HomeಮುಖಪುಟIISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

- Advertisement -
- Advertisement -

2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಲಯ ಪ್ರಕರಣದ ಆರೋಪಿ ಮೊಹಮ್ಮದ್ ಹಬೀಬ್ ಅವರನ್ನು ಇಂದು ದೋಷಮುಕ್ತಗೊಳಿಸಿದೆ. ಮೊಹಮ್ಮದ್ ಹಬೀಬ್ ಅವರು UAPA ಕಾಯ್ದೆಯಡಿ ಕಳೆದ 4 ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದರು.

2005 ರ ಡಿಸೆಂಬರ್‌ನಲ್ಲಿ ಬೆಂಗಳೂರಿನ IISC ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ವ್ಯಕ್ತಿ ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 7 ನೇ ಆರೋಪಿಯಾಗಿ ಹಬೀಬ್ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಧೀಶ ಕಾಸನಪ್ಪ ನಾಯ್ಕ್‌ ಮೊಹಮ್ಮದ್ ಹಬೀಬ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಎನ್‌ಐಎ ಆರೋಪಿತರ ವಿರುದ್ಧದ ಆರೊಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ. NIA ಬಂಧಿತ ಆರೋಪಿ ಮೊಹಮ್ಮದ್ ಹಬೀಬ್ ಅವರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಪ್ರಕರಣದ 7 ನೇ ಆರೋಪಿಯಾಗಿರುವ ಹಬೀಬ್ ವಿರುದ್ಧ IPC ಸೆಕ್ಷನ್ 121-A, 122, 123, 307, 302 ಇಂಡಿಯನ್ ಆರ್ಮ್ಸ್‌ ಆಕ್ಟ್‌ನ ಸೆಕ್ಷನ್‌ 25, 27 ಸೇರಿದಂತೆ ಬೇರೆ ಬೇರೆ ಕಾನೂನುಗಳಡಿ  NIA ಪ್ರಕರಣವನ್ನು ದಾಖಲಿಸಿತ್ತು.

ಆರೋಪಿಯು ತಾನು ಯಾವ ಕಾರಣಕ್ಕೆ ಬಂಧಿತನಾಗಿದ್ದೇನೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಧೀಶರಾದ ಕಾಸನಪ್ಪ ನಾಯ್ಕ್ ಪ್ರಕರಣದ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಹಬೀಬ್ ಅವರನ್ನು ಎನ್‌ಐಎ ಪೊಲೀಸರು 2017 ರಲ್ಲಿ ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಬಂಧಿಸಿದ್ದರು.

ಆರೋಪಿತ ಹಬೀಬ್ ಅವರ ಪರವಾಗಿ ವಾದಿಸಿದ ನ್ಯಾಯವಾದಿ ಮೊಹಮ್ಮದ್ ತಾಹೀರ್ ಪೊಲೀಸರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಜೊತೆಗೆ ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ಪಾತ್ರವನ್ನು ಸಾಬೀತುಪಡಿಸುವ ಯಾವೊಂದು ಸಾಕ್ಷಿಗಳನ್ನು ಇದುವರೆಗೆ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದೀನ್ 29.03.2008 ರಲ್ಲಿ ನೀಡಿದ್ದ ಹೇಳಿಕೆಯಲ್ಲಿ ತಾನು ಮೇ 2005 ರಲ್ಲಿ ಹಬೀಬ್ ಅವರನ್ನು ತ್ರಿಪುರಾದಲ್ಲಿ ಭೇಟಿಯಾಗಿದ್ದೆ. ಹಬೀಬ್ ಸಹಾಯದಿಂದ ಭಾರತದ ಗಡಿಯನ್ನು ದಾಟಿ ಬಾಂಗ್ಲಾದೇಶಕ್ಕೆ ಹೋಗಿ ಬಂದಿದ್ದೆ. ಎಲ್ಲೂ ನನ್ನ ಉದ್ಧೇಶವನ್ನು ಹಬೀಬ್‌ಗೆ ಹೇಳಿರಲಿಲ್ಲ ಎಂದು 35 ಪುಟಗಳ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದರು. ಸಬಾಹುದ್ದಿನ್ ಹೇಳಿಕೆಯ ಆಧಾರದ ಮೇಲೆ ಎನ್‌ಐಎ ಪೊಲೀಸರು ಹಬೀಬ್ ಅವರನ್ನು ಬಂಧಿಸಿದ್ದರು.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದಿನ್ ತನ್ನ ಹೇಳಿಕೆಯಲ್ಲಿ ಅನೇಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಆಶ್ರಯ ನೀಡಿದವರು, ದಾಳಿಗೆ ಸಹಾಯ ಮಾಡಿದವರು, ಹೀಗೆ ಅನೆಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರೆ ಎನ್‌ಐಎ ಪೊಲೀಸರು ಇವರೆಲ್ಲರ ಕುರಿತು ಸ್ಪಷ್ಟ ಮಾಹಿತಿಯಿದ್ದರೂ ಅವರನ್ನೆಲ್ಲ ಪ್ರಕರಣದ ಆರೊಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿಲ್ಲ. ಸಾಕ್ಷಿಗಳನ್ನಾಗಿಯೂ ಮಾಡಿಲ್ಲ. ಅದರೆ ಹಬೀಬ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಹಾಗೇ 2017 ರ ಮಾರ್ಚ್‌ 23 ರಂದು ಹಬೀಬ್ ಅವರನ್ನು ಬಂಧಿಸಿದ ಎನ್‌ಐಎ ಅವರಿಂದ ಬಲವಂತವಾಗಿ ಹೇಳಿಕೆಯನ್ನು ಪಡೆದುಕೊಂಡಿದೆ. ಅದರೆ ಆ ಹೇಳಿಕೆಗೆ ಕಾನೂನಾತ್ಮಕವಾದ ಯಾವ ಮಾನ್ಯತೆಯೂ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಸುದೀರ್ಘವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಿ ಮುಖ್ಯ ಆರೋಪಿ ಸಬಾಹುದ್ದಿನ್ ತನ್ನ ಉದ್ಧೇಶಗಳನ್ನು ಮೊಹಮ್ಮದ್ ಹಬೀಬ್ ಅವರಿಗೆ ತಿಳಿಸಿರಲಿಲ್ಲ. ಜೊತೆಗೆ ಮೊಹಮ್ಮದ್ ಹಬೀಬ್ ಅವರಿಗೆ ಐಐಎಸ್‌ಸಿ ಬೆಂಗಳೂರಿನಲ್ಲಿ ದಾಳಿ ನಡೆಯುವ ಯಾವ ಮಾಹಿತಿಯೂ ಇರಲಿಲ್ಲ. ಸಬಾಹುದ್ದಿನ್‌ಗೆ ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ನಂಟು ಇರುವುದು ಮೊಹಮ್ಮದ್ ಹಬೀಬ್ ಅವರಿಗೆ ಮಾಹಿತಿಯಿರಲಿಲ್ಲ. ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ವಯಕ್ತಿಕ ಪಾತ್ರ ಸಾಬೀತಾಗಿಲ್ಲ. ಹಾಗಾಗಿ ಬೆಂಗಳೂರು IISc ದಾಳಿ ಪ್ರಕರಣದ ಆರೊಪದಿಂದ ಮೊಹಮ್ಮದ್ ಹಬೀಬ್ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು NIA ಕೋರ್ಟ್ ಹೇಳಿದೆ.


ಇದನ್ನೂ ಓದಿ : ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....