HomeಮುಖಪುಟIISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

- Advertisement -
- Advertisement -

2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಲಯ ಪ್ರಕರಣದ ಆರೋಪಿ ಮೊಹಮ್ಮದ್ ಹಬೀಬ್ ಅವರನ್ನು ಇಂದು ದೋಷಮುಕ್ತಗೊಳಿಸಿದೆ. ಮೊಹಮ್ಮದ್ ಹಬೀಬ್ ಅವರು UAPA ಕಾಯ್ದೆಯಡಿ ಕಳೆದ 4 ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದರು.

2005 ರ ಡಿಸೆಂಬರ್‌ನಲ್ಲಿ ಬೆಂಗಳೂರಿನ IISC ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ವ್ಯಕ್ತಿ ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 7 ನೇ ಆರೋಪಿಯಾಗಿ ಹಬೀಬ್ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಧೀಶ ಕಾಸನಪ್ಪ ನಾಯ್ಕ್‌ ಮೊಹಮ್ಮದ್ ಹಬೀಬ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಎನ್‌ಐಎ ಆರೋಪಿತರ ವಿರುದ್ಧದ ಆರೊಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ. NIA ಬಂಧಿತ ಆರೋಪಿ ಮೊಹಮ್ಮದ್ ಹಬೀಬ್ ಅವರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಪ್ರಕರಣದ 7 ನೇ ಆರೋಪಿಯಾಗಿರುವ ಹಬೀಬ್ ವಿರುದ್ಧ IPC ಸೆಕ್ಷನ್ 121-A, 122, 123, 307, 302 ಇಂಡಿಯನ್ ಆರ್ಮ್ಸ್‌ ಆಕ್ಟ್‌ನ ಸೆಕ್ಷನ್‌ 25, 27 ಸೇರಿದಂತೆ ಬೇರೆ ಬೇರೆ ಕಾನೂನುಗಳಡಿ  NIA ಪ್ರಕರಣವನ್ನು ದಾಖಲಿಸಿತ್ತು.

ಆರೋಪಿಯು ತಾನು ಯಾವ ಕಾರಣಕ್ಕೆ ಬಂಧಿತನಾಗಿದ್ದೇನೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಧೀಶರಾದ ಕಾಸನಪ್ಪ ನಾಯ್ಕ್ ಪ್ರಕರಣದ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಹಬೀಬ್ ಅವರನ್ನು ಎನ್‌ಐಎ ಪೊಲೀಸರು 2017 ರಲ್ಲಿ ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಬಂಧಿಸಿದ್ದರು.

ಆರೋಪಿತ ಹಬೀಬ್ ಅವರ ಪರವಾಗಿ ವಾದಿಸಿದ ನ್ಯಾಯವಾದಿ ಮೊಹಮ್ಮದ್ ತಾಹೀರ್ ಪೊಲೀಸರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಜೊತೆಗೆ ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ಪಾತ್ರವನ್ನು ಸಾಬೀತುಪಡಿಸುವ ಯಾವೊಂದು ಸಾಕ್ಷಿಗಳನ್ನು ಇದುವರೆಗೆ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದೀನ್ 29.03.2008 ರಲ್ಲಿ ನೀಡಿದ್ದ ಹೇಳಿಕೆಯಲ್ಲಿ ತಾನು ಮೇ 2005 ರಲ್ಲಿ ಹಬೀಬ್ ಅವರನ್ನು ತ್ರಿಪುರಾದಲ್ಲಿ ಭೇಟಿಯಾಗಿದ್ದೆ. ಹಬೀಬ್ ಸಹಾಯದಿಂದ ಭಾರತದ ಗಡಿಯನ್ನು ದಾಟಿ ಬಾಂಗ್ಲಾದೇಶಕ್ಕೆ ಹೋಗಿ ಬಂದಿದ್ದೆ. ಎಲ್ಲೂ ನನ್ನ ಉದ್ಧೇಶವನ್ನು ಹಬೀಬ್‌ಗೆ ಹೇಳಿರಲಿಲ್ಲ ಎಂದು 35 ಪುಟಗಳ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದರು. ಸಬಾಹುದ್ದಿನ್ ಹೇಳಿಕೆಯ ಆಧಾರದ ಮೇಲೆ ಎನ್‌ಐಎ ಪೊಲೀಸರು ಹಬೀಬ್ ಅವರನ್ನು ಬಂಧಿಸಿದ್ದರು.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದಿನ್ ತನ್ನ ಹೇಳಿಕೆಯಲ್ಲಿ ಅನೇಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಆಶ್ರಯ ನೀಡಿದವರು, ದಾಳಿಗೆ ಸಹಾಯ ಮಾಡಿದವರು, ಹೀಗೆ ಅನೆಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರೆ ಎನ್‌ಐಎ ಪೊಲೀಸರು ಇವರೆಲ್ಲರ ಕುರಿತು ಸ್ಪಷ್ಟ ಮಾಹಿತಿಯಿದ್ದರೂ ಅವರನ್ನೆಲ್ಲ ಪ್ರಕರಣದ ಆರೊಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿಲ್ಲ. ಸಾಕ್ಷಿಗಳನ್ನಾಗಿಯೂ ಮಾಡಿಲ್ಲ. ಅದರೆ ಹಬೀಬ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಹಾಗೇ 2017 ರ ಮಾರ್ಚ್‌ 23 ರಂದು ಹಬೀಬ್ ಅವರನ್ನು ಬಂಧಿಸಿದ ಎನ್‌ಐಎ ಅವರಿಂದ ಬಲವಂತವಾಗಿ ಹೇಳಿಕೆಯನ್ನು ಪಡೆದುಕೊಂಡಿದೆ. ಅದರೆ ಆ ಹೇಳಿಕೆಗೆ ಕಾನೂನಾತ್ಮಕವಾದ ಯಾವ ಮಾನ್ಯತೆಯೂ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಸುದೀರ್ಘವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಿ ಮುಖ್ಯ ಆರೋಪಿ ಸಬಾಹುದ್ದಿನ್ ತನ್ನ ಉದ್ಧೇಶಗಳನ್ನು ಮೊಹಮ್ಮದ್ ಹಬೀಬ್ ಅವರಿಗೆ ತಿಳಿಸಿರಲಿಲ್ಲ. ಜೊತೆಗೆ ಮೊಹಮ್ಮದ್ ಹಬೀಬ್ ಅವರಿಗೆ ಐಐಎಸ್‌ಸಿ ಬೆಂಗಳೂರಿನಲ್ಲಿ ದಾಳಿ ನಡೆಯುವ ಯಾವ ಮಾಹಿತಿಯೂ ಇರಲಿಲ್ಲ. ಸಬಾಹುದ್ದಿನ್‌ಗೆ ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ನಂಟು ಇರುವುದು ಮೊಹಮ್ಮದ್ ಹಬೀಬ್ ಅವರಿಗೆ ಮಾಹಿತಿಯಿರಲಿಲ್ಲ. ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ವಯಕ್ತಿಕ ಪಾತ್ರ ಸಾಬೀತಾಗಿಲ್ಲ. ಹಾಗಾಗಿ ಬೆಂಗಳೂರು IISc ದಾಳಿ ಪ್ರಕರಣದ ಆರೊಪದಿಂದ ಮೊಹಮ್ಮದ್ ಹಬೀಬ್ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು NIA ಕೋರ್ಟ್ ಹೇಳಿದೆ.


ಇದನ್ನೂ ಓದಿ : ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...