Homeಮುಖಪುಟಮಾವೋವಾದಿಗಳಿಗೆ ಬೆಂಬಲದ ಆರೋಪ: ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ NIA ದಾಳಿ

ಮಾವೋವಾದಿಗಳಿಗೆ ಬೆಂಬಲದ ಆರೋಪ: ಮಾನವ ಹಕ್ಕುಗಳ ಕಾರ್ಯಕರ್ತರ ಮೇಲೆ NIA ದಾಳಿ

- Advertisement -
- Advertisement -

ಮಾವೋವಾದಿಗಳಿಗೆ ಆರ್ಥಿಕವಾಗಿ ಬೆಂಬಲ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಸಂಶೋಧಕರ ಮನೆಗಳು ಸೇರಿದಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ 62 ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ದಾಳಿ ನಡೆಸಿದೆ ಎಂದು ದಿ ವೈರ್ ಮಂಗಳವಾರ ವರದಿ ಮಾಡಿದೆ.

ಪ್ರಗತಿಶೀಲ ಕಾರ್ಮಿಕ ಸಮಕ್ಯದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಚಂದ್ರ ನರಸಿಂಹುಲು ಅವರನ್ನು ಸಹ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ಎನ್‌ಐಎ ಬಂಧಿಸಿದೆ.

ಸ್ಥಳದಿಂದ 14 ಸುತ್ತುಗಳ ಪಿಸ್ತೂಲ್ ವಶಪಡಿಸಿಕೊಂಡಿರುವುದಾಗಿ ಎನ್ಐಎ ತಿಳಿಸಿದೆ.

ಮಾವೋವಾದಿಗಳಿಗೆ ಕೊರಿಯರ್ ಆಗಿ ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಮುಂಚಿಂಗಿಪುಟ್ಟು ಪೊಲೀಸರು ಪಾಂಗಿ ನಾಗಣ್ಣ ಎಂಬ ಪತ್ರಕರ್ತನನ್ನು 2020ರಲ್ಲಿ ಬಂಧಿಸಿದ್ದರು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪತ್ರಕರ್ತ ಮತ್ತು 63 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆನಂತರ ನಾಗಣ್ಣ ಅವರು ಹಲವು ಕಾರ್ಯಕರ್ತರನ್ನು ಹೆಸರಿಸಿದ್ದಾರೆ ಮತ್ತು ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ಸಂಘಟನೆಯ ಮುಂಚೂಣಿ ಕಾರ್ಯಕರ್ತರಾಗಿದ್ದಾರೆ ಎಂದು ಹೇಳಿದ್ದರು. 2021ರಲ್ಲಿ ಈ ಪ್ರಕರಣವನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.

ಅಕ್ಟೋಬರ್ 2ರಂದು ಆಂಧ್ರಪ್ರದೇಶ- ಗುಂಟೂರು, ಪಾಲನಾಡು, ವಿಜಯವಾಡ, ರಾಜಮಂಡ್ರಿ, ಪ್ರಕಾಶಂ, ಬಾಪಟ್ಲ, ಏಲೂರು, ಪೂರ್ವ ಗೋದಾವರಿ, ಬಿ ಆರ್ ಅಂಬೇಡ್ಕರ್ ಕೋನಸೀಮಾ, ವಿಶಾಖಪಟ್ಟಣಂ, ವಿಜಯನಗರಂ, ನೆಲ್ಲೂರು, ತಿರುಪತಿ, ಕಡಪ, ಸತ್ಯಸಾಯಿ, ಕರ್ನೂಲು ಜಿಲ್ಲೆಗಳ 53 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು.

ತೆಲಂಗಾಣದಲ್ಲಿ- ಹೈದರಾಬಾದ್, ಮಹಬೂಬ್ ನಗರ, ಹನುಮಕೊಂಡ, ರಂಗಾ ರೆಡ್ಡಿ ಮತ್ತು ಅದಿಲಾಬಾದ್‌ನಲ್ಲಿ ಎನ್‌ಐಎ ಶೋಧಕಾರ್ಯ ನಡೆಸಿತು.

ವಕೀಲ ದುರ್ಬಾ ಸುರೇಶ್ ಕುಮಾರ್ ಮತ್ತು ಮಾನವ ಹಕ್ಕುಗಳ ಹೋರಾಟಗಾರರಾದ ಕೆ ಸುಧಾ, ವೈ ರಾಜೇಶ್ ಮತ್ತು ಕೆವಿ ಜಗನ್ನಾಥ ರಾವ್ ಅವರುಗಳ ಮನೆಗಳ ಮೇಲೆ ಎನ್‌ಐಎ ದಾಳಿ ನಡೆಸಿತು.

ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಸಾಕ್ಷಿಯಾಗಿ ಹಾಜರಾಗುವಂತೆ ಸೂಚಿಸಿದೆ ಎಂದು ಕುಮಾರ್ ಹೇಳಿದರು. ಪ್ರಕರಣದ ಕೆಲವು ಆರೋಪಿಗಳ ಪರ ವಕೀಲರಾಗಿರುವ ಕಾರಣಕ್ಕೆ ನೋಟಿಸ್ ನೀಡಿರುವುದು ಕಾನೂನುಬಾಹಿರ ಮತ್ತು ಅನೈತಿಕ ಎಂದು ಪ್ರತಿಪಾದಿಸಿದರು.

”ಪ್ರಕರಣದಲ್ಲಿ ಹೆಸರಿಸಲಾದ ಅನೇಕ ವ್ಯಕ್ತಿಗಳಿಗೆ ನಾನು ವಕೀಲನಾಗಿದ್ದೇನೆ. ನಾನು ಅವರನ್ನು ಹೈಕೋರ್ಟ್‌ನಲ್ಲಿ ಪ್ರತಿನಿಧಿಸುತ್ತೇನೆ ಮತ್ತು ಈಗ ಅದೇ ಪ್ರಕರಣದಲ್ಲಿ ನಾನು ಅವರ ಮುಂದೆ ಸಾಕ್ಷಿಯಾಗಿ ಹಾಜರಾಗಲು NIA ಬಯಸಿದೆ” ಎಂದು ವಕೀಲ ಕುಮಾರ್ ಹೇಳಿದ್ದಾರೆ.

ಈ ದಾಳಿಯನ್ನು ಮಾಟಗಾತಿ ಬೇಟೆ ಎಂದು ಮಾನವ ಹಕ್ಕುಗಳ ಸಂಸ್ಥೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಕರೆದಿದೆ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳ ಸಮಸ್ಯೆಗಳನ್ನು ನಿರಂತರವಾಗಿ ಕೈಗೆತ್ತಿಕೊಳ್ಳುತ್ತಿರುವ ಕಾರ್ಯಕರ್ತರನ್ನು ಕಿರುಕುಳ ನೀಡುವ ಮೂಲಕ ಎನ್‌ಐಎ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: AAP ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ED ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...