HomeಮುಖಪುಟNIAಯಿಂದ ಜೀವಾವಧಿಯಿಂದ ಗಲ್ಲುಶಿಕ್ಷೆಗೆ ಮನವಿ: ದೆಹಲಿ ಹೈಕೋರ್ಟ್‌ನಿಂದ ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯಿಸಲು 4 ವಾರಗಳ ಗಡುವು

NIAಯಿಂದ ಜೀವಾವಧಿಯಿಂದ ಗಲ್ಲುಶಿಕ್ಷೆಗೆ ಮನವಿ: ದೆಹಲಿ ಹೈಕೋರ್ಟ್‌ನಿಂದ ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯಿಸಲು 4 ವಾರಗಳ ಗಡುವು

- Advertisement -
- Advertisement -

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಮೋಚನಾ ರಂಗದ (ಜೆಕೆಎಲ್‌ಎಫ್) ನಾಯಕ ಯಾಸಿನ್ ಮಲಿಕ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿರುವ ಗಲ್ಲು ಶಿಕ್ಷೆಯ ಮನವಿಗೆ ಪ್ರತಿಕ್ರಿಯಿಸಲು ದೆಹಲಿ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಈ ಪ್ರಕರಣದಲ್ಲಿ ಯಾಸಿನ್ ಮಲಿಕ್ ಪ್ರಸ್ತುತ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಹೈಕೋರ್ಟ್‌ನ ವಿಭಾಗೀಯ ಪೀಠವು ಯಾಸಿನ್ ಮಲಿಕ್ ಅವರಿಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಗಡುವು ವಿಧಿಸಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 10ಕ್ಕೆ ನಿಗದಿಪಡಿಸಿದೆ. ಪ್ರಕರಣದ ವಿಚಾರಣೆಗಾಗಿ ಜೈಲಿನಿಂದ ವೀಡಿಯೋ ಕಾನ್ಪರೆನ್ಸಿಂಗ್ ಮೂಲಕ ಹಾಜರಾಗಬೇಕಿದ್ದ ಮಲಿಕ್, ಸೋಮವಾರ ಹಾಜರಾಗಲಿಲ್ಲ. ಇದರಿಂದ, ನ್ಯಾಯಾಲಯದ ಆದೇಶಕ್ಕೆ ಅಗೌರವ ತೋರಿದಂತಾಗಿದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ವಿವೇಕ್ ಚೌಧರಿ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರಿದ್ದ ಪೀಠವು ಈ ನಿರ್ಧಾರವನ್ನು ಪ್ರಕಟಿಸಿತು. ಮಲಿಕ್ ಅವರು ಆಗಸ್ಟ್ 9, 2024 ರಂದು ನೀಡಿದ್ದ ಆದೇಶದಂತೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿರಲಿಲ್ಲ ಮತ್ತು ಎನ್‌ಐಎ ಮನವಿಗೆ ಪ್ರತಿಕ್ರಿಯೆಯನ್ನೂ ಸಲ್ಲಿಸಿರಲಿಲ್ಲ. ಹಾಗಾಗಿ, ಮುಂದಿನ ವಿಚಾರಣೆಯ ದಿನಾಂಕದಂದು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಯಾಸಿನ್ ಮಲಿಕ್ ಪ್ರಕರಣದ ಹಿನ್ನೆಲೆ

ಮೇ 24, 2022ರಂದು ವಿಚಾರಣಾ ನ್ಯಾಯಾಲಯವು ಯಾಸಿನ್ ಮಲಿಕ್‌ಗೆ ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಲಿಕ್ ಅವರು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಲಯವು ಮರಣದಂಡನೆಯ ಬದಲು ಜೀವಾವಧಿ ಶಿಕ್ಷೆ ನೀಡಿತ್ತು. ಆದರೆ, ಈ ತೀರ್ಪಿನಿಂದ ಅತೃಪ್ತಗೊಂಡ ಎನ್‌ಐಎ, ಶಿಕ್ಷೆಯನ್ನು ಹೆಚ್ಚಿಸಿ ಮರಣದಂಡನೆ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಎನ್‌ಐಎ ವಾದ: ಭಯೋತ್ಪಾದಕ ಚಟುವಟಿಕೆಗಳು ‘ಭಾರತದ ಕಲ್ಪನೆಯ ಸಾರ್ವಭೌಮತ್ವಕ್ಕೆ’ ಧಕ್ಕೆ ತರುವಂತಹ ಅಪರಾಧಗಳು. ಇಂತಹ ಪ್ರಕರಣಗಳಲ್ಲಿ ತಪ್ಪೊಪ್ಪಿಗೆಯ ಕಾರಣಕ್ಕೆ ಮರಣದಂಡನೆಯನ್ನು ತಪ್ಪಿಸಿದರೆ, ಅದು ನ್ಯಾಯ ವ್ಯವಸ್ಥೆಯ ನೀತಿಯನ್ನು ದುರ್ಬಲಗೊಳಿಸುತ್ತದೆ ಎಂದು ಎನ್‌ಐಎ ವಾದಿಸಿದೆ. ಭಯೋತ್ಪಾದಕರು ಮರಣದಂಡನೆಯನ್ನು ತಪ್ಪಿಸಿಕೊಳ್ಳಲು ಇದೊಂದು ಮಾರ್ಗವಾಗಿ ಬಳಸಬಹುದು ಎಂದು ಅದು ಅಭಿಪ್ರಾಯಪಟ್ಟಿದೆ. ಮಲಿಕ್ ಅವರ ಅಪರಾಧಗಳು ಜಮ್ಮು ಮತ್ತು ಕಾಶ್ಮೀರವನ್ನು ಬಲವಂತವಾಗಿ ಭಾರತದಿಂದ ಬೇರ್ಪಡಿಸುವ ಉದ್ದೇಶವನ್ನು ಹೊಂದಿದ್ದವು ಎಂದು ಎನ್‌ಐಎ ತನ್ನ ಅರ್ಜಿಯಲ್ಲಿ ತಿಳಿಸಿದೆ.

ಕಾನೂನು ಪ್ರಕ್ರಿಯೆ ಮತ್ತು ಮಲಿಕ್ ನಿಲುವು: ಕಳೆದ ವರ್ಷ, ಮಲಿಕ್ ಪರ ವಾದಿಸಲು ವಕೀಲರನ್ನು ನೇಮಿಸಿಕೊಳ್ಳುವ ನ್ಯಾಯಾಲಯದ ಸಲಹೆಯನ್ನು ಅವರು ತಿರಸ್ಕರಿಸಿದ್ದರು. ತಾವೇ ಖುದ್ದಾಗಿ ಪ್ರಕರಣದ ಬಗ್ಗೆ ವಾದ ಮಂಡಿಸುವುದಾಗಿ ತಿಳಿಸಿದ್ದರು. ಮೇ 29, 2023ರಂದು ಹೈಕೋರ್ಟ್ ಎನ್‌ಐಎ ಮನವಿಯ ಕುರಿತು ಮಲಿಕ್‌ಗೆ ನೋಟಿಸ್ ಜಾರಿ ಮಾಡಿತ್ತು. ಸಾರ್ವಜನಿಕ ಸುವ್ಯವಸ್ಥೆ ಮತ್ತು ಸುರಕ್ಷತೆಯ ಕಾರಣ ನೀಡಿ ತಿಹಾರ್ ಜೈಲು ಅಧಿಕಾರಿಗಳು ಮಲಿಕ್ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲು ಅನುಮತಿ ಕೋರಿದ್ದರು. ಈ ಮನವಿಯನ್ನು ನ್ಯಾಯಾಲಯ ಒಪ್ಪಿಕೊಂಡಿತ್ತು.

ಈಗ, ನವೆಂಬರ್ 10 ರ ವಿಚಾರಣೆಯು ಈ ಪ್ರಕರಣದಲ್ಲಿ ನಿರ್ಣಾಯಕವಾಗಿದ್ದು, ಯಾಸಿನ್ ಮಲಿಕ್ ಅವರು ಎನ್‌ಐಎ ಮನವಿಗೆ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಯಾಸಿನ್ ಮಲಿಕ್ ವಿರುದ್ಧದ ಪ್ರಕರಣದ ಹಿನ್ನೆಲೆ ಸಾಕಷ್ಟು ದೀರ್ಘ ಮತ್ತು ಸಂಕೀರ್ಣವಾಗಿದೆ. 2017ರಲ್ಲಿ ಎನ್‌ಐಎ ಕಾಶ್ಮೀರದಲ್ಲಿ ಭಯೋತ್ಪಾದಕ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಜಾಲದ ವಿರುದ್ಧ ತನಿಖೆ ಆರಂಭಿಸಿತು. ಈ ತನಿಖೆಯಲ್ಲಿ, ಜಮ್ಮು ಮತ್ತು ಕಾಶ್ಮೀರದಾದ್ಯಂತ ಗಲಭೆ, ಕಲ್ಲು ತೂರಾಟ, ಶಾಲೆಗಳಿಗೆ ಬೆಂಕಿ ಹಚ್ಚುವುದು ಮತ್ತು ಸಾರ್ವಜನಿಕ ಆಸ್ತಿ ನಾಶಪಡಿಸುವ ಚಟುವಟಿಕೆಗಳಲ್ಲಿ ಮಲಿಕ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿತ್ತು. ಇಂತಹ ಚಟುವಟಿಕೆಗಳಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳ ಮೂಲಕ ಹಣ ಒದಗಿಸಲಾಗುತ್ತಿತ್ತು ಎಂದು ಎನ್‌ಐಎ ವಾದಿಸಿತು.

2019ರಲ್ಲಿ ಮಲಿಕ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿ ಇರಿಸಲಾಯಿತು. ಯಾಸಿನ್ ಮಲಿಕ್ ಕಳೆದ ವರ್ಷವೇ ತಾವೇ ಖುದ್ದಾಗಿ ವಾದ ಮಂಡಿಸುವುದಾಗಿ ತಿಳಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಮಾಲೆಗಾಂವ್: ಧ್ವನಿವರ್ಧಕ ವಿವಾದ, ಪೊಲೀಸ್ ನೋಟಿಸ್ ವಿರುದ್ಧ ಮುಸ್ಲಿಂ ಸಮುದಾಯದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...