Homeಮುಖಪುಟಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಚು. ಆಯೋಗದ ಅನುಮತಿಯಿಲ್ಲದೆ ಬಿಜೆಪಿ ಸರ್ಕಾರದ ಅಧಿಕಾರಿಯನ್ನು ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ? ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವನ್ನು ದುರ್ಬಳಕೆ ಮಾಡಿಕೊಂಡು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಆರೋಪವನ್ನು ಪುಷ್ಠೀಕರಿಸುವ ಕೆಲವೊಂದು ಪುರಾವೆಗಳನ್ನು ಅವರು ಜನರ ಮುಂದಿಟ್ಟಿದ್ದು, ಕೆಲ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಿಜೆಪಿ ಎನ್‌ಐಎ ಮೂಲಕ ಟಿಎಂಸಿ ನಾಯರನ್ನು ಹೇಗೆ ಗುರಿಯಾಗಿಸುತ್ತಿದೆ ಎಂದು ನಿನ್ನೆ (ಏ.7) ನಾವು ಸುದ್ದಿಗೋಷ್ಠಿ ನಡೆಸಿದ್ದೆವು. ಕಳೆದ ಮಾರ್ಚ್ 26ರಂದು ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಅವರು ಕೊಲ್ಕತ್ತಾದಲ್ಲಿ ಎನ್‌ಐಎ ಎಸ್‌ಪಿ ಅವರನ್ನು ಭೇಟಿಯಾಗಿದ್ದರು. ಜಿತೇಂದ್ರ ತಿವಾರಿ ಒಂದು ಬ್ಯಾಗ್‌ನೊಂದಿಗೆ ಹೋಗಿದ್ದರು. ನಾವು ನಿನ್ನೆ ಸಾರ್ವಜನಿಕವಾಗಿ ಇದಕ್ಕೆ ಸಾಕ್ಷಿ ತೋರಿಸಿದ್ದೇವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಎನ್‌ಐಎ ಎಸ್‌ಪಿಯನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಬಂಗಾಳದಲ್ಲಿ ಯಾವೆಲ್ಲ ಟಿಎಂಸಿ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಪಡಿಸಬೇಕು ಎಂದು ಪಟ್ಟಿ ಕೊಟ್ಟಿದ್ದರು. ಅದೇ ದಿನ (ಮಾ.26) ಮೋದಿ ಸರ್ಕಾರ ಎನ್‌ಐಎ ಮುಖ್ಯಸ್ಥರಾಗಿ (ಎನ್‌ಐಎ ಡಿಜಿ) ಸದಾನಂದ ದಾಟೆ ಅವರನ್ನು ನೇಮಿಸಿದೆ. ಹೊಸ ಎನ್‌ಐಎ ಮುಖ್ಯಸ್ಥ ಮಾ.26ರವರೆಗೆ ಮಹಾರಾಷ್ಟ್ರದ ಎಟಿಎಸ್‌ ಅಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಎಟಿಎಸ್‌ಗೆ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರದ ಗೃಹ ಸಚಿವ ದೇವೇಂದ್ರ ಫಡ್ನವಿಸ್ ನೇಮಿಸಿದ್ದರು ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಇವಿಷ್ಟು ಮಾಹಿತಿಯನ್ನು ತಿಳಿಸಿರುವ ಸಾಕೇತ್ ಗೋಖಲೆ ಕೆಲವೊಂದು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಅವುಗಳು ಹೀಗಿವೆ..

ಮಹಾರಾಷ್ಟ್ರದ ರಾಜ್ಯ ಬಿಜೆಪಿ ಸರ್ಕಾರದಿಂದ ನೇಮಕಗೊಂಡ ಮತ್ತು ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಯೊಬ್ಬರು ಚುನಾವಣಾ ಸಮಯದಲ್ಲಿ ಇದ್ದಕ್ಕಿದ್ದಂತೆ ಎನ್‌ಐಎ ಡಿಜಿಯಾಗಿ ನೇಮಕಗೊಳಿಸುವಾಗ ಮೋದಿ ಸರ್ಕಾರ ಚುನಾವಣಾ ಆಯೋಗದ ಅನುಮತಿಯನ್ನು ತೆಗೆದುಕೊಂಡಿದೆಯೇ?

ಪಶ್ಚಿಮ ಬಂಗಾಳದ ಡಿಜಿಪಿ (ಪೊಲೀಸ್‌) ಯನ್ನು ಚುನಾವಣಾ ಆಯೋಗ 24 ಗಂಟೆಗಳಲ್ಲಿ 3 ಬಾರಿ ಬದಲಾಯಿಸಿದಾಗ, ಮಹಾರಾಷ್ಟ್ರ ಬಿಜೆಪಿ ಸರ್ಕಾರ ನೇಮಕ ಮಾಡಿದ ಅಧಿಕಾರಿಯನ್ನು ಚುನಾವಣಾ ಆಯೋಗದ ಅನುಮೋದನೆಯಿಲ್ಲದೆ ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ?

ಹೊಸ ಎನ್‌ಐಎ ಮುಖ್ಯಸ್ಥರನ್ನು ನೇಮಿಸಿದ ಒಂದೇ ದಿನದಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಜೊತೆ ಪಿತೂರಿ ನಡೆಸುತ್ತಿರುವುದು ನಮ್ಮನ್ನು ಬೆರಗುಗೊಳಿಸಿದೆ. ಈ ವಿಚಾರವನ್ನು ತಕ್ಷಣವೇ ಚುನಾವಣಾ ಆಯೋಗ ತನಿಖೆ ಮಾಡಬೇಕು ಮತ್ತು ಆಯೋಗದ ಅನುಮೋದನೆಯಿಲ್ಲದೆ ಹೊಸ ಎನ್‌ಐಎ ಮುಖ್ಯಸ್ಥರನ್ನು ಹೇಗೆ ನೇಮಿಸಲಾಯಿತು ಎಂಬುವುದನ್ನು ಮೋದಿ ಸರ್ಕಾರವು ವಿವರಿಸಬೇಕು ಎಂದು ಸಾಕೇತ್ ಗೋಖಲೆ ಆಗ್ರಹಿಸಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳು ಮತ್ತು ಬಿಜೆಪಿಯು ಈ ಲೋಕಸಭಾ ಚುನಾವಣೆಯ ಸಮಯದಲ್ಲಿ ಆಳವಾದ ಸಂಬಂಧಲ್ಲಿದೆ. ತನಿಖಾ ಸಂಸ್ಥೆಗಳು ಅಕ್ಷರಶಃ ಬಿಜೆಪಿಯ ಖಾಸಗಿ ಮಾಫಿಯಾದಂತೆ ಕಾರ್ಯನಿರ್ವಹಿಸುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರನ್ನು ಗುರಿಯಾಗಿಸಲು ಬಿಜೆಪಿಯೊಂದಿಗೆ ಎನ್‌ಐಎ ಪಿತೂರಿ ನಡೆಸುತ್ತಿರುವುದು ಶೋಚನೀಯವಾಗಿದೆ ಮಾತ್ರವಲ್ಲದೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಸಾಧ್ಯವೇ ಎಂಬ ಮೂಲಭೂತ ಪ್ರಶ್ನೆಗಳನ್ನು ಎತ್ತಿವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇಂದು(ಏ.8) ಸಂಜೆ 6 ಗಂಟೆಯ ಹೊತ್ತಿಗೆ ಟಿಎಂಸಿಯ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಎಂದು ಸಾಕೇತ್ ಗೋಖಲೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು. “ನಾವು ದೆಹಲಿಯ ಚುನಾವಣಾ ಆಯೋಗದ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ನಮ್ಮನ್ನು ಮಂದಿರ್ ಮಾರ್ಗ್‌ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುವುದು ಎಂದು ಹೇಳಿ ಕರೆ ತಂದಿದ್ದಾರೆ. ಆದರೆ, ಮಾರ್ಗ ಮಧ್ಯೆ ಬಸ್ ತಿರುಗಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ. ಗಮನಿಸಿ..ನಮ್ಮಲ್ಲಿ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸಿ, ಅಕ್ರಮವಾಗಿ ಬಂಧಿಸಿ, ಈಗ ಎಲ್ಲೋ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ” ಎಂದು ಸಾಕೇತ್ ಗೋಖಲೆ ಹೇಳಿದ್ದರು.

ಇದನ್ನೂ ಓದಿ : ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...