Homeಮುಖಪುಟಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

ಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಪತ್ರಕರ್ತ ಎನ್. ವೇಣುಗೋಪಾಲ್ ಅವರ ಹೈದರಾಬಾದ್‌ನ ಹಿಮಾಯತ್‌ ನಗರದ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ‘ವೀಕ್ಷಣಂ’ ನಿಯತಕಾಲಿಕೆಯ ಸಂಪಾದಕರಾಗಿರುವ ವೇಣುಗೋಪಾಲ್, ವರವರ ರಾವ್ ಅವರ ಅಳಿಯ.

2018ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸೆಗೆ ಪ್ರಚೋದನೆ ನೀಡಲು ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ವರವರರಾವ್ ಸೇರಿದಂತೆ 15 ಮಂದಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ವರವರರಾವ್ ಗೆ ವೈದ್ಯಕೀಯ ಕಾರಣಕ್ಕೆ 2022 ಆಗಸ್ಟ್‌ನಲ್ಲಿ ಜಾಮೀನು ದೊರೆತಿದೆ.

ನಿಷೇಧಿತ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ)ಯ ನಾಯಕ ಸಂಜಯ್ ದೀಪಕ್ ರಾವ್ ಜೊತೆಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಎನ್ಐಎ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ. ಇದೇ ಆರೋಪದ ಮೇಲೆ ಹೋರಾಟಗಾರ ರವಿ ಶರ್ಮ ಅವರ ನಿವಾಸದಲ್ಲೂ ಎನ್‌ಐಎ ಶೋಧ ನಡೆಸಿದೆ.

ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಸಂಜಯ್ ದೀಪಕ್ ರಾವ್‌ನನ್ನು ಸೈಬರಾಬಾದ್ ಪೊಲೀಸರ ಗುಪ್ತಚರ ಇಲಾಖೆ 2023ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಅದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರ ಸಂಜಯ್ ದೀಪಕ್ ರಾವ್ ಬಗ್ಗೆ ಮಾಹಿತಿ ನೀಡುವವರಿಗೆ 25 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಎನ್ಐಎ ಅಧಿಕಾರಿಗಳು ನನ್ನ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ ಎಂದು ಶೋಧದ ಬಳಿಕ ವೇಣುಗೋಪಾಲ್ ಹೇಳಿದ್ದಾರೆ. “ಎಂಟು ಸದಸ್ಯರ ಎನ್ಐಎ ತಂಡವು ಇಂದು (ಫೆ.8) ಮುಂಜಾನೆ 5 ಗಂಟೆಗೆ ಮನೆಗೆ ಬಂದು ಶೋಧ ವಾರಂಟ್ ತೋರಿಸಿದರು. ಆಗ ನಾನು ಅವರನ್ನು ಮನೆಯ ಒಳಗೆ ಬಿಟ್ಟೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ವೇಣುಗೋಪಾಲ್ ಅವರ ನಿವಾಸದಲ್ಲಿದ್ದ ಎಲ್ಲಾ ಪುಸ್ತಕಗಳನ್ನು ಎನ್‌ಐಎ ಅಧಿಕಾರಿಗಳು ಶೋಧಿಸಿದ್ದಾರೆ. ವೇಣುಗೋಪಾಲ್ ಪತ್ರಕರ್ತರಲ್ಲದೆ ಬರಹಗಾರರೂ ಹೌದು. ಅವರು ಸುಮಾರು 30 ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸುಮಾರು 30 ಪುಸ್ತಕಗಳನ್ನು ಅನುವಾದಿಸಿದ್ದಾರೆ. ಅವರು ಇತ್ತೀಚೆಗೆ ಕವಿ-ಲೇಖಕಿ ಮೀನಾ ಕಂದಸಾಮಿ ಅವರೊಂದಿಗೆ ವರವರ ರಾವ್ ಅವರ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪುಸ್ತಕದ ಶೀರ್ಷಿಕೆ ವರವರ ರಾವ್: ಎ ಲೈಫ್ ಇನ್ ಪೊಯೆಟ್ರಿ ಎಂದಾಗಿದೆ.

ತೆಲಂಗಾಣ ಪೊಲೀಸರು ಇತ್ತೀಚೆಗೆ ವೇಣುಗೋಪಾಲ್ ಸೇರಿದಂತೆ 24 ಜನರ ವಿರುದ್ಧ ಯುಎಪಿಎ ಸೆಕ್ಷನ್ 10, 13, 16, 17, 18, 18 ಬಿ, ಮತ್ತು 20, ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆಯ ಸೆಕ್ಷನ್ 8(1)(2) ಮತ್ತು ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾವೋವಾದಿ ಪಕ್ಷದ ಕೇಂದ್ರ ಸಮಿತಿಯ ಸದಸ್ಯ ಎಂದು ಪೊಲೀಸರು ಹೇಳಿಕೊಳ್ಳುವ ಸಂಜಯ್ ದೀಪಕ್ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆಯ ಆಧರಿಸಿ ವೇಣುಗೋಪಾಲ್ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗ್ತಿದೆ.

ಎಫ್‌ಐಆರ್‌ನಲ್ಲಿ ಏಳು ಮಲಯಾಳಿ ಬುದ್ಧಿಜೀವಿಗಳನ್ನು ಹೆಸರಿಸಲಾಗಿದೆ. ಹಿರಿಯ ಪತ್ರಕರ್ತ ಕೆಪಿ ಸೇತುನಾಥ್, ಮಾನವ ಹಕ್ಕುಗಳ ಕಾರ್ಯಕರ್ತ ಸಿಪಿ ರಶೀದ್, ಮಾರ್ಕ್ಸ್‌ವಾದಿ ಬುದ್ಧಿಜೀವಿ ಕೆ ಮುರಳೀಧರನ್, ಸಿಪಿ ಇಸ್ಮಾಯಿಲ್, ಸಿಪಿ ಮೊಯಿನುದ್ದೀನ್, ಪ್ರದೀಪ್ ಮತ್ತು ವರ್ಗೀಸ್ ಅವರ ಹೆಸರು ಎಫ್‌ಐಆರ್‌ನಲ್ಲಿದೆ. ಕೇರಳದಲ್ಲಿ ಸಿಪಿ ರಶೀದ್ ಮತ್ತು ಸಿಪಿ ಇಸ್ಮಾಯಿಲ್ ಅವರ ಮನೆಗಳಲ್ಲೂ ಎನ್‌ಐಎ ಶೋಧ ನಡೆಸಿದೆ.

ಎರಡು ದಶಕಗಳಿಗೂ ಹೆಚ್ಚು ಅನುಭವವಿರುವ ಹೆಸರಾಂತ ಪತ್ರಕರ್ತ ಸೇತುನಾಥ್ ಅವರು ಮಾನವ ಹಕ್ಕುಗಳಿಂದ ಹಿಡಿದು ಅಭಿವೃದ್ಧಿಯವರೆಗಿನ ವಿವಿಧ ವಿಷಯಗಳ ಕುರಿತು ಅನೇಕ ವಿಮರ್ಶಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಪ್ರತಿಭಟನಾ ಸಭೆಗಳು ಮತ್ತು ಜನರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಲಬಾರ್ ಜರ್ನಲ್ ನ ಸಂಪಾದಕರೂ ಆಗಿದ್ದಾರೆ.

‘ಸಶಸ್ತ್ರ ಕ್ರಾಂತಿಯ ಮೂಲಕ ಭಾರತ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ’ ತಾನು ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಕೆಲವು ಬುದ್ಧಿಜೀವಿಗಳನ್ನು ಭೇಟಿಯಾಗಿದ್ದಾಗಿ ಸಂಜಯ್ ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಆಧರಿಸಿ ಪತ್ರಕರ್ತರು ಮತ್ತು ಬರಹಗಾರರ ಮೇಲೆ ಪ್ರಕರಣ ದಾಖಲಿಸಿ ಶೋಧ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...