Homeಚಳವಳಿಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಎನ್‌ಐಎ ಮೂಲಕ ಸಮನ್ಸ್ ನೀಡಿ ರೈತರನ್ನು ಹೆದರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

- Advertisement -
- Advertisement -

ಅಮೆರಿಕ ಮೂಲದ ಖಾಲಿಸ್ತಾನಿ ಪರ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ, ರೈತ ಹೋರಾಟದಲ್ಲಿ ಪಾಲ್ಗೊಳ್ಳುವ 12 ಕ್ಕಿಂತಲೂ ಪಂಜಾಬಿ ಮತ್ತು ಸಿಖ್ ಸಾಮಾಜಿಕ ಕಾರ್ಯಕರ್ತರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೋಟಿಸ್ ನೀಡಿದೆ. ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದವರ ಸಂಖ್ಯೆ 40 ಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ.

ಅಮೆರಿಕ ಮೂಲದ ಗುರ್‌ಪತ್ವಂತ್ ಸಿಂಗ್ ಪನ್ನು, ಯುನೈಟೆಡ್ ಕಿಂಗ್‌ಡಮ್ ಮೂಲದ ಪರಮ್‌ಜಿತ್ ಸಿಂಗ್ ಪಮ್ಮಾ ಮತ್ತು ಕೆನಡಾದ ಹರ್‌ದೀಪ್ ಸಿಂಗ್ ನಿಜ್ಜಾರ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಎನ್‌ಐಎ 2020 ರ ಡಿಸೆಂಬರ್ 15 ರಂದು ದೆಹಲಿಯಲ್ಲಿ ಎಫ್‌ಐಆರ್ ದಾಖಲಿಸಿತ್ತು. ಗುರ್‌ಪತ್ವಂತ್ ಸಿಂಗ್ ಪನ್ನು ಎಸ್‌ಎಫ್‌ಜೆ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಎಫ್‌ಐಆ‌ರ್‌‌ನಲ್ಲಿ, “ಸಿಖ್ಸ್ ಫಾರ್‌ ಜಸ್ಟಿಸ್‌ ಎಂಬ ಸಂಘಟನೆಯು ಇತರ ಖಾಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಾದ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್, ಖಲಿಸ್ತಾನ್ ಟೈಗರ್ ಫೋರ್ಸ್ ಮತ್ತು ಖಾಲಿಸ್ತಾನ್ ಜಿಂದಾಬಾದ್ ಫೋರ್ಸ್ ಸಂಘಟನೆಗಳೊಂದಿಗೆ ಯುಎಪಿಎ ಅಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದೆ ಎಂಬ ಮಾಹಿತಿ ಕೇಂದ್ರ ಸರ್ಕಾರ ಪಡೆದಿದೆ. ಈ ಸಂಘಟನೆಗಳು ಭಯ ಮತ್ತು ಅರಾಜಕತೆಯ ವಾತಾವರಣವನ್ನು ಸೃಷ್ಟಿಸುವ ಹಾಗೂ ಜನರಲ್ಲಿ ಅಸಮಾಧಾನ ಉಂಟುಮಾಡಿ ಭಾರತ ಸರ್ಕಾರದ ವಿರುದ್ಧ ದಂಗೆ ಏಳುವಂತೆ ಪ್ರಚೋದಿಸುವ ಪಿತೂರಿ ಮಾಡಿದೆ” ಎಂದು ಹೇಳಲಾಗಿದೆ.

“ಭಾರತದ ಜನರಲ್ಲಿ ಭಯೋತ್ಪಾದನೆಯನ್ನು ಬಿತ್ತಲು ಮತ್ತು ಪ್ರಭಾವಶಾಲಿ ಯುವಕರನ್ನು ಪ್ರಚೋದಿಸಲು ಎನ್‌‌ಜಿಒಗಳ ಮೂಲಕ ಭಾರತ ಮೂಲದ ಖಾಲಿಸ್ತಾನಿ ಪರ ಸಂಘಟನೆಗಳಿಗೆ ದೊಡ್ಡ ಪ್ರಮಾಣದ ಹಣವನ್ನು ಸಂಗ್ರಹಿಸಿ ಕಳುಹಿಸಲಾಗುತ್ತಿದೆ” ಎಂದು ಎಫ್ಐಆರ್ ಹೇಳುತ್ತದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಲೋಕ್ ಭಾಲೈ ಇನ್ಸಾಫ್ ವೆಲ್ಫೇರ್ ಸೊಸೈಟಿ (ಎಲ್‌ಬಿಐಡಬ್ಲ್ಯುಎಸ್) ಅಧ್ಯಕ್ಷ ಬಾಲ್‌ದೇವ್ ಸಿಂಗ್ ಸಿರ್ಸಾ ಮತ್ತು ಚಿತ್ರ ನಟ ದೀಪ್ ಸಿಧು ಅವರ ಸಹೋದರ ಮಂದೀಪ್ ಸಿಂಗ್ ಅವರಿಗೆ ತನಿಖಾ ಸಂಸ್ಥೆಯು ನೋಟಿಸ್ ನೀಡಿದೆ.

ಜಲಂಧರ್ ಮೂಲದ ಬರಹಗಾರ ಮತ್ತು ನಿರೂಪಕ ಬಲ್ವಿಂದರ್ ಪಾಲ್ ಸಿಂಗ್, ಪತ್ರಕರ್ತ ಬಾಲ್ತೆಜ್ ಪನ್ನು, ಅಕಾಲಿ ನಾಯಕ ಪರ್ಮ್‌ಜಿತ್ ಸಿಂಗ್ ಅಕಾಲಿ, ಮೊಗಾದ ಪಾಲ್ವಿಂದರ್ ಸಿಂಗ್, ಹೋಶಿಯಾರ್‌ಪುರದ ನೊಬೆಲ್ಜಿತ್ ಸಿಂಗ್, ಸಿಖ್ ಯೂತ್ ಫೆಡರೇಶನ್ ಭಿಂದರ್‌ವಾಲಾ (ಎಸ್‌ವೈಎಫ್‌ಬಿ) ಉಪಾಧ್ಯಕ್ಷ ರಂಜಿತ್ ಸಿಂಗ್ ದಮ್‌ದಮಿ ತಕ್ಸಲ್, ಸುರಿಂದರ್ ಸಿಂಗ್ ಥಿಕ್ರಿವಾಲಾ ಸೇರಿದಂತೆ ಅಮೃತಸರ, ಲುಧಿಯಾನ ಮತ್ತು ಹೋಶಿಯಾರ್‌ಪುರ ಮೂಲದ ಸಿಖ್ ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಪಂಜಾಬಿ ಬರಹಗಾರರು, ಕಲಾವಿದರು, ಪತ್ರಕರ್ತರು ಕೂಡ ನೋಟಿಸ್ ಪಡೆದಿದ್ದಾರೆ.

‘ಪ್ರತಿಭಟನೆಗೆ ಸಹಾಯ ಮಾಡುವವರನ್ನು ಟಾರ್ಗೇಟ್’

ಪ್ರತಿಭಟನಾ ಸ್ಥಳಗಳಿಗೆ ಜನರನ್ನು ಕರೆದೊಯ್ಯಲು ಬಸ್ಸುಗಳನ್ನು ನೀಡಿದ ಟ್ರಾನ್ಸ್‌‌ಪೋರ್ಟ್‌ ಸಂಸ್ಥೆಗಳನ್ನೂ ಎನ್ಐಎ ಗುರಿಯಾಗಿಸುತ್ತಿದೆ ಎಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್ಕೆಎಂ) ಪ್ರತಿನಿಧಿಗಳು ತಿಳಿಸಿದ್ದಾರೆ. ಅಲ್ಲದೆ, ಕೆಲವು ಕೇಬಲ್ ಚಾನೆಲ್ ಆಪರೇಟರ್‌ಗಳಿಗೆ ನೋಟಿಸ್ ಕಳುಹಿಸಲಾಗಿದೆ. ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಕಳುಹಿಸಲಾಗಿರುವ ಎಲ್ಲ ಜನರನ್ನು ನವದೆಹಲಿಯ ಪ್ರಧಾನ ಕಚೇರಿಯಲ್ಲಿ ಹಾಜರಾಗುವಂತೆ ಎನ್ಐಎ ಕೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಸಮರ್ಥನೆ: ತೊಂದರೆಗೊಳಗಾದವರಿಗೆ ರಕ್ಷಣೆ ಅಗತ್ಯವೆಂದ IMF

ಪ್ರತಿಭಟನೆಯನ್ನು ಮುಗಿಸಲು ಸರ್ಕಾರ ಈಗ ಎನ್ಐಎಯನ್ನು ಬಳಸುತ್ತಿದೆ ಎಂದು ಬಾಲ್‌ದೇವ್ ಸಿಂಗ್ ಸಿರ್ಸಾ ತಿಳಿಸಿದ್ದಾರೆಂದು ’ಫೆಡರಲ್’ ವರದಿ ಮಾಡಿದೆ.

“ನಮ್ಮ ಹೋರಾಟವನ್ನು ಧಮನಿಸಲು ಸುಪ್ರೀಂಕೋರ್ಟ್ ಸೇರಿದಂತೆ ಪ್ರತಿಯೊಂದು ತಂತ್ರವನ್ನು ಬಳಸಲಾಯಿತು, ಆದರೆ ಸರ್ಕಾರಕ್ಕೆ ನಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಲು ಸಾಧ್ಯವಾಗಲಿಲ್ಲ. ದೆಹಲಿಯ ಗಡಿಯಲ್ಲಿ ರೈತರ ಸಂಖ್ಯೆ ದಿನೇ ದಿನ ಹೆಚ್ಚುತ್ತಿದೆ. ಎನ್‌ಐಎ ಮೂಲಕ ಸಮನ್ಸ್‌ ನೀಡಿ ರೈತರನ್ನು ಹೆದರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಆದರೆ ಇದಕ್ಕೆ ನಾವು ಹೆದರುವುದಿಲ್ಲ, ನಮ್ಮ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತೇವೆ” ಎಂದು ಬಾಲ್‌ದೇವ್ ಸಿಂಗ್ ಸಿರ್ಸಾ ಹೇಳಿದ್ದಾರೆ.

ರೈತ ಪ್ರತಿಭಟನೆಗೆ ಸಹಾಯ ಮಾಡುವವರನ್ನು ಗುರಿಯಾಗಿಸಿ ಎನ್ಐಎ ಬಳಸುವುದನ್ನು ನಿಲ್ಲಿಸುವಂತೆ, ಜನವರಿ 15 ರಂದು ನಡೆದ 9 ನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಸಂಯುಕ್ತಾ ಕಿಸಾನ್ ಮೋರ್ಚಾ ಸರ್ಕಾರವನ್ನು ಒತ್ತಾಯಿಸಿದೆ. ನಾವು ಖಾಲಿಸ್ತಾನಿ ಪರ ಗುಂಪು ಎಸ್‌ಎಫ್‌ಜೆ ಜೊತೆ ಯಾವುದೇ ರೀತಿಯಿಂದ ಸಂಪರ್ಕ ಹೊಂದಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...