Homeಮುಖಪುಟಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಕಾಶ್ಮೀರದಲ್ಲಿ ಮಾನವ ಹಕ್ಕುಗಳ ರಕ್ಷಕರ ಮೇಲಿನ ಪ್ರತಿಕಾರ ಮತ್ತು ದಮನದ ಸ್ಪಷ್ಟ ಪ್ರಕರಣವಾಗಿದೆ. ನಮ್ಮ ಧ್ವನಿಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗಾಗಿ ದೇಶ, ವಿದೇಶಗಳಿಂದ ದೇಣಿಗೆ ಸಂಗ್ರಹಿಸಲಾಗುತ್ತಿತ್ತು ಎಂಬ ಆರೋಪದ ಮೇಲೆ ವಿವಿಧ ಎನ್‌ಜಿಒ ಮತ್ತು ಟ್ರಸ್ಟ್‌ಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದೆ.

ಬುಧವಾರ(ಅ.28) ಕಾಶ್ಮೀರ ಕಣಿವೆಯ 10 ಸಂಸ್ಥೆಗಳು ಮತ್ತು ಬೆಂಗಳೂರಿನಲ್ಲಿ ಒಂದು ಸ್ಥಳದ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಕೂಡ ದಾಳಿ ಮುಂದುವರೆದಿದೆ. ದೆಹಲಿಯ ಆರು ಎನ್‌ಜಿಒ ಮತ್ತು ಟ್ರಸ್ಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಜಮ್ಮು ಕಾಶ್ಮೀರ ಒಕ್ಕೂಟದ ಸಿವಿಲ್ ಸೊಸೈಟಿಯ ಸಂಯೋಜಕ ಖುರ್ರಾಮ್ ಪರ್ವೇಜ್, ಎಎಫ್‌ಪಿ ಪತ್ರಕರ್ತ ಪರ್ವೇಜ್ ಅಹ್ಮದ್ ಬುಖಾರಿ, ಪರ್ವೇಜ್ ಅಹ್ಮದ್ ಮಟ್ಟಾ ಮತ್ತು ಬೆಂಗಳೂರು ಮೂಲದ ಸ್ವಾತಿ ಶೇಷಾದ್ರಿ ಮತ್ತು ಕಣ್ಮರೆಯಾದ ವ್ಯಕ್ತಿಗಳ ಪೋಷಕರ ಸಂಘದ (APDP) ಅಧ್ಯಕ್ಷ ಪರ್ವೀನಾ ಅಹಂಗರ್ ಮತ್ತು ಎನ್‌ಜಿಒ ಅಥ್ರೌಟ್ ಮತ್ತು ಗ್ರೇಟರ್ ಕಾಶ್ಮೀರ ಟ್ರಸ್ಟ್‌ನ ಕಚೇರಿಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆಯು ಎನ್‌ಜಿಒಗಳಿಂದ ಹಲವಾರು ದೋಷಾರೋಪಣೆ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದೆ. ಆದರೆ ದಾಳಿ ಮಾಡಿದ ಸ್ಥಳಗಳಲ್ಲಿ ಒಂದಾದ, ಕಣ್ಮರೆಯಾದ ವ್ಯಕ್ತಿಗಳ ಪೋಷಕರ ಸಂಘ (APDP)ವು ಇದೊಂದು “ಪೂರ್ವನಿರ್ಧರಿತ ಮತ್ತು ಯೋಜಿತ ಆಕ್ರಮಣ” ಎಂದಿದೆ.

ಇದನ್ನೂ ಓದಿ: ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಎಡಿಪಿಡಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ “ಇದು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ರಕ್ಷಕರ (ಎಚ್‌ಆರ್‌ಡಿ) ಮೇಲಿನ ಪ್ರತಿಕಾರ ಮತ್ತು ದಮನದ ಸ್ಪಷ್ಟ ಪ್ರಕರಣವಾಗಿದೆ. ನಮ್ಮ ಧ್ವನಿಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ. ನ್ಯಾಯಕ್ಕಾಗಿ ನಾವು ಇಡುವ ನಮ್ಮ ಬೇಡಿಕೆಗಳನ್ನು ಅಪರಾಧೀಕರಿಸಲಾಗುತ್ತಿದೆ” ಎಂದಿದ್ದಾರೆ.

ಬೆಂಗಳೂರಿನ ಆರ್.ಟಿ. ನಗರದ ಸ್ವಾತಿ ಶೇಷಾದ್ರಿ ಅವರು ಸಂಶೋಧಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಅವರ ನಿವಾಸಕ್ಕೆ ಭೇಟಿ ನೀಡಿದ ಎನ್‍ಐಎ ಅಧಿಕಾರಿಗಳು ಶೋಧ ನಡೆಸಿದರು. ಎಪಿಡಿಪಿ ಎನ್‌ಜಿಒ ಅಧ್ಯಕ್ಷೆ ಪರ್ವೀನಾ ಅಹಂಗರ್ ಅವರ ಜತೆ ಸ್ವಾತಿ ಅವರಿಗೆ ನಿಕಟ ಸಂಪರ್ಕ ಇತ್ತು ಎಂದು ಹೇಳಲಾಗಿದೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಈ ದಾಳಿಗಳನ್ನು ಖಂಡಿಸಿದ್ದಾರೆ ಮತ್ತು ದಾಳಿಯನ್ನು “ಭಿನ್ನಾಭಿಪ್ರಾಯದ ಮೇಲೆ ಕೆಟ್ಟ ದಬ್ಬಾಳಿಕೆ” ಎಂದು ಕರೆದಿದ್ದಾರೆ.

“ಶ್ರೀನಗರದ ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಾಮ್ ಪರ್ವೇಜ್ ಮತ್ತು ಗ್ರೇಟರ್ ಕಾಶ್ಮೀರ ಕಚೇರಿಯ ಮೇಲೆ ಎನ್ಐಎ ದಾಳಿ ನಡೆಸಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಾಭಿಪ್ರಾಯದ ಮೇಲೆ ಕೇಂದ್ರ ಸರ್ಕಾರದ ಕೆಟ್ಟ ದಮನಕ್ಕೆ ಮತ್ತೊಂದು ಉದಾಹರಣೆಯಾಗಿದೆ. ದುಃಖಕರವೆಂದರೆ,  ಎನ್‌ಐಎ ಬಿಜೆಪಿಯ ಏಜೆನ್ಸಿಯಾಗಿ ಮಾರ್ಪಟ್ಟಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಹಲವು ಮಂದಿ ಎನ್‌ಜಿಒಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ತನ್ನ ಅಜೆಂಡಾಗಳಿಗಾಗಿ ಬಳಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು ಆರೋಪಿಸಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...