Homeಮುಖಪುಟಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಚು. ಆಯೋಗದ ಅನುಮತಿಯಿಲ್ಲದೆ ಬಿಜೆಪಿ ಸರ್ಕಾರದ ಅಧಿಕಾರಿಯನ್ನು ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ? ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವನ್ನು ದುರ್ಬಳಕೆ ಮಾಡಿಕೊಂಡು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಆರೋಪವನ್ನು ಪುಷ್ಠೀಕರಿಸುವ ಕೆಲವೊಂದು ಪುರಾವೆಗಳನ್ನು ಅವರು ಜನರ ಮುಂದಿಟ್ಟಿದ್ದು, ಕೆಲ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಿಜೆಪಿ ಎನ್‌ಐಎ ಮೂಲಕ ಟಿಎಂಸಿ ನಾಯರನ್ನು ಹೇಗೆ ಗುರಿಯಾಗಿಸುತ್ತಿದೆ ಎಂದು ನಿನ್ನೆ (ಏ.7) ನಾವು ಸುದ್ದಿಗೋಷ್ಠಿ ನಡೆಸಿದ್ದೆವು. ಕಳೆದ ಮಾರ್ಚ್ 26ರಂದು ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಅವರು ಕೊಲ್ಕತ್ತಾದಲ್ಲಿ ಎನ್‌ಐಎ ಎಸ್‌ಪಿ ಅವರನ್ನು ಭೇಟಿಯಾಗಿದ್ದರು. ಜಿತೇಂದ್ರ ತಿವಾರಿ ಒಂದು ಬ್ಯಾಗ್‌ನೊಂದಿಗೆ ಹೋಗಿದ್ದರು. ನಾವು ನಿನ್ನೆ ಸಾರ್ವಜನಿಕವಾಗಿ ಇದಕ್ಕೆ ಸಾಕ್ಷಿ ತೋರಿಸಿದ್ದೇವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಎನ್‌ಐಎ ಎಸ್‌ಪಿಯನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಬಂಗಾಳದಲ್ಲಿ ಯಾವೆಲ್ಲ ಟಿಎಂಸಿ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಪಡಿಸಬೇಕು ಎಂದು ಪಟ್ಟಿ ಕೊಟ್ಟಿದ್ದರು. ಅದೇ ದಿನ (ಮಾ.26) ಮೋದಿ ಸರ್ಕಾರ ಎನ್‌ಐಎ ಮುಖ್ಯಸ್ಥರಾಗಿ (ಎನ್‌ಐಎ ಡಿಜಿ) ಸದಾನಂದ ದಾಟೆ ಅವರನ್ನು ನೇಮಿಸಿದೆ. ಹೊಸ ಎನ್‌ಐಎ ಮುಖ್ಯಸ್ಥ ಮಾ.26ರವರೆಗೆ ಮಹಾರಾಷ್ಟ್ರದ ಎಟಿಎಸ್‌ ಅಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಎಟಿಎಸ್‌ಗೆ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರದ ಗೃಹ ಸಚಿವ ದೇವೇಂದ್ರ ಫಡ್ನವಿಸ್ ನೇಮಿಸಿದ್ದರು ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಇವಿಷ್ಟು ಮಾಹಿತಿಯನ್ನು ತಿಳಿಸಿರುವ ಸಾಕೇತ್ ಗೋಖಲೆ ಕೆಲವೊಂದು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಅವುಗಳು ಹೀಗಿವೆ..

ಮಹಾರಾಷ್ಟ್ರದ ರಾಜ್ಯ ಬಿಜೆಪಿ ಸರ್ಕಾರದಿಂದ ನೇಮಕಗೊಂಡ ಮತ್ತು ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಯೊಬ್ಬರು ಚುನಾವಣಾ ಸಮಯದಲ್ಲಿ ಇದ್ದಕ್ಕಿದ್ದಂತೆ ಎನ್‌ಐಎ ಡಿಜಿಯಾಗಿ ನೇಮಕಗೊಳಿಸುವಾಗ ಮೋದಿ ಸರ್ಕಾರ ಚುನಾವಣಾ ಆಯೋಗದ ಅನುಮತಿಯನ್ನು ತೆಗೆದುಕೊಂಡಿದೆಯೇ?

ಪಶ್ಚಿಮ ಬಂಗಾಳದ ಡಿಜಿಪಿ (ಪೊಲೀಸ್‌) ಯನ್ನು ಚುನಾವಣಾ ಆಯೋಗ 24 ಗಂಟೆಗಳಲ್ಲಿ 3 ಬಾರಿ ಬದಲಾಯಿಸಿದಾಗ, ಮಹಾರಾಷ್ಟ್ರ ಬಿಜೆಪಿ ಸರ್ಕಾರ ನೇಮಕ ಮಾಡಿದ ಅಧಿಕಾರಿಯನ್ನು ಚುನಾವಣಾ ಆಯೋಗದ ಅನುಮೋದನೆಯಿಲ್ಲದೆ ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ?

ಹೊಸ ಎನ್‌ಐಎ ಮುಖ್ಯಸ್ಥರನ್ನು ನೇಮಿಸಿದ ಒಂದೇ ದಿನದಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಜೊತೆ ಪಿತೂರಿ ನಡೆಸುತ್ತಿರುವುದು ನಮ್ಮನ್ನು ಬೆರಗುಗೊಳಿಸಿದೆ. ಈ ವಿಚಾರವನ್ನು ತಕ್ಷಣವೇ ಚುನಾವಣಾ ಆಯೋಗ ತನಿಖೆ ಮಾಡಬೇಕು ಮತ್ತು ಆಯೋಗದ ಅನುಮೋದನೆಯಿಲ್ಲದೆ ಹೊಸ ಎನ್‌ಐಎ ಮುಖ್ಯಸ್ಥರನ್ನು ಹೇಗೆ ನೇಮಿಸಲಾಯಿತು ಎಂಬುವುದನ್ನು ಮೋದಿ ಸರ್ಕಾರವು ವಿವರಿಸಬೇಕು ಎಂದು ಸಾಕೇತ್ ಗೋಖಲೆ ಆಗ್ರಹಿಸಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳು ಮತ್ತು ಬಿಜೆಪಿಯು ಈ ಲೋಕಸಭಾ ಚುನಾವಣೆಯ ಸಮಯದಲ್ಲಿ ಆಳವಾದ ಸಂಬಂಧಲ್ಲಿದೆ. ತನಿಖಾ ಸಂಸ್ಥೆಗಳು ಅಕ್ಷರಶಃ ಬಿಜೆಪಿಯ ಖಾಸಗಿ ಮಾಫಿಯಾದಂತೆ ಕಾರ್ಯನಿರ್ವಹಿಸುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರನ್ನು ಗುರಿಯಾಗಿಸಲು ಬಿಜೆಪಿಯೊಂದಿಗೆ ಎನ್‌ಐಎ ಪಿತೂರಿ ನಡೆಸುತ್ತಿರುವುದು ಶೋಚನೀಯವಾಗಿದೆ ಮಾತ್ರವಲ್ಲದೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಸಾಧ್ಯವೇ ಎಂಬ ಮೂಲಭೂತ ಪ್ರಶ್ನೆಗಳನ್ನು ಎತ್ತಿವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇಂದು(ಏ.8) ಸಂಜೆ 6 ಗಂಟೆಯ ಹೊತ್ತಿಗೆ ಟಿಎಂಸಿಯ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಎಂದು ಸಾಕೇತ್ ಗೋಖಲೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು. “ನಾವು ದೆಹಲಿಯ ಚುನಾವಣಾ ಆಯೋಗದ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ನಮ್ಮನ್ನು ಮಂದಿರ್ ಮಾರ್ಗ್‌ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುವುದು ಎಂದು ಹೇಳಿ ಕರೆ ತಂದಿದ್ದಾರೆ. ಆದರೆ, ಮಾರ್ಗ ಮಧ್ಯೆ ಬಸ್ ತಿರುಗಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ. ಗಮನಿಸಿ..ನಮ್ಮಲ್ಲಿ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸಿ, ಅಕ್ರಮವಾಗಿ ಬಂಧಿಸಿ, ಈಗ ಎಲ್ಲೋ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ” ಎಂದು ಸಾಕೇತ್ ಗೋಖಲೆ ಹೇಳಿದ್ದರು.

ಇದನ್ನೂ ಓದಿ : ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...