Homeಮುಖಪುಟಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಎನ್‌ಜಿಒ ಮೇಲೆ NIA ದಾಳಿ: ಮಾನವಹಕ್ಕು ರಕ್ಷಕರ ಮೇಲಿನ ದೌರ್ಜನ್ಯ ಎಂದ ಹೋರಾಟಗಾರರು

ಕಾಶ್ಮೀರದಲ್ಲಿ ಮಾನವ ಹಕ್ಕುಗಳ ರಕ್ಷಕರ ಮೇಲಿನ ಪ್ರತಿಕಾರ ಮತ್ತು ದಮನದ ಸ್ಪಷ್ಟ ಪ್ರಕರಣವಾಗಿದೆ. ನಮ್ಮ ಧ್ವನಿಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗಾಗಿ ದೇಶ, ವಿದೇಶಗಳಿಂದ ದೇಣಿಗೆ ಸಂಗ್ರಹಿಸಲಾಗುತ್ತಿತ್ತು ಎಂಬ ಆರೋಪದ ಮೇಲೆ ವಿವಿಧ ಎನ್‌ಜಿಒ ಮತ್ತು ಟ್ರಸ್ಟ್‌ಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದೆ.

ಬುಧವಾರ(ಅ.28) ಕಾಶ್ಮೀರ ಕಣಿವೆಯ 10 ಸಂಸ್ಥೆಗಳು ಮತ್ತು ಬೆಂಗಳೂರಿನಲ್ಲಿ ಒಂದು ಸ್ಥಳದ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಕೂಡ ದಾಳಿ ಮುಂದುವರೆದಿದೆ. ದೆಹಲಿಯ ಆರು ಎನ್‌ಜಿಒ ಮತ್ತು ಟ್ರಸ್ಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಜಮ್ಮು ಕಾಶ್ಮೀರ ಒಕ್ಕೂಟದ ಸಿವಿಲ್ ಸೊಸೈಟಿಯ ಸಂಯೋಜಕ ಖುರ್ರಾಮ್ ಪರ್ವೇಜ್, ಎಎಫ್‌ಪಿ ಪತ್ರಕರ್ತ ಪರ್ವೇಜ್ ಅಹ್ಮದ್ ಬುಖಾರಿ, ಪರ್ವೇಜ್ ಅಹ್ಮದ್ ಮಟ್ಟಾ ಮತ್ತು ಬೆಂಗಳೂರು ಮೂಲದ ಸ್ವಾತಿ ಶೇಷಾದ್ರಿ ಮತ್ತು ಕಣ್ಮರೆಯಾದ ವ್ಯಕ್ತಿಗಳ ಪೋಷಕರ ಸಂಘದ (APDP) ಅಧ್ಯಕ್ಷ ಪರ್ವೀನಾ ಅಹಂಗರ್ ಮತ್ತು ಎನ್‌ಜಿಒ ಅಥ್ರೌಟ್ ಮತ್ತು ಗ್ರೇಟರ್ ಕಾಶ್ಮೀರ ಟ್ರಸ್ಟ್‌ನ ಕಚೇರಿಗಳ ಮೇಲೆ ಎನ್‌ಐಎ ದಾಳಿ ನಡೆಸಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆಯು ಎನ್‌ಜಿಒಗಳಿಂದ ಹಲವಾರು ದೋಷಾರೋಪಣೆ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಿದೆ. ಆದರೆ ದಾಳಿ ಮಾಡಿದ ಸ್ಥಳಗಳಲ್ಲಿ ಒಂದಾದ, ಕಣ್ಮರೆಯಾದ ವ್ಯಕ್ತಿಗಳ ಪೋಷಕರ ಸಂಘ (APDP)ವು ಇದೊಂದು “ಪೂರ್ವನಿರ್ಧರಿತ ಮತ್ತು ಯೋಜಿತ ಆಕ್ರಮಣ” ಎಂದಿದೆ.

ಇದನ್ನೂ ಓದಿ: ’ಏಕತ್ವಂ’; ಇದು ತನಿಷ್ಕ್‌‌ನ ಜಾಹಿರಾತಲ್ಲ, ನಿಜ ಜೀವನದ ’ವಿಶ್ವಕುಟುಂಬ’!

ಎಡಿಪಿಡಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ “ಇದು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ರಕ್ಷಕರ (ಎಚ್‌ಆರ್‌ಡಿ) ಮೇಲಿನ ಪ್ರತಿಕಾರ ಮತ್ತು ದಮನದ ಸ್ಪಷ್ಟ ಪ್ರಕರಣವಾಗಿದೆ. ನಮ್ಮ ಧ್ವನಿಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ. ನ್ಯಾಯಕ್ಕಾಗಿ ನಾವು ಇಡುವ ನಮ್ಮ ಬೇಡಿಕೆಗಳನ್ನು ಅಪರಾಧೀಕರಿಸಲಾಗುತ್ತಿದೆ” ಎಂದಿದ್ದಾರೆ.

ಬೆಂಗಳೂರಿನ ಆರ್.ಟಿ. ನಗರದ ಸ್ವಾತಿ ಶೇಷಾದ್ರಿ ಅವರು ಸಂಶೋಧಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಅವರ ನಿವಾಸಕ್ಕೆ ಭೇಟಿ ನೀಡಿದ ಎನ್‍ಐಎ ಅಧಿಕಾರಿಗಳು ಶೋಧ ನಡೆಸಿದರು. ಎಪಿಡಿಪಿ ಎನ್‌ಜಿಒ ಅಧ್ಯಕ್ಷೆ ಪರ್ವೀನಾ ಅಹಂಗರ್ ಅವರ ಜತೆ ಸ್ವಾತಿ ಅವರಿಗೆ ನಿಕಟ ಸಂಪರ್ಕ ಇತ್ತು ಎಂದು ಹೇಳಲಾಗಿದೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಈ ದಾಳಿಗಳನ್ನು ಖಂಡಿಸಿದ್ದಾರೆ ಮತ್ತು ದಾಳಿಯನ್ನು “ಭಿನ್ನಾಭಿಪ್ರಾಯದ ಮೇಲೆ ಕೆಟ್ಟ ದಬ್ಬಾಳಿಕೆ” ಎಂದು ಕರೆದಿದ್ದಾರೆ.

“ಶ್ರೀನಗರದ ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಾಮ್ ಪರ್ವೇಜ್ ಮತ್ತು ಗ್ರೇಟರ್ ಕಾಶ್ಮೀರ ಕಚೇರಿಯ ಮೇಲೆ ಎನ್ಐಎ ದಾಳಿ ನಡೆಸಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಭಿನ್ನಾಭಿಪ್ರಾಯದ ಮೇಲೆ ಕೇಂದ್ರ ಸರ್ಕಾರದ ಕೆಟ್ಟ ದಮನಕ್ಕೆ ಮತ್ತೊಂದು ಉದಾಹರಣೆಯಾಗಿದೆ. ದುಃಖಕರವೆಂದರೆ,  ಎನ್‌ಐಎ ಬಿಜೆಪಿಯ ಏಜೆನ್ಸಿಯಾಗಿ ಮಾರ್ಪಟ್ಟಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಹಲವು ಮಂದಿ ಎನ್‌ಜಿಒಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳವನ್ನು ತನ್ನ ಅಜೆಂಡಾಗಳಿಗಾಗಿ ಬಳಸುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು ಆರೋಪಿಸಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...