HomeಮುಖಪುಟNIAಯಿಂದ ಜೀವಾವಧಿಯಿಂದ ಗಲ್ಲುಶಿಕ್ಷೆಗೆ ಮನವಿ: ದೆಹಲಿ ಹೈಕೋರ್ಟ್‌ನಿಂದ ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯಿಸಲು 4 ವಾರಗಳ ಗಡುವು

NIAಯಿಂದ ಜೀವಾವಧಿಯಿಂದ ಗಲ್ಲುಶಿಕ್ಷೆಗೆ ಮನವಿ: ದೆಹಲಿ ಹೈಕೋರ್ಟ್‌ನಿಂದ ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯಿಸಲು 4 ವಾರಗಳ ಗಡುವು

- Advertisement -
- Advertisement -

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಮೋಚನಾ ರಂಗದ (ಜೆಕೆಎಲ್‌ಎಫ್) ನಾಯಕ ಯಾಸಿನ್ ಮಲಿಕ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿರುವ ಗಲ್ಲು ಶಿಕ್ಷೆಯ ಮನವಿಗೆ ಪ್ರತಿಕ್ರಿಯಿಸಲು ದೆಹಲಿ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಈ ಪ್ರಕರಣದಲ್ಲಿ ಯಾಸಿನ್ ಮಲಿಕ್ ಪ್ರಸ್ತುತ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಹೈಕೋರ್ಟ್‌ನ ವಿಭಾಗೀಯ ಪೀಠವು ಯಾಸಿನ್ ಮಲಿಕ್ ಅವರಿಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಗಡುವು ವಿಧಿಸಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 10ಕ್ಕೆ ನಿಗದಿಪಡಿಸಿದೆ. ಪ್ರಕರಣದ ವಿಚಾರಣೆಗಾಗಿ ಜೈಲಿನಿಂದ ವೀಡಿಯೋ ಕಾನ್ಪರೆನ್ಸಿಂಗ್ ಮೂಲಕ ಹಾಜರಾಗಬೇಕಿದ್ದ ಮಲಿಕ್, ಸೋಮವಾರ ಹಾಜರಾಗಲಿಲ್ಲ. ಇದರಿಂದ, ನ್ಯಾಯಾಲಯದ ಆದೇಶಕ್ಕೆ ಅಗೌರವ ತೋರಿದಂತಾಗಿದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ವಿವೇಕ್ ಚೌಧರಿ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರಿದ್ದ ಪೀಠವು ಈ ನಿರ್ಧಾರವನ್ನು ಪ್ರಕಟಿಸಿತು. ಮಲಿಕ್ ಅವರು ಆಗಸ್ಟ್ 9, 2024 ರಂದು ನೀಡಿದ್ದ ಆದೇಶದಂತೆ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿರಲಿಲ್ಲ ಮತ್ತು ಎನ್‌ಐಎ ಮನವಿಗೆ ಪ್ರತಿಕ್ರಿಯೆಯನ್ನೂ ಸಲ್ಲಿಸಿರಲಿಲ್ಲ. ಹಾಗಾಗಿ, ಮುಂದಿನ ವಿಚಾರಣೆಯ ದಿನಾಂಕದಂದು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಯಾಸಿನ್ ಮಲಿಕ್ ಪ್ರಕರಣದ ಹಿನ್ನೆಲೆ

ಮೇ 24, 2022ರಂದು ವಿಚಾರಣಾ ನ್ಯಾಯಾಲಯವು ಯಾಸಿನ್ ಮಲಿಕ್‌ಗೆ ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಲಿಕ್ ಅವರು ತಾವು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಲಯವು ಮರಣದಂಡನೆಯ ಬದಲು ಜೀವಾವಧಿ ಶಿಕ್ಷೆ ನೀಡಿತ್ತು. ಆದರೆ, ಈ ತೀರ್ಪಿನಿಂದ ಅತೃಪ್ತಗೊಂಡ ಎನ್‌ಐಎ, ಶಿಕ್ಷೆಯನ್ನು ಹೆಚ್ಚಿಸಿ ಮರಣದಂಡನೆ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಎನ್‌ಐಎ ವಾದ: ಭಯೋತ್ಪಾದಕ ಚಟುವಟಿಕೆಗಳು ‘ಭಾರತದ ಕಲ್ಪನೆಯ ಸಾರ್ವಭೌಮತ್ವಕ್ಕೆ’ ಧಕ್ಕೆ ತರುವಂತಹ ಅಪರಾಧಗಳು. ಇಂತಹ ಪ್ರಕರಣಗಳಲ್ಲಿ ತಪ್ಪೊಪ್ಪಿಗೆಯ ಕಾರಣಕ್ಕೆ ಮರಣದಂಡನೆಯನ್ನು ತಪ್ಪಿಸಿದರೆ, ಅದು ನ್ಯಾಯ ವ್ಯವಸ್ಥೆಯ ನೀತಿಯನ್ನು ದುರ್ಬಲಗೊಳಿಸುತ್ತದೆ ಎಂದು ಎನ್‌ಐಎ ವಾದಿಸಿದೆ. ಭಯೋತ್ಪಾದಕರು ಮರಣದಂಡನೆಯನ್ನು ತಪ್ಪಿಸಿಕೊಳ್ಳಲು ಇದೊಂದು ಮಾರ್ಗವಾಗಿ ಬಳಸಬಹುದು ಎಂದು ಅದು ಅಭಿಪ್ರಾಯಪಟ್ಟಿದೆ. ಮಲಿಕ್ ಅವರ ಅಪರಾಧಗಳು ಜಮ್ಮು ಮತ್ತು ಕಾಶ್ಮೀರವನ್ನು ಬಲವಂತವಾಗಿ ಭಾರತದಿಂದ ಬೇರ್ಪಡಿಸುವ ಉದ್ದೇಶವನ್ನು ಹೊಂದಿದ್ದವು ಎಂದು ಎನ್‌ಐಎ ತನ್ನ ಅರ್ಜಿಯಲ್ಲಿ ತಿಳಿಸಿದೆ.

ಕಾನೂನು ಪ್ರಕ್ರಿಯೆ ಮತ್ತು ಮಲಿಕ್ ನಿಲುವು: ಕಳೆದ ವರ್ಷ, ಮಲಿಕ್ ಪರ ವಾದಿಸಲು ವಕೀಲರನ್ನು ನೇಮಿಸಿಕೊಳ್ಳುವ ನ್ಯಾಯಾಲಯದ ಸಲಹೆಯನ್ನು ಅವರು ತಿರಸ್ಕರಿಸಿದ್ದರು. ತಾವೇ ಖುದ್ದಾಗಿ ಪ್ರಕರಣದ ಬಗ್ಗೆ ವಾದ ಮಂಡಿಸುವುದಾಗಿ ತಿಳಿಸಿದ್ದರು. ಮೇ 29, 2023ರಂದು ಹೈಕೋರ್ಟ್ ಎನ್‌ಐಎ ಮನವಿಯ ಕುರಿತು ಮಲಿಕ್‌ಗೆ ನೋಟಿಸ್ ಜಾರಿ ಮಾಡಿತ್ತು. ಸಾರ್ವಜನಿಕ ಸುವ್ಯವಸ್ಥೆ ಮತ್ತು ಸುರಕ್ಷತೆಯ ಕಾರಣ ನೀಡಿ ತಿಹಾರ್ ಜೈಲು ಅಧಿಕಾರಿಗಳು ಮಲಿಕ್ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲು ಅನುಮತಿ ಕೋರಿದ್ದರು. ಈ ಮನವಿಯನ್ನು ನ್ಯಾಯಾಲಯ ಒಪ್ಪಿಕೊಂಡಿತ್ತು.

ಈಗ, ನವೆಂಬರ್ 10 ರ ವಿಚಾರಣೆಯು ಈ ಪ್ರಕರಣದಲ್ಲಿ ನಿರ್ಣಾಯಕವಾಗಿದ್ದು, ಯಾಸಿನ್ ಮಲಿಕ್ ಅವರು ಎನ್‌ಐಎ ಮನವಿಗೆ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಯಾಸಿನ್ ಮಲಿಕ್ ವಿರುದ್ಧದ ಪ್ರಕರಣದ ಹಿನ್ನೆಲೆ ಸಾಕಷ್ಟು ದೀರ್ಘ ಮತ್ತು ಸಂಕೀರ್ಣವಾಗಿದೆ. 2017ರಲ್ಲಿ ಎನ್‌ಐಎ ಕಾಶ್ಮೀರದಲ್ಲಿ ಭಯೋತ್ಪಾದಕ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಜಾಲದ ವಿರುದ್ಧ ತನಿಖೆ ಆರಂಭಿಸಿತು. ಈ ತನಿಖೆಯಲ್ಲಿ, ಜಮ್ಮು ಮತ್ತು ಕಾಶ್ಮೀರದಾದ್ಯಂತ ಗಲಭೆ, ಕಲ್ಲು ತೂರಾಟ, ಶಾಲೆಗಳಿಗೆ ಬೆಂಕಿ ಹಚ್ಚುವುದು ಮತ್ತು ಸಾರ್ವಜನಿಕ ಆಸ್ತಿ ನಾಶಪಡಿಸುವ ಚಟುವಟಿಕೆಗಳಲ್ಲಿ ಮಲಿಕ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿತ್ತು. ಇಂತಹ ಚಟುವಟಿಕೆಗಳಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳ ಮೂಲಕ ಹಣ ಒದಗಿಸಲಾಗುತ್ತಿತ್ತು ಎಂದು ಎನ್‌ಐಎ ವಾದಿಸಿತು.

2019ರಲ್ಲಿ ಮಲಿಕ್ ಅವರನ್ನು ಬಂಧಿಸಿ ತಿಹಾರ್ ಜೈಲಿನಲ್ಲಿ ಇರಿಸಲಾಯಿತು. ಯಾಸಿನ್ ಮಲಿಕ್ ಕಳೆದ ವರ್ಷವೇ ತಾವೇ ಖುದ್ದಾಗಿ ವಾದ ಮಂಡಿಸುವುದಾಗಿ ತಿಳಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಮಾಲೆಗಾಂವ್: ಧ್ವನಿವರ್ಧಕ ವಿವಾದ, ಪೊಲೀಸ್ ನೋಟಿಸ್ ವಿರುದ್ಧ ಮುಸ್ಲಿಂ ಸಮುದಾಯದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...