HomeಮುಖಪುಟIISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

- Advertisement -
- Advertisement -

2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಲಯ ಪ್ರಕರಣದ ಆರೋಪಿ ಮೊಹಮ್ಮದ್ ಹಬೀಬ್ ಅವರನ್ನು ಇಂದು ದೋಷಮುಕ್ತಗೊಳಿಸಿದೆ. ಮೊಹಮ್ಮದ್ ಹಬೀಬ್ ಅವರು UAPA ಕಾಯ್ದೆಯಡಿ ಕಳೆದ 4 ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದರು.

2005 ರ ಡಿಸೆಂಬರ್‌ನಲ್ಲಿ ಬೆಂಗಳೂರಿನ IISC ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ವ್ಯಕ್ತಿ ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 7 ನೇ ಆರೋಪಿಯಾಗಿ ಹಬೀಬ್ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಧೀಶ ಕಾಸನಪ್ಪ ನಾಯ್ಕ್‌ ಮೊಹಮ್ಮದ್ ಹಬೀಬ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಎನ್‌ಐಎ ಆರೋಪಿತರ ವಿರುದ್ಧದ ಆರೊಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ. NIA ಬಂಧಿತ ಆರೋಪಿ ಮೊಹಮ್ಮದ್ ಹಬೀಬ್ ಅವರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಪ್ರಕರಣದ 7 ನೇ ಆರೋಪಿಯಾಗಿರುವ ಹಬೀಬ್ ವಿರುದ್ಧ IPC ಸೆಕ್ಷನ್ 121-A, 122, 123, 307, 302 ಇಂಡಿಯನ್ ಆರ್ಮ್ಸ್‌ ಆಕ್ಟ್‌ನ ಸೆಕ್ಷನ್‌ 25, 27 ಸೇರಿದಂತೆ ಬೇರೆ ಬೇರೆ ಕಾನೂನುಗಳಡಿ  NIA ಪ್ರಕರಣವನ್ನು ದಾಖಲಿಸಿತ್ತು.

ಆರೋಪಿಯು ತಾನು ಯಾವ ಕಾರಣಕ್ಕೆ ಬಂಧಿತನಾಗಿದ್ದೇನೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಧೀಶರಾದ ಕಾಸನಪ್ಪ ನಾಯ್ಕ್ ಪ್ರಕರಣದ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಹಬೀಬ್ ಅವರನ್ನು ಎನ್‌ಐಎ ಪೊಲೀಸರು 2017 ರಲ್ಲಿ ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಬಂಧಿಸಿದ್ದರು.

ಆರೋಪಿತ ಹಬೀಬ್ ಅವರ ಪರವಾಗಿ ವಾದಿಸಿದ ನ್ಯಾಯವಾದಿ ಮೊಹಮ್ಮದ್ ತಾಹೀರ್ ಪೊಲೀಸರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಜೊತೆಗೆ ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ಪಾತ್ರವನ್ನು ಸಾಬೀತುಪಡಿಸುವ ಯಾವೊಂದು ಸಾಕ್ಷಿಗಳನ್ನು ಇದುವರೆಗೆ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದೀನ್ 29.03.2008 ರಲ್ಲಿ ನೀಡಿದ್ದ ಹೇಳಿಕೆಯಲ್ಲಿ ತಾನು ಮೇ 2005 ರಲ್ಲಿ ಹಬೀಬ್ ಅವರನ್ನು ತ್ರಿಪುರಾದಲ್ಲಿ ಭೇಟಿಯಾಗಿದ್ದೆ. ಹಬೀಬ್ ಸಹಾಯದಿಂದ ಭಾರತದ ಗಡಿಯನ್ನು ದಾಟಿ ಬಾಂಗ್ಲಾದೇಶಕ್ಕೆ ಹೋಗಿ ಬಂದಿದ್ದೆ. ಎಲ್ಲೂ ನನ್ನ ಉದ್ಧೇಶವನ್ನು ಹಬೀಬ್‌ಗೆ ಹೇಳಿರಲಿಲ್ಲ ಎಂದು 35 ಪುಟಗಳ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದರು. ಸಬಾಹುದ್ದಿನ್ ಹೇಳಿಕೆಯ ಆಧಾರದ ಮೇಲೆ ಎನ್‌ಐಎ ಪೊಲೀಸರು ಹಬೀಬ್ ಅವರನ್ನು ಬಂಧಿಸಿದ್ದರು.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದಿನ್ ತನ್ನ ಹೇಳಿಕೆಯಲ್ಲಿ ಅನೇಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಆಶ್ರಯ ನೀಡಿದವರು, ದಾಳಿಗೆ ಸಹಾಯ ಮಾಡಿದವರು, ಹೀಗೆ ಅನೆಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರೆ ಎನ್‌ಐಎ ಪೊಲೀಸರು ಇವರೆಲ್ಲರ ಕುರಿತು ಸ್ಪಷ್ಟ ಮಾಹಿತಿಯಿದ್ದರೂ ಅವರನ್ನೆಲ್ಲ ಪ್ರಕರಣದ ಆರೊಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿಲ್ಲ. ಸಾಕ್ಷಿಗಳನ್ನಾಗಿಯೂ ಮಾಡಿಲ್ಲ. ಅದರೆ ಹಬೀಬ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಹಾಗೇ 2017 ರ ಮಾರ್ಚ್‌ 23 ರಂದು ಹಬೀಬ್ ಅವರನ್ನು ಬಂಧಿಸಿದ ಎನ್‌ಐಎ ಅವರಿಂದ ಬಲವಂತವಾಗಿ ಹೇಳಿಕೆಯನ್ನು ಪಡೆದುಕೊಂಡಿದೆ. ಅದರೆ ಆ ಹೇಳಿಕೆಗೆ ಕಾನೂನಾತ್ಮಕವಾದ ಯಾವ ಮಾನ್ಯತೆಯೂ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಸುದೀರ್ಘವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಿ ಮುಖ್ಯ ಆರೋಪಿ ಸಬಾಹುದ್ದಿನ್ ತನ್ನ ಉದ್ಧೇಶಗಳನ್ನು ಮೊಹಮ್ಮದ್ ಹಬೀಬ್ ಅವರಿಗೆ ತಿಳಿಸಿರಲಿಲ್ಲ. ಜೊತೆಗೆ ಮೊಹಮ್ಮದ್ ಹಬೀಬ್ ಅವರಿಗೆ ಐಐಎಸ್‌ಸಿ ಬೆಂಗಳೂರಿನಲ್ಲಿ ದಾಳಿ ನಡೆಯುವ ಯಾವ ಮಾಹಿತಿಯೂ ಇರಲಿಲ್ಲ. ಸಬಾಹುದ್ದಿನ್‌ಗೆ ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ನಂಟು ಇರುವುದು ಮೊಹಮ್ಮದ್ ಹಬೀಬ್ ಅವರಿಗೆ ಮಾಹಿತಿಯಿರಲಿಲ್ಲ. ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ವಯಕ್ತಿಕ ಪಾತ್ರ ಸಾಬೀತಾಗಿಲ್ಲ. ಹಾಗಾಗಿ ಬೆಂಗಳೂರು IISc ದಾಳಿ ಪ್ರಕರಣದ ಆರೊಪದಿಂದ ಮೊಹಮ್ಮದ್ ಹಬೀಬ್ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು NIA ಕೋರ್ಟ್ ಹೇಳಿದೆ.


ಇದನ್ನೂ ಓದಿ : ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...