Homeಮುಖಪುಟಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

ಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಪತ್ರಕರ್ತ ಎನ್. ವೇಣುಗೋಪಾಲ್ ಅವರ ಹೈದರಾಬಾದ್‌ನ ಹಿಮಾಯತ್‌ ನಗರದ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ‘ವೀಕ್ಷಣಂ’ ನಿಯತಕಾಲಿಕೆಯ ಸಂಪಾದಕರಾಗಿರುವ ವೇಣುಗೋಪಾಲ್, ವರವರ ರಾವ್ ಅವರ ಅಳಿಯ.

2018ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸೆಗೆ ಪ್ರಚೋದನೆ ನೀಡಲು ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ವರವರರಾವ್ ಸೇರಿದಂತೆ 15 ಮಂದಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ವರವರರಾವ್ ಗೆ ವೈದ್ಯಕೀಯ ಕಾರಣಕ್ಕೆ 2022 ಆಗಸ್ಟ್‌ನಲ್ಲಿ ಜಾಮೀನು ದೊರೆತಿದೆ.

ನಿಷೇಧಿತ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ)ಯ ನಾಯಕ ಸಂಜಯ್ ದೀಪಕ್ ರಾವ್ ಜೊತೆಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಎನ್ಐಎ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ. ಇದೇ ಆರೋಪದ ಮೇಲೆ ಹೋರಾಟಗಾರ ರವಿ ಶರ್ಮ ಅವರ ನಿವಾಸದಲ್ಲೂ ಎನ್‌ಐಎ ಶೋಧ ನಡೆಸಿದೆ.

ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಸಂಜಯ್ ದೀಪಕ್ ರಾವ್‌ನನ್ನು ಸೈಬರಾಬಾದ್ ಪೊಲೀಸರ ಗುಪ್ತಚರ ಇಲಾಖೆ 2023ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಅದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರ ಸಂಜಯ್ ದೀಪಕ್ ರಾವ್ ಬಗ್ಗೆ ಮಾಹಿತಿ ನೀಡುವವರಿಗೆ 25 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಎನ್ಐಎ ಅಧಿಕಾರಿಗಳು ನನ್ನ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ ಎಂದು ಶೋಧದ ಬಳಿಕ ವೇಣುಗೋಪಾಲ್ ಹೇಳಿದ್ದಾರೆ. “ಎಂಟು ಸದಸ್ಯರ ಎನ್ಐಎ ತಂಡವು ಇಂದು (ಫೆ.8) ಮುಂಜಾನೆ 5 ಗಂಟೆಗೆ ಮನೆಗೆ ಬಂದು ಶೋಧ ವಾರಂಟ್ ತೋರಿಸಿದರು. ಆಗ ನಾನು ಅವರನ್ನು ಮನೆಯ ಒಳಗೆ ಬಿಟ್ಟೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ವೇಣುಗೋಪಾಲ್ ಅವರ ನಿವಾಸದಲ್ಲಿದ್ದ ಎಲ್ಲಾ ಪುಸ್ತಕಗಳನ್ನು ಎನ್‌ಐಎ ಅಧಿಕಾರಿಗಳು ಶೋಧಿಸಿದ್ದಾರೆ. ವೇಣುಗೋಪಾಲ್ ಪತ್ರಕರ್ತರಲ್ಲದೆ ಬರಹಗಾರರೂ ಹೌದು. ಅವರು ಸುಮಾರು 30 ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸುಮಾರು 30 ಪುಸ್ತಕಗಳನ್ನು ಅನುವಾದಿಸಿದ್ದಾರೆ. ಅವರು ಇತ್ತೀಚೆಗೆ ಕವಿ-ಲೇಖಕಿ ಮೀನಾ ಕಂದಸಾಮಿ ಅವರೊಂದಿಗೆ ವರವರ ರಾವ್ ಅವರ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪುಸ್ತಕದ ಶೀರ್ಷಿಕೆ ವರವರ ರಾವ್: ಎ ಲೈಫ್ ಇನ್ ಪೊಯೆಟ್ರಿ ಎಂದಾಗಿದೆ.

ತೆಲಂಗಾಣ ಪೊಲೀಸರು ಇತ್ತೀಚೆಗೆ ವೇಣುಗೋಪಾಲ್ ಸೇರಿದಂತೆ 24 ಜನರ ವಿರುದ್ಧ ಯುಎಪಿಎ ಸೆಕ್ಷನ್ 10, 13, 16, 17, 18, 18 ಬಿ, ಮತ್ತು 20, ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆಯ ಸೆಕ್ಷನ್ 8(1)(2) ಮತ್ತು ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾವೋವಾದಿ ಪಕ್ಷದ ಕೇಂದ್ರ ಸಮಿತಿಯ ಸದಸ್ಯ ಎಂದು ಪೊಲೀಸರು ಹೇಳಿಕೊಳ್ಳುವ ಸಂಜಯ್ ದೀಪಕ್ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆಯ ಆಧರಿಸಿ ವೇಣುಗೋಪಾಲ್ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗ್ತಿದೆ.

ಎಫ್‌ಐಆರ್‌ನಲ್ಲಿ ಏಳು ಮಲಯಾಳಿ ಬುದ್ಧಿಜೀವಿಗಳನ್ನು ಹೆಸರಿಸಲಾಗಿದೆ. ಹಿರಿಯ ಪತ್ರಕರ್ತ ಕೆಪಿ ಸೇತುನಾಥ್, ಮಾನವ ಹಕ್ಕುಗಳ ಕಾರ್ಯಕರ್ತ ಸಿಪಿ ರಶೀದ್, ಮಾರ್ಕ್ಸ್‌ವಾದಿ ಬುದ್ಧಿಜೀವಿ ಕೆ ಮುರಳೀಧರನ್, ಸಿಪಿ ಇಸ್ಮಾಯಿಲ್, ಸಿಪಿ ಮೊಯಿನುದ್ದೀನ್, ಪ್ರದೀಪ್ ಮತ್ತು ವರ್ಗೀಸ್ ಅವರ ಹೆಸರು ಎಫ್‌ಐಆರ್‌ನಲ್ಲಿದೆ. ಕೇರಳದಲ್ಲಿ ಸಿಪಿ ರಶೀದ್ ಮತ್ತು ಸಿಪಿ ಇಸ್ಮಾಯಿಲ್ ಅವರ ಮನೆಗಳಲ್ಲೂ ಎನ್‌ಐಎ ಶೋಧ ನಡೆಸಿದೆ.

ಎರಡು ದಶಕಗಳಿಗೂ ಹೆಚ್ಚು ಅನುಭವವಿರುವ ಹೆಸರಾಂತ ಪತ್ರಕರ್ತ ಸೇತುನಾಥ್ ಅವರು ಮಾನವ ಹಕ್ಕುಗಳಿಂದ ಹಿಡಿದು ಅಭಿವೃದ್ಧಿಯವರೆಗಿನ ವಿವಿಧ ವಿಷಯಗಳ ಕುರಿತು ಅನೇಕ ವಿಮರ್ಶಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಪ್ರತಿಭಟನಾ ಸಭೆಗಳು ಮತ್ತು ಜನರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಲಬಾರ್ ಜರ್ನಲ್ ನ ಸಂಪಾದಕರೂ ಆಗಿದ್ದಾರೆ.

‘ಸಶಸ್ತ್ರ ಕ್ರಾಂತಿಯ ಮೂಲಕ ಭಾರತ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ’ ತಾನು ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಕೆಲವು ಬುದ್ಧಿಜೀವಿಗಳನ್ನು ಭೇಟಿಯಾಗಿದ್ದಾಗಿ ಸಂಜಯ್ ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಆಧರಿಸಿ ಪತ್ರಕರ್ತರು ಮತ್ತು ಬರಹಗಾರರ ಮೇಲೆ ಪ್ರಕರಣ ದಾಖಲಿಸಿ ಶೋಧ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...