Homeಮುಖಪುಟಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

ಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಪತ್ರಕರ್ತ ಎನ್. ವೇಣುಗೋಪಾಲ್ ಅವರ ಹೈದರಾಬಾದ್‌ನ ಹಿಮಾಯತ್‌ ನಗರದ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ‘ವೀಕ್ಷಣಂ’ ನಿಯತಕಾಲಿಕೆಯ ಸಂಪಾದಕರಾಗಿರುವ ವೇಣುಗೋಪಾಲ್, ವರವರ ರಾವ್ ಅವರ ಅಳಿಯ.

2018ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸೆಗೆ ಪ್ರಚೋದನೆ ನೀಡಲು ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ವರವರರಾವ್ ಸೇರಿದಂತೆ 15 ಮಂದಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ವರವರರಾವ್ ಗೆ ವೈದ್ಯಕೀಯ ಕಾರಣಕ್ಕೆ 2022 ಆಗಸ್ಟ್‌ನಲ್ಲಿ ಜಾಮೀನು ದೊರೆತಿದೆ.

ನಿಷೇಧಿತ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ)ಯ ನಾಯಕ ಸಂಜಯ್ ದೀಪಕ್ ರಾವ್ ಜೊತೆಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಎನ್ಐಎ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ. ಇದೇ ಆರೋಪದ ಮೇಲೆ ಹೋರಾಟಗಾರ ರವಿ ಶರ್ಮ ಅವರ ನಿವಾಸದಲ್ಲೂ ಎನ್‌ಐಎ ಶೋಧ ನಡೆಸಿದೆ.

ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಸಂಜಯ್ ದೀಪಕ್ ರಾವ್‌ನನ್ನು ಸೈಬರಾಬಾದ್ ಪೊಲೀಸರ ಗುಪ್ತಚರ ಇಲಾಖೆ 2023ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಅದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರ ಸಂಜಯ್ ದೀಪಕ್ ರಾವ್ ಬಗ್ಗೆ ಮಾಹಿತಿ ನೀಡುವವರಿಗೆ 25 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಎನ್ಐಎ ಅಧಿಕಾರಿಗಳು ನನ್ನ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ ಎಂದು ಶೋಧದ ಬಳಿಕ ವೇಣುಗೋಪಾಲ್ ಹೇಳಿದ್ದಾರೆ. “ಎಂಟು ಸದಸ್ಯರ ಎನ್ಐಎ ತಂಡವು ಇಂದು (ಫೆ.8) ಮುಂಜಾನೆ 5 ಗಂಟೆಗೆ ಮನೆಗೆ ಬಂದು ಶೋಧ ವಾರಂಟ್ ತೋರಿಸಿದರು. ಆಗ ನಾನು ಅವರನ್ನು ಮನೆಯ ಒಳಗೆ ಬಿಟ್ಟೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ವೇಣುಗೋಪಾಲ್ ಅವರ ನಿವಾಸದಲ್ಲಿದ್ದ ಎಲ್ಲಾ ಪುಸ್ತಕಗಳನ್ನು ಎನ್‌ಐಎ ಅಧಿಕಾರಿಗಳು ಶೋಧಿಸಿದ್ದಾರೆ. ವೇಣುಗೋಪಾಲ್ ಪತ್ರಕರ್ತರಲ್ಲದೆ ಬರಹಗಾರರೂ ಹೌದು. ಅವರು ಸುಮಾರು 30 ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸುಮಾರು 30 ಪುಸ್ತಕಗಳನ್ನು ಅನುವಾದಿಸಿದ್ದಾರೆ. ಅವರು ಇತ್ತೀಚೆಗೆ ಕವಿ-ಲೇಖಕಿ ಮೀನಾ ಕಂದಸಾಮಿ ಅವರೊಂದಿಗೆ ವರವರ ರಾವ್ ಅವರ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪುಸ್ತಕದ ಶೀರ್ಷಿಕೆ ವರವರ ರಾವ್: ಎ ಲೈಫ್ ಇನ್ ಪೊಯೆಟ್ರಿ ಎಂದಾಗಿದೆ.

ತೆಲಂಗಾಣ ಪೊಲೀಸರು ಇತ್ತೀಚೆಗೆ ವೇಣುಗೋಪಾಲ್ ಸೇರಿದಂತೆ 24 ಜನರ ವಿರುದ್ಧ ಯುಎಪಿಎ ಸೆಕ್ಷನ್ 10, 13, 16, 17, 18, 18 ಬಿ, ಮತ್ತು 20, ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆಯ ಸೆಕ್ಷನ್ 8(1)(2) ಮತ್ತು ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾವೋವಾದಿ ಪಕ್ಷದ ಕೇಂದ್ರ ಸಮಿತಿಯ ಸದಸ್ಯ ಎಂದು ಪೊಲೀಸರು ಹೇಳಿಕೊಳ್ಳುವ ಸಂಜಯ್ ದೀಪಕ್ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆಯ ಆಧರಿಸಿ ವೇಣುಗೋಪಾಲ್ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗ್ತಿದೆ.

ಎಫ್‌ಐಆರ್‌ನಲ್ಲಿ ಏಳು ಮಲಯಾಳಿ ಬುದ್ಧಿಜೀವಿಗಳನ್ನು ಹೆಸರಿಸಲಾಗಿದೆ. ಹಿರಿಯ ಪತ್ರಕರ್ತ ಕೆಪಿ ಸೇತುನಾಥ್, ಮಾನವ ಹಕ್ಕುಗಳ ಕಾರ್ಯಕರ್ತ ಸಿಪಿ ರಶೀದ್, ಮಾರ್ಕ್ಸ್‌ವಾದಿ ಬುದ್ಧಿಜೀವಿ ಕೆ ಮುರಳೀಧರನ್, ಸಿಪಿ ಇಸ್ಮಾಯಿಲ್, ಸಿಪಿ ಮೊಯಿನುದ್ದೀನ್, ಪ್ರದೀಪ್ ಮತ್ತು ವರ್ಗೀಸ್ ಅವರ ಹೆಸರು ಎಫ್‌ಐಆರ್‌ನಲ್ಲಿದೆ. ಕೇರಳದಲ್ಲಿ ಸಿಪಿ ರಶೀದ್ ಮತ್ತು ಸಿಪಿ ಇಸ್ಮಾಯಿಲ್ ಅವರ ಮನೆಗಳಲ್ಲೂ ಎನ್‌ಐಎ ಶೋಧ ನಡೆಸಿದೆ.

ಎರಡು ದಶಕಗಳಿಗೂ ಹೆಚ್ಚು ಅನುಭವವಿರುವ ಹೆಸರಾಂತ ಪತ್ರಕರ್ತ ಸೇತುನಾಥ್ ಅವರು ಮಾನವ ಹಕ್ಕುಗಳಿಂದ ಹಿಡಿದು ಅಭಿವೃದ್ಧಿಯವರೆಗಿನ ವಿವಿಧ ವಿಷಯಗಳ ಕುರಿತು ಅನೇಕ ವಿಮರ್ಶಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಪ್ರತಿಭಟನಾ ಸಭೆಗಳು ಮತ್ತು ಜನರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಲಬಾರ್ ಜರ್ನಲ್ ನ ಸಂಪಾದಕರೂ ಆಗಿದ್ದಾರೆ.

‘ಸಶಸ್ತ್ರ ಕ್ರಾಂತಿಯ ಮೂಲಕ ಭಾರತ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ’ ತಾನು ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಕೆಲವು ಬುದ್ಧಿಜೀವಿಗಳನ್ನು ಭೇಟಿಯಾಗಿದ್ದಾಗಿ ಸಂಜಯ್ ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಆಧರಿಸಿ ಪತ್ರಕರ್ತರು ಮತ್ತು ಬರಹಗಾರರ ಮೇಲೆ ಪ್ರಕರಣ ದಾಖಲಿಸಿ ಶೋಧ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...