Homeಮುಖಪುಟತೆಲಂಗಾಣ, ಆಂಧ್ರದಲ್ಲಿ ಸಾಮಾಜಿಕ ಕಾರ್ಯಕರ್ತರ ನಿವಾಸಗಳ ಮೇಲೆ ಎನ್‌ಐಎ ದಾಳಿ

ತೆಲಂಗಾಣ, ಆಂಧ್ರದಲ್ಲಿ ಸಾಮಾಜಿಕ ಕಾರ್ಯಕರ್ತರ ನಿವಾಸಗಳ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಮಾವೋವಾದಿಗಳ ಜೊತೆಗಿನ ಲಿಂಕ್‌ ಕುರಿತ ತನಿಖೆಯ ಭಾಗವಾಗಿ ಎನ್‌ಐಎ ಅಧಿಕಾರಿಗಳು ನಾಗರಿಕ ಹಕ್ಕುಗಳ ಸಂಘಟನೆಗಳ ನಾಯಕರ ಮತ್ತು ಸಾಮಾಜಿಕ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ನಾಗರಿಕ ಹಕ್ಕುಗಳ ಕಾರ್ಯಕರ್ತರು ಮತ್ತು ಅಮರುಳ ಬಂಧು ಮಿತ್ರರ ಸಂಘ, ಕುಲ ನಿರ್ಮೂಲನ ಹೋರಾಟ ಸಮಿತಿ (ಕೆಎನ್‌ಪಿಎಸ್), ಚೈತನ್ಯ ಮಹಿಳಾ ಸಂಘದ ನಾಯಕರು ಮತ್ತು ಅವರ ಸಂಬಂಧಿಕರ ಮನೆಗಳಲ್ಲಿ  ಎನ್‌ಐಎ ಅಧಿಕಾರಿಗಳು ಮುಂಜಾನೆಯೇ ಶೋಧ ಆರಂಭಿಸಿದ್ದಾರೆ. ಶೋಧಕ್ಕೊಳಗಾದ ಕೆಲವರನ್ನು ಎನ್‌ಐಎ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದೆ ಎಂದು ಹೇಳಲಾಗಿದೆ.

ಮಾವೋವಾದಿಗಳ ಜೊತೆಗಿನ ನಂಟು  ಹೊಂದಿದ್ದಾರೆಂದು ಆರೋಪಿಸಿ ಎನ್‌ಐಎ ದಾಳಿ ನಡೆದಿದೆ ಎಂದು ಹೇಳಲಾಗದೆ. ಎನ್‌ಐಎ ಅಧಿಕಾರಿಗಳು ಶೋಧದ ಬಳಿಕ ಸಿಆರ್‌ಪಿಸಿಯ ಸೆಕ್ಷನ್ 160ರಡಿಯಲ್ಲಿ ಕೆಲವರಿಗೆ ನೋಟಿಸ್‌ಗಳನ್ನು ನೀಡಿದ್ದಾರೆ.

ನವೆಂಬರ್ 2020ರಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂ ಗ್ರಾಮಾಂತರ ಪೊಲೀಸರು ಬಂಧಿಸಿದ ಪಾಂಗಿ ನಾಗಣ್ಣ ಎಂಬ ಟಿವಿ ಪತ್ರಕರ್ತನಿಗೆ ಸಂಬಂಧಿಸಿದ ಮುಂಚಿಂಗಿಪುಟ್ಟು ಪ್ರಕರಣಕ್ಕೆ ಸಂಬಂಧಿಸಿ ಈ ಶೋಧ ನಡೆದಿದೆ ಎಂದು ಹೇಳಲಾಗಿದೆ.

ಪೊಲೀಸರು ನಾಗಣ್ಣ  ಮತ್ತು ಇತರ 63 ಮಂದಿ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಮಾನವ ಹಕ್ಕುಗಳ ವೇದಿಕೆಯ ವಿ.ಎಸ್.ಕೃಷ್ಣ, ಎಪಿ ನಾಗರಿಕ ಸ್ವಾತಂತ್ರ್ಯ ಸಮಿತಿಯ ವಕೀಲ ವಿ.ರಘುನಾಥ್, ಚಿಲುಕಾ ಚಂದ್ರಶೇಖರ್, ಡಪ್ಪು ರಮೇಶ್, ವಿರಾಸಂನ ವರಲಕ್ಷ್ಮಿ ಸೇರಿದಂತೆ ಅನೇಕ ಕಾರ್ಯಕರ್ತರನ್ನು ವಿಶಾಖಪಟ್ಟಣ ಗ್ರಾಮಾಂತರ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿತ್ತು.

ಹೈದರಾಬಾದ್‌ನಲ್ಲಿರುವ ಸಾಮಾಜಿಕ ಕಾರ್ಯಕರ್ತೆ ಭವಾನಿ ಮತ್ತು ವಕೀಲ ಸುರೇಶ್ ಅವರ ಮನೆಗಳಲ್ಲಿ ಎನ್‌ಐಎ ತಂಡ ಶೋಧ ನಡೆಸಿದೆ. ಆಂಧ್ರಪ್ರದೇಶದ ಗುಂಟೂರು, ವಿಜಯವಾಡ, ಪೊನ್ನೂರು, ಮಂಗಳಗಿರಿ, ಬಾಪಟ್ಲಾ, ನೆಲ್ಲೂರು, ತಿರುಪತಿ, ಅನಂತಪುರ ಸೇರಿ ವಿವಿಧೆಡೆ ಶೋಧ ಕಾರ್ಯ ನಡೆದಿದೆ.

ಎನ್‌ಐಎ ಅಧಿಕಾರಿಗಳು ಗುಂಟೂರು ಜಿಲ್ಲಾ ನಾಗರಿಕ ಸ್ವಾತಂತ್ರ್ಯ ಸಮಿತಿ ಅಧ್ಯಕ್ಷ ರಾಜಾ ರಾವ್ ಅವರ ಪೊನ್ನೂರಿನ ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಪ್ರಜಾ ತಂತ್ರ ಪಕ್ಷವನ್ನು ನಡೆಸುತ್ತಿರುವ ಅವರ ಸ್ನೇಹಿತ ಟಿ ಸುಬ್ಬರಾವ್ ಅವರ ನಿವಾಸದಲ್ಲೂ ಶೋಧ ನಡೆಸಿದ್ದಾರೆ. ನೆಲ್ಲೂರಿನಲ್ಲಿ ಯಳ್ಳಂಕಿ ವೆಂಕಟೇಶ್ವರಲು, ತಿರುಪತಿಯ ಕ್ರಾಂತಿ ಚೈತನ್ಯ ಮತ್ತು ತಿರುಪತಿಯ ಕವಲಿ ಬಾಲಯ್ಯ ಅವರ ಮನೆಗಳಲ್ಲೂ ಶೋಧ ಕಾರ್ಯ ನಡೆದಿದೆ.

ಇದನ್ನು ಓದಿ: ಜಾತಿಗಣತಿ ವರದಿ ಬಿಡುಗಡೆಗೊಳಿಸಿದ ಬಿಹಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...