Homeಮುಖಪುಟಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಚು. ಆಯೋಗದ ಅನುಮತಿಯಿಲ್ಲದೆ ಬಿಜೆಪಿ ಸರ್ಕಾರದ ಅಧಿಕಾರಿಯನ್ನು ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ? ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವನ್ನು ದುರ್ಬಳಕೆ ಮಾಡಿಕೊಂಡು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಆರೋಪವನ್ನು ಪುಷ್ಠೀಕರಿಸುವ ಕೆಲವೊಂದು ಪುರಾವೆಗಳನ್ನು ಅವರು ಜನರ ಮುಂದಿಟ್ಟಿದ್ದು, ಕೆಲ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಿಜೆಪಿ ಎನ್‌ಐಎ ಮೂಲಕ ಟಿಎಂಸಿ ನಾಯರನ್ನು ಹೇಗೆ ಗುರಿಯಾಗಿಸುತ್ತಿದೆ ಎಂದು ನಿನ್ನೆ (ಏ.7) ನಾವು ಸುದ್ದಿಗೋಷ್ಠಿ ನಡೆಸಿದ್ದೆವು. ಕಳೆದ ಮಾರ್ಚ್ 26ರಂದು ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಅವರು ಕೊಲ್ಕತ್ತಾದಲ್ಲಿ ಎನ್‌ಐಎ ಎಸ್‌ಪಿ ಅವರನ್ನು ಭೇಟಿಯಾಗಿದ್ದರು. ಜಿತೇಂದ್ರ ತಿವಾರಿ ಒಂದು ಬ್ಯಾಗ್‌ನೊಂದಿಗೆ ಹೋಗಿದ್ದರು. ನಾವು ನಿನ್ನೆ ಸಾರ್ವಜನಿಕವಾಗಿ ಇದಕ್ಕೆ ಸಾಕ್ಷಿ ತೋರಿಸಿದ್ದೇವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಎನ್‌ಐಎ ಎಸ್‌ಪಿಯನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಬಂಗಾಳದಲ್ಲಿ ಯಾವೆಲ್ಲ ಟಿಎಂಸಿ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಪಡಿಸಬೇಕು ಎಂದು ಪಟ್ಟಿ ಕೊಟ್ಟಿದ್ದರು. ಅದೇ ದಿನ (ಮಾ.26) ಮೋದಿ ಸರ್ಕಾರ ಎನ್‌ಐಎ ಮುಖ್ಯಸ್ಥರಾಗಿ (ಎನ್‌ಐಎ ಡಿಜಿ) ಸದಾನಂದ ದಾಟೆ ಅವರನ್ನು ನೇಮಿಸಿದೆ. ಹೊಸ ಎನ್‌ಐಎ ಮುಖ್ಯಸ್ಥ ಮಾ.26ರವರೆಗೆ ಮಹಾರಾಷ್ಟ್ರದ ಎಟಿಎಸ್‌ ಅಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಎಟಿಎಸ್‌ಗೆ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರದ ಗೃಹ ಸಚಿವ ದೇವೇಂದ್ರ ಫಡ್ನವಿಸ್ ನೇಮಿಸಿದ್ದರು ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಇವಿಷ್ಟು ಮಾಹಿತಿಯನ್ನು ತಿಳಿಸಿರುವ ಸಾಕೇತ್ ಗೋಖಲೆ ಕೆಲವೊಂದು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಅವುಗಳು ಹೀಗಿವೆ..

ಮಹಾರಾಷ್ಟ್ರದ ರಾಜ್ಯ ಬಿಜೆಪಿ ಸರ್ಕಾರದಿಂದ ನೇಮಕಗೊಂಡ ಮತ್ತು ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಯೊಬ್ಬರು ಚುನಾವಣಾ ಸಮಯದಲ್ಲಿ ಇದ್ದಕ್ಕಿದ್ದಂತೆ ಎನ್‌ಐಎ ಡಿಜಿಯಾಗಿ ನೇಮಕಗೊಳಿಸುವಾಗ ಮೋದಿ ಸರ್ಕಾರ ಚುನಾವಣಾ ಆಯೋಗದ ಅನುಮತಿಯನ್ನು ತೆಗೆದುಕೊಂಡಿದೆಯೇ?

ಪಶ್ಚಿಮ ಬಂಗಾಳದ ಡಿಜಿಪಿ (ಪೊಲೀಸ್‌) ಯನ್ನು ಚುನಾವಣಾ ಆಯೋಗ 24 ಗಂಟೆಗಳಲ್ಲಿ 3 ಬಾರಿ ಬದಲಾಯಿಸಿದಾಗ, ಮಹಾರಾಷ್ಟ್ರ ಬಿಜೆಪಿ ಸರ್ಕಾರ ನೇಮಕ ಮಾಡಿದ ಅಧಿಕಾರಿಯನ್ನು ಚುನಾವಣಾ ಆಯೋಗದ ಅನುಮೋದನೆಯಿಲ್ಲದೆ ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ?

ಹೊಸ ಎನ್‌ಐಎ ಮುಖ್ಯಸ್ಥರನ್ನು ನೇಮಿಸಿದ ಒಂದೇ ದಿನದಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಜೊತೆ ಪಿತೂರಿ ನಡೆಸುತ್ತಿರುವುದು ನಮ್ಮನ್ನು ಬೆರಗುಗೊಳಿಸಿದೆ. ಈ ವಿಚಾರವನ್ನು ತಕ್ಷಣವೇ ಚುನಾವಣಾ ಆಯೋಗ ತನಿಖೆ ಮಾಡಬೇಕು ಮತ್ತು ಆಯೋಗದ ಅನುಮೋದನೆಯಿಲ್ಲದೆ ಹೊಸ ಎನ್‌ಐಎ ಮುಖ್ಯಸ್ಥರನ್ನು ಹೇಗೆ ನೇಮಿಸಲಾಯಿತು ಎಂಬುವುದನ್ನು ಮೋದಿ ಸರ್ಕಾರವು ವಿವರಿಸಬೇಕು ಎಂದು ಸಾಕೇತ್ ಗೋಖಲೆ ಆಗ್ರಹಿಸಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳು ಮತ್ತು ಬಿಜೆಪಿಯು ಈ ಲೋಕಸಭಾ ಚುನಾವಣೆಯ ಸಮಯದಲ್ಲಿ ಆಳವಾದ ಸಂಬಂಧಲ್ಲಿದೆ. ತನಿಖಾ ಸಂಸ್ಥೆಗಳು ಅಕ್ಷರಶಃ ಬಿಜೆಪಿಯ ಖಾಸಗಿ ಮಾಫಿಯಾದಂತೆ ಕಾರ್ಯನಿರ್ವಹಿಸುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರನ್ನು ಗುರಿಯಾಗಿಸಲು ಬಿಜೆಪಿಯೊಂದಿಗೆ ಎನ್‌ಐಎ ಪಿತೂರಿ ನಡೆಸುತ್ತಿರುವುದು ಶೋಚನೀಯವಾಗಿದೆ ಮಾತ್ರವಲ್ಲದೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಸಾಧ್ಯವೇ ಎಂಬ ಮೂಲಭೂತ ಪ್ರಶ್ನೆಗಳನ್ನು ಎತ್ತಿವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇಂದು(ಏ.8) ಸಂಜೆ 6 ಗಂಟೆಯ ಹೊತ್ತಿಗೆ ಟಿಎಂಸಿಯ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಎಂದು ಸಾಕೇತ್ ಗೋಖಲೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು. “ನಾವು ದೆಹಲಿಯ ಚುನಾವಣಾ ಆಯೋಗದ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ನಮ್ಮನ್ನು ಮಂದಿರ್ ಮಾರ್ಗ್‌ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುವುದು ಎಂದು ಹೇಳಿ ಕರೆ ತಂದಿದ್ದಾರೆ. ಆದರೆ, ಮಾರ್ಗ ಮಧ್ಯೆ ಬಸ್ ತಿರುಗಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ. ಗಮನಿಸಿ..ನಮ್ಮಲ್ಲಿ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸಿ, ಅಕ್ರಮವಾಗಿ ಬಂಧಿಸಿ, ಈಗ ಎಲ್ಲೋ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ” ಎಂದು ಸಾಕೇತ್ ಗೋಖಲೆ ಹೇಳಿದ್ದರು.

ಇದನ್ನೂ ಓದಿ : ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...