Homeಮುಖಪುಟಉತ್ತರಪ್ರದೇಶ: ಮಾನವ ಹಕ್ಕುಗಳ ಕಾರ್ಯಕರ್ತರ ನಿವಾಸಗಳ ಮೇಲೆ ಎನ್‌ಐಎ ದಾಳಿ

ಉತ್ತರಪ್ರದೇಶ: ಮಾನವ ಹಕ್ಕುಗಳ ಕಾರ್ಯಕರ್ತರ ನಿವಾಸಗಳ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗಾಗಿ ಸ್ಥಾಪಿಸಲಾದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಉತ್ತರ ಪ್ರದೇಶದ ಮಾನವ ಹಕ್ಕುಗಳ ಕಾರ್ಯಕರ್ತರ ನಿವಾಸಗಳ ಮೇಲೆ ದಾಳಿ ಮಾಡಿದ್ದು, ಇದನ್ನು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಖಂಡಿಸಿದೆ.

ಹಿರಿಯ ಹೋರಾಟಗಾರ ದಿವಂಗತ ಜಯಪ್ರಕಾಶ್ ನಾರಾಯಣ್ ಅವರ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಸಂಘಟನೆಯ ನಾಯಕರಿಗೆ ಸಂಬಂಧಿಸಿದ ಹಲವು ಪ್ರದೇಶಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪ್ರಯಾಗ್ ರಾಜ್‌, ವಾರಣಾಸಿ, ಚಂದೌಲಿ, ಅಜಂಗಢ್ ಮತ್ತು ಡಿಯೋರಿಯಾ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ಪಿಯುಸಿಎಲ್ ತಿಳಿಸಿದೆ. ಎಫ್‌ಐಆರ್ ನಂ.RC-01/2023/NIA/LKW  ಅಡಿಯಲ್ಲಿ ದಾಳಿಗಳನ್ನು ನಡೆಸಲಾಗಿದೆ ಎಂದು ಹೇಳಲಾಗುತ್ತದೆ. ಆದರೆ ಈ ಬಗ್ಗೆ NIA ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಲಾಗಿಲ್ಲ.

ಪಿಯುಸಿಎಲ್‌ನ ರಾಷ್ಟ್ರೀಯ ಕಾರ್ಯದರ್ಶಿ ಸೀಮಾ ಆಜಾದ್ ಅವರ ಮನೆಯ ಮೇಲೆ ಪ್ರಯಾಗ್‌ರಾಜ್‌ನಲ್ಲಿ ದಾಳಿ ನಡೆಸಲಾಗಿದೆ. ಎನ್ಐಎ ಸೀಮಾ ಆಜಾದ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಅವರ ಲ್ಯಾಪ್‌ಟಾಪ್‌ ಮತ್ತು ಕೆಲವು ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ.

ಇದಲ್ಲದೆ ಪಿಯುಸಿಎಲ್‌ನ ಸದಸ್ಯರಾದ ವಕೀಲ ಸೋನಿ ಆಜಾದ್ ಮತ್ತು ಅವರ ಪತಿ ರಿತೇಶ್ ರೈ ಅವರನ್ನೂ ಎನ್‌ಐಎ ವಿಚಾರಣೆಗೆ ಒಳಪಡಿಸಿದೆ. ಪ್ರಯಾಗ್‌ರಾಜ್‌ನಲ್ಲಿ ಮನೀಶ್ ಆಜಾದ್ ಅವರ ಮನೆ ಮೇಲೆ ಎನ್‌ಐಎ ದಾಳಿ ನಡೆಸಿದೆ ಪಿಯುಸಿಎಲ್ ಹೇಳಿದೆ.

ವಾರಣಾಸಿಯಲ್ಲಿ ಭಗತ್ ಸಿಂಗ್ ವಿದ್ಯಾರ್ಥಿ ಮೋರ್ಚಾ (ಬಿಎಸ್‌ಎಂ) ಅಧ್ಯಕ್ಷೆ ಆಕಾಂಕ್ಷಾ ಅವರ ಕಚೇರಿಯ ಮೇಲೂ ದಾಳಿ ನಡೆಸಲಾಗಿದೆ. ದಿಯೋರಿಯಾದಲ್ಲಿ ಖಿರಿಯಾ ಬಾಗ್-ಅಜಂಗಢ ರೈತರ ಚಳವಳಿಯ ನಾಯಕ ರಾಜೇಶ್ ಆಜಾದ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಮೇಲೆ ರಾಜ್ಯವ್ಯಾಪಿ ನಡೆದ ಎನ್ಐಎ ದಾಳಿಗಳನ್ನು PUCL ಖಂಡಿಸಿದ್ದು, ದಾಳಿಯನ್ನು ಅಸಂವಿಧಾನಿಕ ಮತ್ತು ಮಾನವ ಹಕ್ಕುಗಳ ವಿರೋಧಿ ಕ್ರಮ ಎಂದು ಟೀಕಿಸಿದೆ. ಮಾನವ ಹಕ್ಕುಗಳ ಕಾರ್ಯಕರ್ತರ ವಿರುದ್ಧದ  ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಪಿಯುಸಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಎನ್ ಐಎ ದಾಳಿಯು ಮಾನವ ಹಕ್ಕುಗಳ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಪಿಯುಸಿಎಲ್‌ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದಾಳಿಯು  ಹೋರಾಟಗಾರರನ್ನು ಬೆದರಿಸುವ ಪ್ರಯತ್ನವಾಗಿದೆ. ಮಾನವ ಹಕ್ಕುಗಳ ಹೋರಾಟಗಾರರ ಮೇಲಿನ ಎಫ್‌ಐಆರ್‌ನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ತನಿಖೆಯನ್ನು ಸ್ಥಗಿತಗೊಳಿಸಬೇಕು ಎಂದು ಪಿಯುಸಿಎಲ್ ತನ್ನ ಹೇಳಿಕೆಯಲ್ಲಿ ಆಗ್ರಹಿಸಿದೆ.

ಇದನ್ನು ಓದಿ: ಗಾಂಧೀಜಿಯವರನ್ನು ಕೊಂದ ಮನಸ್ಥಿತಿಯವರೇ ಗೌರಿ ಲಂಕೇಶ್‌ರನ್ನು ಹತ್ಯೆ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...