Homeಮುಖಪುಟಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

ಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಪತ್ರಕರ್ತ ಎನ್. ವೇಣುಗೋಪಾಲ್ ಅವರ ಹೈದರಾಬಾದ್‌ನ ಹಿಮಾಯತ್‌ ನಗರದ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ‘ವೀಕ್ಷಣಂ’ ನಿಯತಕಾಲಿಕೆಯ ಸಂಪಾದಕರಾಗಿರುವ ವೇಣುಗೋಪಾಲ್, ವರವರ ರಾವ್ ಅವರ ಅಳಿಯ.

2018ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸೆಗೆ ಪ್ರಚೋದನೆ ನೀಡಲು ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ವರವರರಾವ್ ಸೇರಿದಂತೆ 15 ಮಂದಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ವರವರರಾವ್ ಗೆ ವೈದ್ಯಕೀಯ ಕಾರಣಕ್ಕೆ 2022 ಆಗಸ್ಟ್‌ನಲ್ಲಿ ಜಾಮೀನು ದೊರೆತಿದೆ.

ನಿಷೇಧಿತ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ)ಯ ನಾಯಕ ಸಂಜಯ್ ದೀಪಕ್ ರಾವ್ ಜೊತೆಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಎನ್ಐಎ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ. ಇದೇ ಆರೋಪದ ಮೇಲೆ ಹೋರಾಟಗಾರ ರವಿ ಶರ್ಮ ಅವರ ನಿವಾಸದಲ್ಲೂ ಎನ್‌ಐಎ ಶೋಧ ನಡೆಸಿದೆ.

ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಸಂಜಯ್ ದೀಪಕ್ ರಾವ್‌ನನ್ನು ಸೈಬರಾಬಾದ್ ಪೊಲೀಸರ ಗುಪ್ತಚರ ಇಲಾಖೆ 2023ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಅದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರ ಸಂಜಯ್ ದೀಪಕ್ ರಾವ್ ಬಗ್ಗೆ ಮಾಹಿತಿ ನೀಡುವವರಿಗೆ 25 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಎನ್ಐಎ ಅಧಿಕಾರಿಗಳು ನನ್ನ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ ಎಂದು ಶೋಧದ ಬಳಿಕ ವೇಣುಗೋಪಾಲ್ ಹೇಳಿದ್ದಾರೆ. “ಎಂಟು ಸದಸ್ಯರ ಎನ್ಐಎ ತಂಡವು ಇಂದು (ಫೆ.8) ಮುಂಜಾನೆ 5 ಗಂಟೆಗೆ ಮನೆಗೆ ಬಂದು ಶೋಧ ವಾರಂಟ್ ತೋರಿಸಿದರು. ಆಗ ನಾನು ಅವರನ್ನು ಮನೆಯ ಒಳಗೆ ಬಿಟ್ಟೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ವೇಣುಗೋಪಾಲ್ ಅವರ ನಿವಾಸದಲ್ಲಿದ್ದ ಎಲ್ಲಾ ಪುಸ್ತಕಗಳನ್ನು ಎನ್‌ಐಎ ಅಧಿಕಾರಿಗಳು ಶೋಧಿಸಿದ್ದಾರೆ. ವೇಣುಗೋಪಾಲ್ ಪತ್ರಕರ್ತರಲ್ಲದೆ ಬರಹಗಾರರೂ ಹೌದು. ಅವರು ಸುಮಾರು 30 ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸುಮಾರು 30 ಪುಸ್ತಕಗಳನ್ನು ಅನುವಾದಿಸಿದ್ದಾರೆ. ಅವರು ಇತ್ತೀಚೆಗೆ ಕವಿ-ಲೇಖಕಿ ಮೀನಾ ಕಂದಸಾಮಿ ಅವರೊಂದಿಗೆ ವರವರ ರಾವ್ ಅವರ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪುಸ್ತಕದ ಶೀರ್ಷಿಕೆ ವರವರ ರಾವ್: ಎ ಲೈಫ್ ಇನ್ ಪೊಯೆಟ್ರಿ ಎಂದಾಗಿದೆ.

ತೆಲಂಗಾಣ ಪೊಲೀಸರು ಇತ್ತೀಚೆಗೆ ವೇಣುಗೋಪಾಲ್ ಸೇರಿದಂತೆ 24 ಜನರ ವಿರುದ್ಧ ಯುಎಪಿಎ ಸೆಕ್ಷನ್ 10, 13, 16, 17, 18, 18 ಬಿ, ಮತ್ತು 20, ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆಯ ಸೆಕ್ಷನ್ 8(1)(2) ಮತ್ತು ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾವೋವಾದಿ ಪಕ್ಷದ ಕೇಂದ್ರ ಸಮಿತಿಯ ಸದಸ್ಯ ಎಂದು ಪೊಲೀಸರು ಹೇಳಿಕೊಳ್ಳುವ ಸಂಜಯ್ ದೀಪಕ್ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆಯ ಆಧರಿಸಿ ವೇಣುಗೋಪಾಲ್ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗ್ತಿದೆ.

ಎಫ್‌ಐಆರ್‌ನಲ್ಲಿ ಏಳು ಮಲಯಾಳಿ ಬುದ್ಧಿಜೀವಿಗಳನ್ನು ಹೆಸರಿಸಲಾಗಿದೆ. ಹಿರಿಯ ಪತ್ರಕರ್ತ ಕೆಪಿ ಸೇತುನಾಥ್, ಮಾನವ ಹಕ್ಕುಗಳ ಕಾರ್ಯಕರ್ತ ಸಿಪಿ ರಶೀದ್, ಮಾರ್ಕ್ಸ್‌ವಾದಿ ಬುದ್ಧಿಜೀವಿ ಕೆ ಮುರಳೀಧರನ್, ಸಿಪಿ ಇಸ್ಮಾಯಿಲ್, ಸಿಪಿ ಮೊಯಿನುದ್ದೀನ್, ಪ್ರದೀಪ್ ಮತ್ತು ವರ್ಗೀಸ್ ಅವರ ಹೆಸರು ಎಫ್‌ಐಆರ್‌ನಲ್ಲಿದೆ. ಕೇರಳದಲ್ಲಿ ಸಿಪಿ ರಶೀದ್ ಮತ್ತು ಸಿಪಿ ಇಸ್ಮಾಯಿಲ್ ಅವರ ಮನೆಗಳಲ್ಲೂ ಎನ್‌ಐಎ ಶೋಧ ನಡೆಸಿದೆ.

ಎರಡು ದಶಕಗಳಿಗೂ ಹೆಚ್ಚು ಅನುಭವವಿರುವ ಹೆಸರಾಂತ ಪತ್ರಕರ್ತ ಸೇತುನಾಥ್ ಅವರು ಮಾನವ ಹಕ್ಕುಗಳಿಂದ ಹಿಡಿದು ಅಭಿವೃದ್ಧಿಯವರೆಗಿನ ವಿವಿಧ ವಿಷಯಗಳ ಕುರಿತು ಅನೇಕ ವಿಮರ್ಶಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಪ್ರತಿಭಟನಾ ಸಭೆಗಳು ಮತ್ತು ಜನರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಲಬಾರ್ ಜರ್ನಲ್ ನ ಸಂಪಾದಕರೂ ಆಗಿದ್ದಾರೆ.

‘ಸಶಸ್ತ್ರ ಕ್ರಾಂತಿಯ ಮೂಲಕ ಭಾರತ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ’ ತಾನು ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಕೆಲವು ಬುದ್ಧಿಜೀವಿಗಳನ್ನು ಭೇಟಿಯಾಗಿದ್ದಾಗಿ ಸಂಜಯ್ ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಆಧರಿಸಿ ಪತ್ರಕರ್ತರು ಮತ್ತು ಬರಹಗಾರರ ಮೇಲೆ ಪ್ರಕರಣ ದಾಖಲಿಸಿ ಶೋಧ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...