HomeಮುಖಪುಟIISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

- Advertisement -
- Advertisement -

2005 ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಲಯ ಪ್ರಕರಣದ ಆರೋಪಿ ಮೊಹಮ್ಮದ್ ಹಬೀಬ್ ಅವರನ್ನು ಇಂದು ದೋಷಮುಕ್ತಗೊಳಿಸಿದೆ. ಮೊಹಮ್ಮದ್ ಹಬೀಬ್ ಅವರು UAPA ಕಾಯ್ದೆಯಡಿ ಕಳೆದ 4 ವರ್ಷಗಳಿಂದ ಜೈಲಿನಲ್ಲಿ ಬಂಧಿಯಾಗಿದ್ದರು.

2005 ರ ಡಿಸೆಂಬರ್‌ನಲ್ಲಿ ಬೆಂಗಳೂರಿನ IISC ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ವ್ಯಕ್ತಿ ಮೃತಪಟ್ಟು ಅನೇಕರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 7 ನೇ ಆರೋಪಿಯಾಗಿ ಹಬೀಬ್ ಅವರನ್ನು 2017 ರಲ್ಲಿ ಬಂಧಿಸಲಾಗಿತ್ತು.

ಎನ್‌ಐಎ ವಿಶೇಷ ನ್ಯಾಯಾಧೀಶ ಕಾಸನಪ್ಪ ನಾಯ್ಕ್‌ ಮೊಹಮ್ಮದ್ ಹಬೀಬ್ ಅವರನ್ನು ಬಿಡುಗಡೆಗೊಳಿಸಿ ಆದೇಶ ನೀಡಿದ್ದಾರೆ. ಎನ್‌ಐಎ ಆರೋಪಿತರ ವಿರುದ್ಧದ ಆರೊಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ. NIA ಬಂಧಿತ ಆರೋಪಿ ಮೊಹಮ್ಮದ್ ಹಬೀಬ್ ಅವರ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಪ್ರಕರಣದ 7 ನೇ ಆರೋಪಿಯಾಗಿರುವ ಹಬೀಬ್ ವಿರುದ್ಧ IPC ಸೆಕ್ಷನ್ 121-A, 122, 123, 307, 302 ಇಂಡಿಯನ್ ಆರ್ಮ್ಸ್‌ ಆಕ್ಟ್‌ನ ಸೆಕ್ಷನ್‌ 25, 27 ಸೇರಿದಂತೆ ಬೇರೆ ಬೇರೆ ಕಾನೂನುಗಳಡಿ  NIA ಪ್ರಕರಣವನ್ನು ದಾಖಲಿಸಿತ್ತು.

ಆರೋಪಿಯು ತಾನು ಯಾವ ಕಾರಣಕ್ಕೆ ಬಂಧಿತನಾಗಿದ್ದೇನೆ ಎಂದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನ್ಯಾಯಾಧೀಶರಾದ ಕಾಸನಪ್ಪ ನಾಯ್ಕ್ ಪ್ರಕರಣದ ವಿಚಾರಣೆ ವೇಳೆ ತಿಳಿಸಿದ್ದಾರೆ.

ಮೊಹಮ್ಮದ್ ಹಬೀಬ್ ಅವರನ್ನು ಎನ್‌ಐಎ ಪೊಲೀಸರು 2017 ರಲ್ಲಿ ತ್ರಿಪುರಾ ರಾಜ್ಯದ ಅಗರ್ತಲಾದಲ್ಲಿ ಬಂಧಿಸಿದ್ದರು.

ಆರೋಪಿತ ಹಬೀಬ್ ಅವರ ಪರವಾಗಿ ವಾದಿಸಿದ ನ್ಯಾಯವಾದಿ ಮೊಹಮ್ಮದ್ ತಾಹೀರ್ ಪೊಲೀಸರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಜೊತೆಗೆ ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ಪಾತ್ರವನ್ನು ಸಾಬೀತುಪಡಿಸುವ ಯಾವೊಂದು ಸಾಕ್ಷಿಗಳನ್ನು ಇದುವರೆಗೆ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದೀನ್ 29.03.2008 ರಲ್ಲಿ ನೀಡಿದ್ದ ಹೇಳಿಕೆಯಲ್ಲಿ ತಾನು ಮೇ 2005 ರಲ್ಲಿ ಹಬೀಬ್ ಅವರನ್ನು ತ್ರಿಪುರಾದಲ್ಲಿ ಭೇಟಿಯಾಗಿದ್ದೆ. ಹಬೀಬ್ ಸಹಾಯದಿಂದ ಭಾರತದ ಗಡಿಯನ್ನು ದಾಟಿ ಬಾಂಗ್ಲಾದೇಶಕ್ಕೆ ಹೋಗಿ ಬಂದಿದ್ದೆ. ಎಲ್ಲೂ ನನ್ನ ಉದ್ಧೇಶವನ್ನು ಹಬೀಬ್‌ಗೆ ಹೇಳಿರಲಿಲ್ಲ ಎಂದು 35 ಪುಟಗಳ ಸ್ವಯಂ ಪ್ರೇರಿತ ಹೇಳಿಕೆ ನೀಡಿದ್ದರು. ಸಬಾಹುದ್ದಿನ್ ಹೇಳಿಕೆಯ ಆಧಾರದ ಮೇಲೆ ಎನ್‌ಐಎ ಪೊಲೀಸರು ಹಬೀಬ್ ಅವರನ್ನು ಬಂಧಿಸಿದ್ದರು.

ಪ್ರಕರಣದ ಮುಖ್ಯ ಆರೊಪಿ ಸಬಾಹುದ್ದಿನ್ ತನ್ನ ಹೇಳಿಕೆಯಲ್ಲಿ ಅನೇಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಆಶ್ರಯ ನೀಡಿದವರು, ದಾಳಿಗೆ ಸಹಾಯ ಮಾಡಿದವರು, ಹೀಗೆ ಅನೆಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಅದರೆ ಎನ್‌ಐಎ ಪೊಲೀಸರು ಇವರೆಲ್ಲರ ಕುರಿತು ಸ್ಪಷ್ಟ ಮಾಹಿತಿಯಿದ್ದರೂ ಅವರನ್ನೆಲ್ಲ ಪ್ರಕರಣದ ಆರೊಪಿಗಳನ್ನಾಗಿ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿಲ್ಲ. ಸಾಕ್ಷಿಗಳನ್ನಾಗಿಯೂ ಮಾಡಿಲ್ಲ. ಅದರೆ ಹಬೀಬ್ ಅವರನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ. ಹಾಗೇ 2017 ರ ಮಾರ್ಚ್‌ 23 ರಂದು ಹಬೀಬ್ ಅವರನ್ನು ಬಂಧಿಸಿದ ಎನ್‌ಐಎ ಅವರಿಂದ ಬಲವಂತವಾಗಿ ಹೇಳಿಕೆಯನ್ನು ಪಡೆದುಕೊಂಡಿದೆ. ಅದರೆ ಆ ಹೇಳಿಕೆಗೆ ಕಾನೂನಾತ್ಮಕವಾದ ಯಾವ ಮಾನ್ಯತೆಯೂ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಸುದೀರ್ಘವಾಗಿ ಪ್ರಕರಣದ ವಿಚಾರಣೆಯನ್ನು ನಡೆಸಿ ಮುಖ್ಯ ಆರೋಪಿ ಸಬಾಹುದ್ದಿನ್ ತನ್ನ ಉದ್ಧೇಶಗಳನ್ನು ಮೊಹಮ್ಮದ್ ಹಬೀಬ್ ಅವರಿಗೆ ತಿಳಿಸಿರಲಿಲ್ಲ. ಜೊತೆಗೆ ಮೊಹಮ್ಮದ್ ಹಬೀಬ್ ಅವರಿಗೆ ಐಐಎಸ್‌ಸಿ ಬೆಂಗಳೂರಿನಲ್ಲಿ ದಾಳಿ ನಡೆಯುವ ಯಾವ ಮಾಹಿತಿಯೂ ಇರಲಿಲ್ಲ. ಸಬಾಹುದ್ದಿನ್‌ಗೆ ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ನಂಟು ಇರುವುದು ಮೊಹಮ್ಮದ್ ಹಬೀಬ್ ಅವರಿಗೆ ಮಾಹಿತಿಯಿರಲಿಲ್ಲ. ಪ್ರಕರಣದಲ್ಲಿ ಮೊಹಮ್ಮದ್ ಹಬೀಬ್ ಅವರ ವಯಕ್ತಿಕ ಪಾತ್ರ ಸಾಬೀತಾಗಿಲ್ಲ. ಹಾಗಾಗಿ ಬೆಂಗಳೂರು IISc ದಾಳಿ ಪ್ರಕರಣದ ಆರೊಪದಿಂದ ಮೊಹಮ್ಮದ್ ಹಬೀಬ್ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು NIA ಕೋರ್ಟ್ ಹೇಳಿದೆ.


ಇದನ್ನೂ ಓದಿ : ಮುಂದಿನ ಭಾರೀ ಕಾಂಗ್ರೆಸ್ ಮುಖ್ಯಮಂತ್ರಿ ಚರ್ಚೆ!: ಮಹಾರಾಷ್ಟ್ರ ಮೈತ್ರಿ ಗಟ್ಟಿಯೆಂದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...