HomeಮುಖಪುಟIISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

- Advertisement -
- Advertisement -

2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಲಯ ಪ್ರಕರಣದ ಆರೋಪಿ ಮೊಹಮ್ಮದ್ ಹಬೀಬ್ ಅವರನ್ನು ಇಂದು ದೋಷಮುಕ್ತಗೊಳಿಸಿದೆ. ಮೊಹಮ್ಮದ್ ಹಬೀಬ್ ಅವರು UAPA ಕಾಯ್ದೆಯಡಿ ಕಳೆದ 4 ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದರು.

2005 ರ ಡಿಸೆಂಬರ್‌ನಲ್ಲಿ ಬೆಂಗಳೂರಿನ IISC ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ವ್ಯಕ್ತಿ ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 7 ನೇ ಆರೋಪಿಯಾಗಿ ಹಬೀಬ್ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಧೀಶ ಕಾಸನಪ್ಪ ನಾಯ್ಕ್‌ ಮೊಹಮ್ಮದ್ ಹಬೀಬ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಎನ್‌ಐಎ ಆರೋಪಿತರ ವಿರುದ್ಧದ ಆರೊಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ. NIA ಬಂಧಿತ ಆರೋಪಿ ಮೊಹಮ್ಮದ್ ಹಬೀಬ್ ಅವರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಪ್ರಕರಣದ 7 ನೇ ಆರೋಪಿಯಾಗಿರುವ ಹಬೀಬ್ ವಿರುದ್ಧ IPC ಸೆಕ್ಷನ್ 121-A, 122, 123, 307, 302 ಇಂಡಿಯನ್ ಆರ್ಮ್ಸ್‌ ಆಕ್ಟ್‌ನ ಸೆಕ್ಷನ್‌ 25, 27 ಸೇರಿದಂತೆ ಬೇರೆ ಬೇರೆ ಕಾನೂನುಗಳಡಿ  NIA ಪ್ರಕರಣವನ್ನು ದಾಖಲಿಸಿತ್ತು.

ಆರೋಪಿಯು ತಾನು ಯಾವ ಕಾರಣಕ್ಕೆ ಬಂಧಿತನಾಗಿದ್ದೇನೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಧೀಶರಾದ ಕಾಸನಪ್ಪ ನಾಯ್ಕ್ ಪ್ರಕರಣದ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಹಬೀಬ್ ಅವರನ್ನು ಎನ್‌ಐಎ ಪೊಲೀಸರು 2017 ರಲ್ಲಿ ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಬಂಧಿಸಿದ್ದರು.

ಆರೋಪಿತ ಹಬೀಬ್ ಅವರ ಪರವಾಗಿ ವಾದಿಸಿದ ನ್ಯಾಯವಾದಿ ಮೊಹಮ್ಮದ್ ತಾಹೀರ್ ಪೊಲೀಸರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಜೊತೆಗೆ ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ಪಾತ್ರವನ್ನು ಸಾಬೀತುಪಡಿಸುವ ಯಾವೊಂದು ಸಾಕ್ಷಿಗಳನ್ನು ಇದುವರೆಗೆ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದೀನ್ 29.03.2008 ರಲ್ಲಿ ನೀಡಿದ್ದ ಹೇಳಿಕೆಯಲ್ಲಿ ತಾನು ಮೇ 2005 ರಲ್ಲಿ ಹಬೀಬ್ ಅವರನ್ನು ತ್ರಿಪುರಾದಲ್ಲಿ ಭೇಟಿಯಾಗಿದ್ದೆ. ಹಬೀಬ್ ಸಹಾಯದಿಂದ ಭಾರತದ ಗಡಿಯನ್ನು ದಾಟಿ ಬಾಂಗ್ಲಾದೇಶಕ್ಕೆ ಹೋಗಿ ಬಂದಿದ್ದೆ. ಎಲ್ಲೂ ನನ್ನ ಉದ್ಧೇಶವನ್ನು ಹಬೀಬ್‌ಗೆ ಹೇಳಿರಲಿಲ್ಲ ಎಂದು 35 ಪುಟಗಳ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದರು. ಸಬಾಹುದ್ದಿನ್ ಹೇಳಿಕೆಯ ಆಧಾರದ ಮೇಲೆ ಎನ್‌ಐಎ ಪೊಲೀಸರು ಹಬೀಬ್ ಅವರನ್ನು ಬಂಧಿಸಿದ್ದರು.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದಿನ್ ತನ್ನ ಹೇಳಿಕೆಯಲ್ಲಿ ಅನೇಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಆಶ್ರಯ ನೀಡಿದವರು, ದಾಳಿಗೆ ಸಹಾಯ ಮಾಡಿದವರು, ಹೀಗೆ ಅನೆಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರೆ ಎನ್‌ಐಎ ಪೊಲೀಸರು ಇವರೆಲ್ಲರ ಕುರಿತು ಸ್ಪಷ್ಟ ಮಾಹಿತಿಯಿದ್ದರೂ ಅವರನ್ನೆಲ್ಲ ಪ್ರಕರಣದ ಆರೊಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿಲ್ಲ. ಸಾಕ್ಷಿಗಳನ್ನಾಗಿಯೂ ಮಾಡಿಲ್ಲ. ಅದರೆ ಹಬೀಬ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಹಾಗೇ 2017 ರ ಮಾರ್ಚ್‌ 23 ರಂದು ಹಬೀಬ್ ಅವರನ್ನು ಬಂಧಿಸಿದ ಎನ್‌ಐಎ ಅವರಿಂದ ಬಲವಂತವಾಗಿ ಹೇಳಿಕೆಯನ್ನು ಪಡೆದುಕೊಂಡಿದೆ. ಅದರೆ ಆ ಹೇಳಿಕೆಗೆ ಕಾನೂನಾತ್ಮಕವಾದ ಯಾವ ಮಾನ್ಯತೆಯೂ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಸುದೀರ್ಘವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಿ ಮುಖ್ಯ ಆರೋಪಿ ಸಬಾಹುದ್ದಿನ್ ತನ್ನ ಉದ್ಧೇಶಗಳನ್ನು ಮೊಹಮ್ಮದ್ ಹಬೀಬ್ ಅವರಿಗೆ ತಿಳಿಸಿರಲಿಲ್ಲ. ಜೊತೆಗೆ ಮೊಹಮ್ಮದ್ ಹಬೀಬ್ ಅವರಿಗೆ ಐಐಎಸ್‌ಸಿ ಬೆಂಗಳೂರಿನಲ್ಲಿ ದಾಳಿ ನಡೆಯುವ ಯಾವ ಮಾಹಿತಿಯೂ ಇರಲಿಲ್ಲ. ಸಬಾಹುದ್ದಿನ್‌ಗೆ ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ನಂಟು ಇರುವುದು ಮೊಹಮ್ಮದ್ ಹಬೀಬ್ ಅವರಿಗೆ ಮಾಹಿತಿಯಿರಲಿಲ್ಲ. ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ವಯಕ್ತಿಕ ಪಾತ್ರ ಸಾಬೀತಾಗಿಲ್ಲ. ಹಾಗಾಗಿ ಬೆಂಗಳೂರು IISc ದಾಳಿ ಪ್ರಕರಣದ ಆರೊಪದಿಂದ ಮೊಹಮ್ಮದ್ ಹಬೀಬ್ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು NIA ಕೋರ್ಟ್ ಹೇಳಿದೆ.


ಇದನ್ನೂ ಓದಿ : ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...