿಂಗ್ ಪಮ್ಮಾ ಮತ್ತು ಕೆನಡಾದ ಹರ್‌ದೀಪ್ ಸಿಂಗ್ ನಿಜ್ಜಾರ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಎನ್‌ಐಎ 2020 ರ ಡಿಸೆಂಬರ್ 15 ರಂದು ದೆಹಲಿಯಲ್ಲಿ ಎಫ್‌ಐಆರ್ ದಾಖಲಿಸಿತ್ತು. ಗುರ್‌ಪತ್ವಂತ್ ಸಿಂಗ್ ಪನ್ನು ಎಸ್‌ಎಫ್‌ಜೆ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಎಫ್‌ಐಆ‌ರ್‌‌ನಲ್ಲಿ, “ಸಿಖ್ಸ್ ಫಾರ್‌ ಜಸ್ಟಿಸ್‌ ಎಂಬ ಸಂಘಟನೆಯು ಇತರ ಖಾಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಾದ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್, ಖಲಿಸ್ತಾನ್ ಟೈಗರ್ ಫೋರ್ಸ್ ಮತ್ತು ಖಾಲಿಸ್ತಾನ್ ಜಿಂದಾಬಾದ್ ಫೋರ್ಸ್ ಸಂಘಟನೆಗಳೊಂದಿಗೆ ಯುಎಪಿಎ ಅಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದೆ ಎಂಬ ಮಾಹಿತಿ ಕೇಂದ್ರ ಸರ್ಕಾರ ಪಡೆದಿದೆ. ಈ ಸಂಘಟನೆಗಳು ಭಯ ಮತ್ತು ಅರಾಜಕತೆಯ ವಾತಾವರಣವನ್ನು ಸೃಷ್ಟಿಸುವ ಹಾಗೂ ಜನರಲ್ಲಿ ಅಸಮಾಧಾನ ಉಂಟುಮಾಡಿ ಭಾರತ ಸರ್ಕಾರದ ವಿರುದ್ಧ ದಂಗೆ ಏಳುವಂತೆ ಪ್ರಚೋದಿಸುವ ಪಿತೂರಿ ಮಾಡಿದೆ” ಎಂದು ಹೇಳಲಾಗಿದೆ.

“ಭಾರತದ ಜನರಲ್ಲಿ ಭಯೋತ್ಪಾದನೆಯನ್ನು ಬಿತ್ತಲು ಮತ್ತು ಪ್ರಭಾವಶಾಲಿ ಯುವಕರನ್ನು ಪ್ರಚೋದಿಸಲು ಎನ್‌‌ಜಿಒಗಳ ಮೂಲಕ ಭಾರತ ಮೂಲದ ಖಾಲಿಸ್ತಾನಿ ಪರ ಸಂಘಟನೆಗಳಿಗೆ ದೊಡ್ಡ ಪ್ರಮಾಣದ ಹಣವನ್ನು ಸಂಗ್ರಹಿಸಿ ಕಳುಹಿಸಲಾಗುತ್ತಿದೆ” ಎಂದು ಎಫ್ಐಆರ್ ಹೇಳುತ್ತದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಲೋಕ್ ಭಾಲೈ ಇನ್ಸಾಫ್ ವೆಲ್ಫೇರ್ ಸೊಸೈಟಿ (ಎಲ್‌ಬಿಐಡಬ್ಲ್ಯುಎಸ್) ಅಧ್ಯಕ್ಷ ಬಾಲ್‌ದೇವ್ ಸಿಂಗ್ ಸಿರ್ಸಾ ಮತ್ತು ಚಿತ್ರ ನಟ ದೀಪ್ ಸಿಧು ಅವರ ಸಹೋದರ ಮಂದೀಪ್ ಸಿಂಗ್ ಅವರಿಗೆ ತನಿಖಾ ಸಂಸ್ಥೆಯು ನೋಟಿಸ್ ನೀಡಿದೆ.

ಜಲಂಧರ್ ಮೂಲದ ಬರಹಗಾರ ಮತ್ತು ನಿರೂಪಕ ಬಲ್ವಿಂದರ್ ಪಾಲ್ ಸಿಂಗ್, ಪತ್ರಕರ್ತ ಬಾಲ್ತೆಜ್ ಪನ್ನು, ಅಕಾಲಿ ನಾಯಕ ಪರ್ಮ್‌ಜಿತ್ ಸಿಂಗ್ ಅಕಾಲಿ, ಮೊಗಾದ ಪಾಲ್ವಿಂದರ್ ಸಿಂಗ್, ಹೋಶಿಯಾರ್‌ಪುರದ ನೊಬೆಲ್ಜಿತ್ ಸಿಂಗ್, ಸಿಖ್ ಯೂತ್ ಫೆಡರೇಶನ್ ಭಿಂದರ್‌ವಾಲಾ (ಎಸ್‌ವೈಎಫ್‌ಬಿ) ಉಪಾಧ್ಯಕ್ಷ ರಂಜಿತ್ ಸಿಂಗ್ ದಮ್‌ದಮಿ ತಕ್ಸಲ್, ಸುರಿಂದರ್ ಸಿಂಗ್ ಥಿಕ್ರಿವಾಲಾ ಸೇರಿದಂತೆ ಅಮೃತಸರ, ಲುಧಿಯಾನ ಮತ್ತು ಹೋಶಿಯಾರ್‌ಪುರ ಮೂಲದ ಸಿಖ್ ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಪಂಜಾಬಿ ಬರಹಗಾರರು, ಕಲಾವಿದರು, ಪತ್ರಕರ್ತರು ಕೂಡ ನೋಟಿಸ್ ಪಡೆದಿದ್ದಾರೆ.

‘ಪ್ರತಿಭಟನೆಗೆ ಸಹಾಯ ಮಾಡುವವರನ್ನು ಟಾರ್ಗೇಟ್’

ಪ್ರತಿಭಟನಾ ಸ್ಥಳಗಳಿಗೆ ಜನರನ್ನು ಕರೆದೊಯ್ಯಲು ಬಸ್ಸುಗಳನ್ನು ನೀಡಿದ ಟ್ರಾನ್ಸ್‌‌ಪೋರ್ಟ್‌ ಸಂಸ್ಥೆಗಳನ್ನೂ ಎನ್ಐಎ ಗುರಿಯಾಗಿಸುತ್ತಿದೆ ಎಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್ಕೆಎಂ) ಪ್ರತಿನಿಧಿಗಳು ತಿಳಿಸಿದ್ದಾರೆ. ಅಲ್ಲದೆ, ಕೆಲವು ಕೇಬಲ್ ಚಾನೆಲ್ ಆಪರೇಟರ್‌ಗಳಿಗೆ ನೋಟಿಸ್ ಕಳುಹಿಸಲಾಗಿದೆ. ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಕಳುಹಿಸಲಾಗಿರುವ ಎಲ್ಲ ಜನರನ್ನು ನವದೆಹಲಿಯ ಪ್ರಧಾನ ಕಚೇರಿಯಲ್ಲಿ ಹಾಜರಾಗುವಂತೆ ಎನ್ಐಎ ಕೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಸಮರ್ಥನೆ: ತೊಂದರೆಗೊಳಗಾದವರಿಗೆ ರಕ್ಷಣೆ ಅಗತ್ಯವೆಂದ IMF

ಪ್ರತಿಭಟನೆಯನ್ನು ಮುಗಿಸಲು ಸರ್ಕಾರ ಈಗ ಎನ್ಐಎಯನ್ನು ಬಳಸುತ್ತಿದೆ ಎಂದು ಬಾಲ್‌ದೇವ್ ಸಿಂಗ್ ಸಿರ್ಸಾ ತಿಳಿಸಿದ್ದಾರೆಂದು ’ಫೆಡರಲ್’ ವರದಿ ಮಾಡಿದೆ.

“ನಮ್ಮ ಹೋರಾಟವನ್ನು ಧಮನಿಸಲು ಸುಪ್ರೀಂಕೋರ್ಟ್ ಸೇರಿದಂತೆ ಪ್ರತಿಯೊಂದು ತಂತ್ರವನ್ನು ಬಳಸಲಾಯಿತು, ಆದರೆ ಸರ್ಕಾರಕ್ಕೆ ನಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಲು ಸಾಧ್ಯವಾಗಲಿಲ್ಲ. ದೆಹಲಿಯ ಗಡಿಯಲ್ಲಿ ರೈತರ ಸಂಖ್ಯೆ ದಿನೇ ದಿನ ಹೆಚ್ಚುತ್ತಿದೆ. ಎನ್‌ಐಎ ಮೂಲಕ ಸಮನ್ಸ್‌ ನೀಡಿ ರೈತರನ್ನು ಹೆದರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಆದರೆ ಇದಕ್ಕೆ ನಾವು ಹೆದರುವುದಿಲ್ಲ, ನಮ್ಮ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತೇವೆ” ಎಂದು ಬಾಲ್‌ದೇವ್ ಸಿಂಗ್ ಸಿರ್ಸಾ ಹೇಳಿದ್ದಾರೆ.

ರೈತ ಪ್ರತಿಭಟನೆಗೆ ಸಹಾಯ ಮಾಡುವವರನ್ನು ಗುರಿಯಾಗಿಸಿ ಎನ್ಐಎ ಬಳಸುವುದನ್ನು ನಿಲ್ಲಿಸುವಂತೆ, ಜನವರಿ 15 ರಂದು ನಡೆದ 9 ನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಸಂಯುಕ್ತಾ ಕಿಸಾನ್ ಮೋರ್ಚಾ ಸರ್ಕಾರವನ್ನು ಒತ್ತಾಯಿಸಿದೆ. ನಾವು ಖಾಲಿಸ್ತಾನಿ ಪರ ಗುಂಪು ಎಸ್‌ಎಫ್‌ಜೆ ಜೊತೆ ಯಾವುದೇ ರೀತಿಯಿಂದ ಸಂಪರ್ಕ ಹೊಂದಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...