Homeಮುಖಪುಟಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಬಿಜೆಪಿ ಕೊಟ್ಟ ಪಟ್ಟಿಯಂತೆ ಟಿಎಂಸಿ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಎನ್‌ಐಎ: ಸಾಕೇತ್ ಗೋಖಲೆ

ಚು. ಆಯೋಗದ ಅನುಮತಿಯಿಲ್ಲದೆ ಬಿಜೆಪಿ ಸರ್ಕಾರದ ಅಧಿಕಾರಿಯನ್ನು ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ? ಗಂಭೀರ ಪ್ರಶ್ನೆ ಎತ್ತಿದ ಟಿಎಂಸಿ ಸಂಸದ

- Advertisement -
- Advertisement -

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವನ್ನು ದುರ್ಬಳಕೆ ಮಾಡಿಕೊಂಡು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಆರೋಪವನ್ನು ಪುಷ್ಠೀಕರಿಸುವ ಕೆಲವೊಂದು ಪುರಾವೆಗಳನ್ನು ಅವರು ಜನರ ಮುಂದಿಟ್ಟಿದ್ದು, ಕೆಲ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಿಜೆಪಿ ಎನ್‌ಐಎ ಮೂಲಕ ಟಿಎಂಸಿ ನಾಯರನ್ನು ಹೇಗೆ ಗುರಿಯಾಗಿಸುತ್ತಿದೆ ಎಂದು ನಿನ್ನೆ (ಏ.7) ನಾವು ಸುದ್ದಿಗೋಷ್ಠಿ ನಡೆಸಿದ್ದೆವು. ಕಳೆದ ಮಾರ್ಚ್ 26ರಂದು ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಅವರು ಕೊಲ್ಕತ್ತಾದಲ್ಲಿ ಎನ್‌ಐಎ ಎಸ್‌ಪಿ ಅವರನ್ನು ಭೇಟಿಯಾಗಿದ್ದರು. ಜಿತೇಂದ್ರ ತಿವಾರಿ ಒಂದು ಬ್ಯಾಗ್‌ನೊಂದಿಗೆ ಹೋಗಿದ್ದರು. ನಾವು ನಿನ್ನೆ ಸಾರ್ವಜನಿಕವಾಗಿ ಇದಕ್ಕೆ ಸಾಕ್ಷಿ ತೋರಿಸಿದ್ದೇವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಎನ್‌ಐಎ ಎಸ್‌ಪಿಯನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರ ಜಿತೇಂದ್ರ ತಿವಾರಿ ಬಂಗಾಳದಲ್ಲಿ ಯಾವೆಲ್ಲ ಟಿಎಂಸಿ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಪಡಿಸಬೇಕು ಎಂದು ಪಟ್ಟಿ ಕೊಟ್ಟಿದ್ದರು. ಅದೇ ದಿನ (ಮಾ.26) ಮೋದಿ ಸರ್ಕಾರ ಎನ್‌ಐಎ ಮುಖ್ಯಸ್ಥರಾಗಿ (ಎನ್‌ಐಎ ಡಿಜಿ) ಸದಾನಂದ ದಾಟೆ ಅವರನ್ನು ನೇಮಿಸಿದೆ. ಹೊಸ ಎನ್‌ಐಎ ಮುಖ್ಯಸ್ಥ ಮಾ.26ರವರೆಗೆ ಮಹಾರಾಷ್ಟ್ರದ ಎಟಿಎಸ್‌ ಅಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಎಟಿಎಸ್‌ಗೆ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರದ ಗೃಹ ಸಚಿವ ದೇವೇಂದ್ರ ಫಡ್ನವಿಸ್ ನೇಮಿಸಿದ್ದರು ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಇವಿಷ್ಟು ಮಾಹಿತಿಯನ್ನು ತಿಳಿಸಿರುವ ಸಾಕೇತ್ ಗೋಖಲೆ ಕೆಲವೊಂದು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದು, ಅವುಗಳು ಹೀಗಿವೆ..

ಮಹಾರಾಷ್ಟ್ರದ ರಾಜ್ಯ ಬಿಜೆಪಿ ಸರ್ಕಾರದಿಂದ ನೇಮಕಗೊಂಡ ಮತ್ತು ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಯೊಬ್ಬರು ಚುನಾವಣಾ ಸಮಯದಲ್ಲಿ ಇದ್ದಕ್ಕಿದ್ದಂತೆ ಎನ್‌ಐಎ ಡಿಜಿಯಾಗಿ ನೇಮಕಗೊಳಿಸುವಾಗ ಮೋದಿ ಸರ್ಕಾರ ಚುನಾವಣಾ ಆಯೋಗದ ಅನುಮತಿಯನ್ನು ತೆಗೆದುಕೊಂಡಿದೆಯೇ?

ಪಶ್ಚಿಮ ಬಂಗಾಳದ ಡಿಜಿಪಿ (ಪೊಲೀಸ್‌) ಯನ್ನು ಚುನಾವಣಾ ಆಯೋಗ 24 ಗಂಟೆಗಳಲ್ಲಿ 3 ಬಾರಿ ಬದಲಾಯಿಸಿದಾಗ, ಮಹಾರಾಷ್ಟ್ರ ಬಿಜೆಪಿ ಸರ್ಕಾರ ನೇಮಕ ಮಾಡಿದ ಅಧಿಕಾರಿಯನ್ನು ಚುನಾವಣಾ ಆಯೋಗದ ಅನುಮೋದನೆಯಿಲ್ಲದೆ ಎನ್‌ಐಎ ಮುಖ್ಯಸ್ಥರಾಗಿ ನೇಮಿಸಿದ್ದು ಹೇಗೆ?

ಹೊಸ ಎನ್‌ಐಎ ಮುಖ್ಯಸ್ಥರನ್ನು ನೇಮಿಸಿದ ಒಂದೇ ದಿನದಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಜೊತೆ ಪಿತೂರಿ ನಡೆಸುತ್ತಿರುವುದು ನಮ್ಮನ್ನು ಬೆರಗುಗೊಳಿಸಿದೆ. ಈ ವಿಚಾರವನ್ನು ತಕ್ಷಣವೇ ಚುನಾವಣಾ ಆಯೋಗ ತನಿಖೆ ಮಾಡಬೇಕು ಮತ್ತು ಆಯೋಗದ ಅನುಮೋದನೆಯಿಲ್ಲದೆ ಹೊಸ ಎನ್‌ಐಎ ಮುಖ್ಯಸ್ಥರನ್ನು ಹೇಗೆ ನೇಮಿಸಲಾಯಿತು ಎಂಬುವುದನ್ನು ಮೋದಿ ಸರ್ಕಾರವು ವಿವರಿಸಬೇಕು ಎಂದು ಸಾಕೇತ್ ಗೋಖಲೆ ಆಗ್ರಹಿಸಿದ್ದಾರೆ.

ಕೇಂದ್ರದ ತನಿಖಾ ಸಂಸ್ಥೆಗಳು ಮತ್ತು ಬಿಜೆಪಿಯು ಈ ಲೋಕಸಭಾ ಚುನಾವಣೆಯ ಸಮಯದಲ್ಲಿ ಆಳವಾದ ಸಂಬಂಧಲ್ಲಿದೆ. ತನಿಖಾ ಸಂಸ್ಥೆಗಳು ಅಕ್ಷರಶಃ ಬಿಜೆಪಿಯ ಖಾಸಗಿ ಮಾಫಿಯಾದಂತೆ ಕಾರ್ಯನಿರ್ವಹಿಸುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರನ್ನು ಗುರಿಯಾಗಿಸಲು ಬಿಜೆಪಿಯೊಂದಿಗೆ ಎನ್‌ಐಎ ಪಿತೂರಿ ನಡೆಸುತ್ತಿರುವುದು ಶೋಚನೀಯವಾಗಿದೆ ಮಾತ್ರವಲ್ಲದೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಸಾಧ್ಯವೇ ಎಂಬ ಮೂಲಭೂತ ಪ್ರಶ್ನೆಗಳನ್ನು ಎತ್ತಿವೆ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇಂದು(ಏ.8) ಸಂಜೆ 6 ಗಂಟೆಯ ಹೊತ್ತಿಗೆ ಟಿಎಂಸಿಯ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಎಂದು ಸಾಕೇತ್ ಗೋಖಲೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು. “ನಾವು ದೆಹಲಿಯ ಚುನಾವಣಾ ಆಯೋಗದ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ನಮ್ಮನ್ನು ಮಂದಿರ್ ಮಾರ್ಗ್‌ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುವುದು ಎಂದು ಹೇಳಿ ಕರೆ ತಂದಿದ್ದಾರೆ. ಆದರೆ, ಮಾರ್ಗ ಮಧ್ಯೆ ಬಸ್ ತಿರುಗಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ. ಗಮನಿಸಿ..ನಮ್ಮಲ್ಲಿ ಐವರು ಹಾಲಿ ಮತ್ತು ನಾಲ್ವರು ಮಾಜಿ ಸಂಸದರಿದ್ದಾರೆ. ನಮ್ಮ ಮೇಲೆ ಹಲ್ಲೆ ನಡೆಸಿ, ಅಕ್ರಮವಾಗಿ ಬಂಧಿಸಿ, ಈಗ ಎಲ್ಲೋ ಅಜ್ಞಾತ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾರೆ” ಎಂದು ಸಾಕೇತ್ ಗೋಖಲೆ ಹೇಳಿದ್ದರು.

ಇದನ್ನೂ ಓದಿ : ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...