Homeಮುಖಪುಟಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಕಾಶ್ಮೀರದಲ್ಲಿ ಮಾನವ ಹಕ್ಕುಗಳ ರಕ್ಷಕರ ಮೇಲಿನ ಪ್ರತಿಕಾರ ಮತ್ತು ದಮನದ ಸ್ಪಷ್ಟ ಪ್ರಕರಣವಾಗಿದೆ. ನಮ್ಮ ಧ್ವನಿಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗಾಗಿ ದೇಶ, ವಿದೇಶಗಳಿಂದ ದೇಣಿಗೆ ಸಂಗ್ರಹಿಸಲಾಗುತ್ತಿತ್ತು ಎಂಬ ಆರೋಪದ ಮೇಲೆ ವಿವಿಧ ಎನ್‌ಜಿಒ ಮತ್ತು ಟ್ರಸ್ಟ್‌ಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದೆ.

ಬುಧವಾರ(ಅ.28) ಕಾಶ್ಮೀರ ಕಣಿವೆಯ 10 ಸಂಸ್ಥೆಗಳು ಮತ್ತು ಬೆಂಗಳೂರಿನಲ್ಲಿ ಒಂದು ಸ್ಥಳದ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಕೂಡ ದಾಳಿ ಮುಂದುವರೆದಿದೆ. ದೆಹಲಿಯ ಆರು ಎನ್‌ಜಿಒ ಮತ್ತು ಟ್ರಸ್ಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಜಮ್ಮು ಕಾಶ್ಮೀರ ಒಕ್ಕೂಟದ ಸಿವಿಲ್ ಸೊಸೈಟಿಯ ಸಂಯೋಜಕ ಖುರ್ರಾಮ್ ಪರ್ವೇಜ್, ಎಎಫ್‌ಪಿ ಪತ್ರಕರ್ತ ಪರ್ವೇಜ್ ಅಹ್ಮದ್ ಬುಖಾರಿ, ಪರ್ವೇಜ್ ಅಹ್ಮದ್ ಮಟ್ಟಾ ಮತ್ತು ಬೆಂಗಳೂರು ಮೂಲದ ಸ್ವಾತಿ ಶೇಷಾದ್ರಿ ಮತ್ತು ಕಣ್ಮರೆಯಾದ ವ್ಯಕ್ತಿಗಳ ಪೋಷಕರ ಸಂಘದ (APDP) ಅಧ್ಯಕ್ಷ ಪರ್ವೀನಾ ಅಹಂಗರ್ ಮತ್ತು ಎನ್‌ಜಿಒ ಅಥ್ರೌಟ್ ಮತ್ತು ಗ್ರೇಟರ್ ಕಾಶ್ಮೀರ ಟ್ರಸ್ಟ್‌ನ ಕಚೇರಿಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆಯು ಎನ್‌ಜಿಒಗಳಿಂದ ಹಲವಾರು ದೋಷಾರೋಪಣೆ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದೆ. ಆದರೆ ದಾಳಿ ಮಾಡಿದ ಸ್ಥಳಗಳಲ್ಲಿ ಒಂದಾದ, ಕಣ್ಮರೆಯಾದ ವ್ಯಕ್ತಿಗಳ ಪೋಷಕರ ಸಂಘ (APDP)ವು ಇದೊಂದು “ಪೂರ್ವನಿರ್ಧರಿತ ಮತ್ತು ಯೋಜಿತ ಆಕ್ರಮಣ” ಎಂದಿದೆ.

ಇದನ್ನೂ ಓದಿ: ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಎಡಿಪಿಡಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ “ಇದು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ರಕ್ಷಕರ (ಎಚ್‌ಆರ್‌ಡಿ) ಮೇಲಿನ ಪ್ರತಿಕಾರ ಮತ್ತು ದಮನದ ಸ್ಪಷ್ಟ ಪ್ರಕರಣವಾಗಿದೆ. ನಮ್ಮ ಧ್ವನಿಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ. ನ್ಯಾಯಕ್ಕಾಗಿ ನಾವು ಇಡುವ ನಮ್ಮ ಬೇಡಿಕೆಗಳನ್ನು ಅಪರಾಧೀಕರಿಸಲಾಗುತ್ತಿದೆ” ಎಂದಿದ್ದಾರೆ.

ಬೆಂಗಳೂರಿನ ಆರ್.ಟಿ. ನಗರದ ಸ್ವಾತಿ ಶೇಷಾದ್ರಿ ಅವರು ಸಂಶೋಧಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಅವರ ನಿವಾಸಕ್ಕೆ ಭೇಟಿ ನೀಡಿದ ಎನ್‍ಐಎ ಅಧಿಕಾರಿಗಳು ಶೋಧ ನಡೆಸಿದರು. ಎಪಿಡಿಪಿ ಎನ್‌ಜಿಒ ಅಧ್ಯಕ್ಷೆ ಪರ್ವೀನಾ ಅಹಂಗರ್ ಅವರ ಜತೆ ಸ್ವಾತಿ ಅವರಿಗೆ ನಿಕಟ ಸಂಪರ್ಕ ಇತ್ತು ಎಂದು ಹೇಳಲಾಗಿದೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಈ ದಾಳಿಗಳನ್ನು ಖಂಡಿಸಿದ್ದಾರೆ ಮತ್ತು ದಾಳಿಯನ್ನು “ಭಿನ್ನಾಭಿಪ್ರಾಯದ ಮೇಲೆ ಕೆಟ್ಟ ದಬ್ಬಾಳಿಕೆ” ಎಂದು ಕರೆದಿದ್ದಾರೆ.

“ಶ್ರೀನಗರದ ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಾಮ್ ಪರ್ವೇಜ್ ಮತ್ತು ಗ್ರೇಟರ್ ಕಾಶ್ಮೀರ ಕಚೇರಿಯ ಮೇಲೆ ಎನ್ಐಎ ದಾಳಿ ನಡೆಸಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಾಭಿಪ್ರಾಯದ ಮೇಲೆ ಕೇಂದ್ರ ಸರ್ಕಾರದ ಕೆಟ್ಟ ದಮನಕ್ಕೆ ಮತ್ತೊಂದು ಉದಾಹರಣೆಯಾಗಿದೆ. ದುಃಖಕರವೆಂದರೆ,  ಎನ್‌ಐಎ ಬಿಜೆಪಿಯ ಏಜೆನ್ಸಿಯಾಗಿ ಮಾರ್ಪಟ್ಟಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಹಲವು ಮಂದಿ ಎನ್‌ಜಿಒಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ತನ್ನ ಅಜೆಂಡಾಗಳಿಗಾಗಿ ಬಳಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು ಆರೋಪಿಸಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...