Homeಮುಖಪುಟಶಂಕಿತ ಭಯೋತ್ಪಾದಕ ದೇವೀಂದರ್‌ ಸಿಂಗ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌‌ಐಎ

ಶಂಕಿತ ಭಯೋತ್ಪಾದಕ ದೇವೀಂದರ್‌ ಸಿಂಗ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌‌ಐಎ

ಭಯೋತ್ಪಾದಕರನ್ನು ಜಮ್ಮುವಿಗೆ ಕರೆದೊಯ್ಯುತ್ತಿದ್ದಾಗ ದಕ್ಷಿಣ ಕಾಶ್ಮೀರದ ಕುಲ್‌ಗಾಮ್‌ನ ವಾನ್ಪೋ ಎಂಬ ಚೆಕ್ ಪಾಯಿಂಟ್‌‌ನಲ್ಲಿ ದೇವೀಂದರ್‌‌ನನ್ನು ಬಂಧಿಸಲಾಗಿತ್ತು.

- Advertisement -
- Advertisement -

ದೇಶದೊಳಗೆ ಉಗ್ರಗಾಮಿಗಳು ಪ್ರವೇಶಿಸಲು ಸಹಕಾರ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಜಮ್ಮು ಕಾಶ್ಮೀರದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವಿಂದರ್ ಸಿಂಗ್ ಅವರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ಚಾರ್ಜ್‌ಶೀಟ್ ಸಲ್ಲಿಸಿದೆ.

ನಿಯಮದಂತೆ ಯಾವುದೇ ಪ್ರಕರಣ ನಡೆದು 90 ದಿನಗಳ ಒಳಗಾಗಿ ಆರೋಪಿಯ ವಿರುದ್ಧ ಪೊಲೀಸರು ಅಥವಾ ತನಿಖಾ ಸಂಸ್ಥೆ ಚಾರ್ಜ್‌ಶೀಟ್ ಸಲ್ಲಿಸಬೇಕು. ಆದರೆ, 46 ಜನ ಭಾರತೀಯ ಸೈನಿಕರು ಜೀವ ಕಳೆದುಕೊಂಡಿದ್ದ ಪುಲ್ವಾಮಾ ದಾಳಿಯ ಹಿಂದಿನ ಆರೋಪ ಹೊತ್ತಿದ್ದ ಪೊಲಿಸ್ ಅಧಿಕಾರಿ ದೇವಿಂದರ್ ಸಿಂಗ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಈವರೆಗೆ ಪುಲ್ವಾಮಾ ದಾಳಿಯಲ್ಲಿ ಸಲ್ಲಿಸಿರಲಿಲ್ಲ.

ಇದರಿಂದಾಗಿ ಕಳೆದ ತಿಂಗಳು ದೆಹಲಿ ನ್ಯಾಯಾಲಯ ಆತನಿಗೆ ಜಾಮೀನು ನೀಡಿ ಬಿಡುಗಡೆ ಮಾಡಿತ್ತು.

ಆದರೆ, ಕೊನೆಗೂ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪಿ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ವಿರುದ್ಧ ಜಮ್ಮು ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ಎನ್ಐಎ ಅಧಿಕಾರಿಗಳು ಸಿಎನ್ಎನ್ ನ್ಯೂಸ್ 18 ಗೆ ಖಚಿತಪಡಿಸಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಹಿಜ್ಬುಲ್ ಭಯೋತ್ಪಾದಕರಾದ ನವೀದ್ ಮುಷ್ತಾಕ್ ಅಲಿಯಾಸ್ ಬಾಬು, ಅವರ ಸಹೋದರ ಇರ್ಫಾನ್ ಮುಷ್ತಾಕ್, ರಫಿ ಅಹ್ಮದ್ ರಾಥರ್, ಕ್ರಾಸ್ ಲೊಕ್ ಟ್ರೇಡ್ ಅಸೋಸಿಯೇಶನ್‌‌ ಇದರ ಮಾಜಿ ಅಧ್ಯಕ್ಷ ತನ್ವೀರ್ ಅಹ್ಮದ್ ಮತ್ತು ವಕೀಲ ಇರ್ಫಾನ್ ಶಫಿ ಮಿರ್ ಅವರ ಮೇಲೆಯೂ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯ (ಯುಎಪಿಎ) ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎನ್ನಲಾಗುತ್ತಿದೆ.

ರಾಷ್ಟ್ರೀಯ ತನಿಖಾ ದಳ ಸಾವಿರ ಪುಟಗಳ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದ್ದು, ಈ ಮಹತ್ವದ ಚಾರ್ಜ್‌ಶೀಟ್‌ನಲ್ಲಿ ಪಾಕಿಸ್ತಾನ ಹೈಕಮಿಷನ್ನ ಸಹಾಯಕ ಶಫಕಾತ್ ಪಾತ್ರವನ್ನು ಸವಿವರವಾಗಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜನವರಿ 11, 2020 ರಂದು, ನವೀದ್ ಮುಷ್ತಾಕ್ ಮತ್ತು ರಫಿ ಅಹ್ಮದ್ ರಾಥರ್ ಅವರನ್ನು ಜಮ್ಮುವಿಗೆ ಕರೆದೊಯ್ಯುತ್ತಿದ್ದಾಗ ದಕ್ಷಿಣ ಕಾಶ್ಮೀರದ ಕುಲ್‌ಗಾಮ್‌ನ ವಾನ್ಪೋ ಎಂಬ ಚೆಕ್ ಪಾಯಿಂಟ್‌‌ನಲ್ಲಿ ದೇವೀಂದರ್‌‌ನನ್ನು ಬಂಧಿಸಲಾಗಿತ್ತು.

ಬಂಧನಕ್ಕೊಳಗಾದ ದಿನದಿಂದ ದೇವಿಂದರ್ ಸಿಂಗ್ ಅಮಾನತು ಗೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿತ್ತು. ಅಲ್ಲದೆ, ಆತನ ವಿರುದ್ದ, “ ಪಾಕಿಸ್ತಾನ ಹೈಕಮಿಷನ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರ ಕಣಿವೆಯಿಂದ ಜಮ್ಮುವಿಗೆ ಹೋಗಲು ಭಯೋತ್ಪಾದಕರಿಗೆ ಸಹಕರಿಸಿದ್ದರು” ಎಂದು ಆರೋಪಿಸಲಾಗಿತ್ತು.

ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್ ಅವರಿಗೆ ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಸಂಪರ್ಕಿಸುವಲ್ಲಿ ಮಿರ್ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಎನ್ಐಎ ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ತನ್ವೀರ್ ಅಹ್ಮದ್ ಭಾರತೀಯ ಕರೆನ್ಸಿಗಳನ್ನು ನವೀದ್ ಮುಷ್ತಾಕ್‌‌ಗೆ ರವಾನಿಸಿದ್ದಾರೆ ಎಂಬ ಆರೋಪವಿದೆ.


ಓದಿ: ಚಾರ್ಜ್‌ಶೀಟ್ ಸಲ್ಲಿಸಲು ವಿಫಲರಾದ ಪೊಲೀಸರು: ಭಯೋತ್ಪಾದನೆ ಪ್ರಕರಣದಲ್ಲಿ ದೇವಿಂದರ್‌ಗೆ ಜಾಮೀನು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...