Homeಅಂತರಾಷ್ಟ್ರೀಯ"ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ" : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ...

“ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ” : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ ಹೇಳಿಕೆ

- Advertisement -
- Advertisement -

“ಅಮೆರಿಕ ಮಾಡಿರುವ ಮಾದಕವಸ್ತು ಕಳ್ಳಸಾಗಣೆ ಆರೋಪ ಪ್ರಕರಣಗಳಲ್ಲಿ ನಾನು ತಪ್ಪೊಪ್ಪಿಕೊಂಡಿಲ್ಲ. ನಾನು ನಿರಪರಾಧಿ, ನನ್ನನ್ನು ಅಪಹರಿಸಲಾಗಿದೆ. ನಾನು ಈಗಲೂ ವೆನೆಜುವೆಲಾದ ಸಾಂವಿಧಾನಿಕ ಅಧ್ಯಕ್ಷ” ಎಂದು ನಿಕೋಲಸ್ ಮಡುರೊ ಅಮೆರಿಕದ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ವೆನೆಜುವೆಲಾ ದೇಶಕ್ಕೆ ನುಗ್ಗಿ ಅಧ್ಯಕ್ಷ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿದ ಅಮೆರಿಕ ಸೇನೆ, ಬಳಿಕ ಇಬ್ಬರನ್ನೂ ನ್ಯೂಯಾರ್ಕ್‌ಗೆ ಸ್ಥಳಾಂತರಿಸಿತ್ತು. ಸೋಮವಾರ (ಜ.5) ಮೊದಲ ಬಾರಿಗೆ ಮಡುರೊ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಮಾದಕವಸ್ತು, ಭಯೋತ್ಪಾದನೆ ಸೇರಿದಂತೆ ಹಲವು ಆರೋಪಗಳ ಮೇಲೆ ವಿಚಾರಣೆಗಾಗಿ ಮಡರೊ ಅವರನ್ನು ಸೋಮವಾರ ಅಮೆರಿಕದ ಜಿಲ್ಲಾ ನ್ಯಾಯಾಧೀಶ ಆಲ್ವಿನ್ ಕೆ ಹೆಲ್ಲರ್‌ಸ್ಟೈನ್ ಅವರ ಮುಂದೆ ಹಾಜರುಪಡಿಸಲಾಗಿತ್ತು ಎಂದು ಸುದ್ದಿ ಸಂಸ್ಥೆ ಅಲ್ ಜಝೀರಾ ವರದಿ ಮಾಡಿದೆ.

ವಿಚಾರಣೆ ವೇಳೆ ಮಡುರೊ ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಕೂಡ ತಪ್ಪೊಪ್ಪಿಕೊಂಡಿಲ್ಲ. ಗಂಡ-ಹೆಂಡತಿ ಇಬ್ಬರೂ ಜಾಮೀನು ಅಥವಾ ಬಿಡುಗಡೆಯನ್ನು ಕೋರಿಲ್ಲ. ನ್ಯಾಯಾಧೀಶರು ಮಡುರೊ ಅವರ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ನಿಗದಿಪಡಿಸಿದ್ದಾರೆ.

ಈ ನಡುವೆ ಕ್ಯಾರಕಾಸ್‌ನಲ್ಲಿ, ನಿಕೋಲಸ್ ಮಡುರೊ ಅವರ ಮಗ ನಿಕೋಲಸ್ ಮಡುರೊ ಗುಯೆರಾ, ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಗೆ ತಮ್ಮ ತಂದೆಯನ್ನು ಅಮೆರಿಕ ‘ಅಪಹರಿಸಿದೆ’ ಎಂದು ಹೇಳಿದ್ದು,ಅವರ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ‘ಅಂತಾರಾಷ್ಟ್ರೀಯ ಒಗ್ಗಟ್ಟಿಗೆ’ ಕರೆ ನೀಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ಮಡುರೊ ದಂಪತಿಯನ್ನು ಸೆರೆಹಿಡಿಯಲಾದ ಎರಡು ದಿನಗಳ ನಂತರ ನಡೆದ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ನಿಕೋಲಸ್ ಮಡುರೊ ಗುಯೆರಾ, ಅಮೆರಿಕದ ಕಾರ್ಯಾಚರಣೆ ವೆನೆಜುವೆಲಾದ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ. ಇಂತಹ ಬೆಳವಣಿಗೆ ಬೇರೆ ದೇಶದಲ್ಲೂ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ.

“ರಾಷ್ಟ್ರದ ಮುಖ್ಯಸ್ಥರ ಅಪಹರಣವನ್ನೇ ನಾವು ಸಾಮಾನ್ಯಗೊಳಿಸಿದರೆ, ಯಾವುದೇ ದೇಶವು ಸುರಕ್ಷಿತವಾಗಿರುವುದಿಲ್ಲ. ಇದು ಪ್ರಾದೇಶಿಕ ಸಮಸ್ಯೆಯಲ್ಲ, ಇದು ಜಾಗತಿಕ ಸ್ಥಿರತೆಗೆ, ಮಾನವೀಯತೆಗೆ ಮತ್ತು ರಾಷ್ಟ್ರಗಳ ಸಾರ್ವಭೌಮ ಸಮಾನತೆಗೆ ನೇರ ಬೆದರಿಕೆಯಾಗಿದೆ” ಎಂದು ನಿಕೋಲಸ್ ಮಡುರೊ ಗುಯೆರಾ ಹೇಳಿದ್ದಾಗಿ ಸಿಎನ್‌ಎನ್ ಉಲ್ಲೇಖಿಸಿದೆ.

ಅಮೆರಿಕವು ಮಡುರೊ ವಿರುದ್ಧ ಮಾದಕವಸ್ತು ಭಯೋತ್ಪಾದನೆ (Narco Terrorism)ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ಇತರ ಆರೋಪಗಳನ್ನು ಹೊರಿಸಿದೆ. ವೆನೆಜುವೆಲಾ ಸರ್ಕಾರ ಈ ಆರೋಪಗಳನ್ನು ತಿರಸ್ಕರಿಸಿದೆ.

ವೆನೆಜುವೆಲಾ ಸರ್ಕಾರವು ಅಮೆರಿಕದ ಕೃತ್ಯವನ್ನು ‘ಮಿಲಿಟರಿ ಆಕ್ರಮಣ’ ಎಂದು ಬಣ್ಣಿಸಿದೆ. ಮಡುರೊ ಮತ್ತು ಫ್ಲೋರ್ಸ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಭಾನುವಾರ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ಹಂಗಾಮಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಮೆರಿಕದೊಂದಿಗೆ ಸಹಕರಿಸಲು ಅವರು ನಿರ್ಧರಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂದೇಶವೊಂದರಲ್ಲಿ ರೊಡ್ರಿಗಸ್ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ‘ಗೌರವಯುತ ಸಂಬಂಧಗಳನ್ನು’ ಸ್ಥಾಪಿಸುವ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...