Homeಮುಖಪುಟಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

ಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಪತ್ರಕರ್ತ ಎನ್. ವೇಣುಗೋಪಾಲ್ ಅವರ ಹೈದರಾಬಾದ್‌ನ ಹಿಮಾಯತ್‌ ನಗರದ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ‘ವೀಕ್ಷಣಂ’ ನಿಯತಕಾಲಿಕೆಯ ಸಂಪಾದಕರಾಗಿರುವ ವೇಣುಗೋಪಾಲ್, ವರವರ ರಾವ್ ಅವರ ಅಳಿಯ.

2018ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸೆಗೆ ಪ್ರಚೋದನೆ ನೀಡಲು ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ವರವರರಾವ್ ಸೇರಿದಂತೆ 15 ಮಂದಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ವರವರರಾವ್ ಗೆ ವೈದ್ಯಕೀಯ ಕಾರಣಕ್ಕೆ 2022 ಆಗಸ್ಟ್‌ನಲ್ಲಿ ಜಾಮೀನು ದೊರೆತಿದೆ.

ನಿಷೇಧಿತ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ)ಯ ನಾಯಕ ಸಂಜಯ್ ದೀಪಕ್ ರಾವ್ ಜೊತೆಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಎನ್ಐಎ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ. ಇದೇ ಆರೋಪದ ಮೇಲೆ ಹೋರಾಟಗಾರ ರವಿ ಶರ್ಮ ಅವರ ನಿವಾಸದಲ್ಲೂ ಎನ್‌ಐಎ ಶೋಧ ನಡೆಸಿದೆ.

ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಸಂಜಯ್ ದೀಪಕ್ ರಾವ್‌ನನ್ನು ಸೈಬರಾಬಾದ್ ಪೊಲೀಸರ ಗುಪ್ತಚರ ಇಲಾಖೆ 2023ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಅದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರ ಸಂಜಯ್ ದೀಪಕ್ ರಾವ್ ಬಗ್ಗೆ ಮಾಹಿತಿ ನೀಡುವವರಿಗೆ 25 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಎನ್ಐಎ ಅಧಿಕಾರಿಗಳು ನನ್ನ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ ಎಂದು ಶೋಧದ ಬಳಿಕ ವೇಣುಗೋಪಾಲ್ ಹೇಳಿದ್ದಾರೆ. “ಎಂಟು ಸದಸ್ಯರ ಎನ್ಐಎ ತಂಡವು ಇಂದು (ಫೆ.8) ಮುಂಜಾನೆ 5 ಗಂಟೆಗೆ ಮನೆಗೆ ಬಂದು ಶೋಧ ವಾರಂಟ್ ತೋರಿಸಿದರು. ಆಗ ನಾನು ಅವರನ್ನು ಮನೆಯ ಒಳಗೆ ಬಿಟ್ಟೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ವೇಣುಗೋಪಾಲ್ ಅವರ ನಿವಾಸದಲ್ಲಿದ್ದ ಎಲ್ಲಾ ಪುಸ್ತಕಗಳನ್ನು ಎನ್‌ಐಎ ಅಧಿಕಾರಿಗಳು ಶೋಧಿಸಿದ್ದಾರೆ. ವೇಣುಗೋಪಾಲ್ ಪತ್ರಕರ್ತರಲ್ಲದೆ ಬರಹಗಾರರೂ ಹೌದು. ಅವರು ಸುಮಾರು 30 ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸುಮಾರು 30 ಪುಸ್ತಕಗಳನ್ನು ಅನುವಾದಿಸಿದ್ದಾರೆ. ಅವರು ಇತ್ತೀಚೆಗೆ ಕವಿ-ಲೇಖಕಿ ಮೀನಾ ಕಂದಸಾಮಿ ಅವರೊಂದಿಗೆ ವರವರ ರಾವ್ ಅವರ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪುಸ್ತಕದ ಶೀರ್ಷಿಕೆ ವರವರ ರಾವ್: ಎ ಲೈಫ್ ಇನ್ ಪೊಯೆಟ್ರಿ ಎಂದಾಗಿದೆ.

ತೆಲಂಗಾಣ ಪೊಲೀಸರು ಇತ್ತೀಚೆಗೆ ವೇಣುಗೋಪಾಲ್ ಸೇರಿದಂತೆ 24 ಜನರ ವಿರುದ್ಧ ಯುಎಪಿಎ ಸೆಕ್ಷನ್ 10, 13, 16, 17, 18, 18 ಬಿ, ಮತ್ತು 20, ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆಯ ಸೆಕ್ಷನ್ 8(1)(2) ಮತ್ತು ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾವೋವಾದಿ ಪಕ್ಷದ ಕೇಂದ್ರ ಸಮಿತಿಯ ಸದಸ್ಯ ಎಂದು ಪೊಲೀಸರು ಹೇಳಿಕೊಳ್ಳುವ ಸಂಜಯ್ ದೀಪಕ್ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆಯ ಆಧರಿಸಿ ವೇಣುಗೋಪಾಲ್ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗ್ತಿದೆ.

ಎಫ್‌ಐಆರ್‌ನಲ್ಲಿ ಏಳು ಮಲಯಾಳಿ ಬುದ್ಧಿಜೀವಿಗಳನ್ನು ಹೆಸರಿಸಲಾಗಿದೆ. ಹಿರಿಯ ಪತ್ರಕರ್ತ ಕೆಪಿ ಸೇತುನಾಥ್, ಮಾನವ ಹಕ್ಕುಗಳ ಕಾರ್ಯಕರ್ತ ಸಿಪಿ ರಶೀದ್, ಮಾರ್ಕ್ಸ್‌ವಾದಿ ಬುದ್ಧಿಜೀವಿ ಕೆ ಮುರಳೀಧರನ್, ಸಿಪಿ ಇಸ್ಮಾಯಿಲ್, ಸಿಪಿ ಮೊಯಿನುದ್ದೀನ್, ಪ್ರದೀಪ್ ಮತ್ತು ವರ್ಗೀಸ್ ಅವರ ಹೆಸರು ಎಫ್‌ಐಆರ್‌ನಲ್ಲಿದೆ. ಕೇರಳದಲ್ಲಿ ಸಿಪಿ ರಶೀದ್ ಮತ್ತು ಸಿಪಿ ಇಸ್ಮಾಯಿಲ್ ಅವರ ಮನೆಗಳಲ್ಲೂ ಎನ್‌ಐಎ ಶೋಧ ನಡೆಸಿದೆ.

ಎರಡು ದಶಕಗಳಿಗೂ ಹೆಚ್ಚು ಅನುಭವವಿರುವ ಹೆಸರಾಂತ ಪತ್ರಕರ್ತ ಸೇತುನಾಥ್ ಅವರು ಮಾನವ ಹಕ್ಕುಗಳಿಂದ ಹಿಡಿದು ಅಭಿವೃದ್ಧಿಯವರೆಗಿನ ವಿವಿಧ ವಿಷಯಗಳ ಕುರಿತು ಅನೇಕ ವಿಮರ್ಶಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಪ್ರತಿಭಟನಾ ಸಭೆಗಳು ಮತ್ತು ಜನರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಲಬಾರ್ ಜರ್ನಲ್ ನ ಸಂಪಾದಕರೂ ಆಗಿದ್ದಾರೆ.

‘ಸಶಸ್ತ್ರ ಕ್ರಾಂತಿಯ ಮೂಲಕ ಭಾರತ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ’ ತಾನು ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಕೆಲವು ಬುದ್ಧಿಜೀವಿಗಳನ್ನು ಭೇಟಿಯಾಗಿದ್ದಾಗಿ ಸಂಜಯ್ ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಆಧರಿಸಿ ಪತ್ರಕರ್ತರು ಮತ್ತು ಬರಹಗಾರರ ಮೇಲೆ ಪ್ರಕರಣ ದಾಖಲಿಸಿ ಶೋಧ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...