Homeಅಂತರಾಷ್ಟ್ರೀಯ"ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ" : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ...

“ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ” : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ ಹೇಳಿಕೆ

- Advertisement -
- Advertisement -

“ಅಮೆರಿಕ ಮಾಡಿರುವ ಮಾದಕವಸ್ತು ಕಳ್ಳಸಾಗಣೆ ಆರೋಪ ಪ್ರಕರಣಗಳಲ್ಲಿ ನಾನು ತಪ್ಪೊಪ್ಪಿಕೊಂಡಿಲ್ಲ. ನಾನು ನಿರಪರಾಧಿ, ನನ್ನನ್ನು ಅಪಹರಿಸಲಾಗಿದೆ. ನಾನು ಈಗಲೂ ವೆನೆಜುವೆಲಾದ ಸಾಂವಿಧಾನಿಕ ಅಧ್ಯಕ್ಷ” ಎಂದು ನಿಕೋಲಸ್ ಮಡುರೊ ಅಮೆರಿಕದ ನ್ಯಾಯಾಲಯದ ಮುಂದೆ ಹೇಳಿದ್ದಾರೆ.

ವೆನೆಜುವೆಲಾ ದೇಶಕ್ಕೆ ನುಗ್ಗಿ ಅಧ್ಯಕ್ಷ ಮಡುರೊ ಮತ್ತು ಅವರ ಪತ್ನಿಯನ್ನು ಬಂಧಿಸಿದ ಅಮೆರಿಕ ಸೇನೆ, ಬಳಿಕ ಇಬ್ಬರನ್ನೂ ನ್ಯೂಯಾರ್ಕ್‌ಗೆ ಸ್ಥಳಾಂತರಿಸಿತ್ತು. ಸೋಮವಾರ (ಜ.5) ಮೊದಲ ಬಾರಿಗೆ ಮಡುರೊ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಮಾದಕವಸ್ತು, ಭಯೋತ್ಪಾದನೆ ಸೇರಿದಂತೆ ಹಲವು ಆರೋಪಗಳ ಮೇಲೆ ವಿಚಾರಣೆಗಾಗಿ ಮಡರೊ ಅವರನ್ನು ಸೋಮವಾರ ಅಮೆರಿಕದ ಜಿಲ್ಲಾ ನ್ಯಾಯಾಧೀಶ ಆಲ್ವಿನ್ ಕೆ ಹೆಲ್ಲರ್‌ಸ್ಟೈನ್ ಅವರ ಮುಂದೆ ಹಾಜರುಪಡಿಸಲಾಗಿತ್ತು ಎಂದು ಸುದ್ದಿ ಸಂಸ್ಥೆ ಅಲ್ ಜಝೀರಾ ವರದಿ ಮಾಡಿದೆ.

ವಿಚಾರಣೆ ವೇಳೆ ಮಡುರೊ ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಕೂಡ ತಪ್ಪೊಪ್ಪಿಕೊಂಡಿಲ್ಲ. ಗಂಡ-ಹೆಂಡತಿ ಇಬ್ಬರೂ ಜಾಮೀನು ಅಥವಾ ಬಿಡುಗಡೆಯನ್ನು ಕೋರಿಲ್ಲ. ನ್ಯಾಯಾಧೀಶರು ಮಡುರೊ ಅವರ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ನಿಗದಿಪಡಿಸಿದ್ದಾರೆ.

ಈ ನಡುವೆ ಕ್ಯಾರಕಾಸ್‌ನಲ್ಲಿ, ನಿಕೋಲಸ್ ಮಡುರೊ ಅವರ ಮಗ ನಿಕೋಲಸ್ ಮಡುರೊ ಗುಯೆರಾ, ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಗೆ ತಮ್ಮ ತಂದೆಯನ್ನು ಅಮೆರಿಕ ‘ಅಪಹರಿಸಿದೆ’ ಎಂದು ಹೇಳಿದ್ದು,ಅವರ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ‘ಅಂತಾರಾಷ್ಟ್ರೀಯ ಒಗ್ಗಟ್ಟಿಗೆ’ ಕರೆ ನೀಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ಮಡುರೊ ದಂಪತಿಯನ್ನು ಸೆರೆಹಿಡಿಯಲಾದ ಎರಡು ದಿನಗಳ ನಂತರ ನಡೆದ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ನಿಕೋಲಸ್ ಮಡುರೊ ಗುಯೆರಾ, ಅಮೆರಿಕದ ಕಾರ್ಯಾಚರಣೆ ವೆನೆಜುವೆಲಾದ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ. ಇಂತಹ ಬೆಳವಣಿಗೆ ಬೇರೆ ದೇಶದಲ್ಲೂ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ.

“ರಾಷ್ಟ್ರದ ಮುಖ್ಯಸ್ಥರ ಅಪಹರಣವನ್ನೇ ನಾವು ಸಾಮಾನ್ಯಗೊಳಿಸಿದರೆ, ಯಾವುದೇ ದೇಶವು ಸುರಕ್ಷಿತವಾಗಿರುವುದಿಲ್ಲ. ಇದು ಪ್ರಾದೇಶಿಕ ಸಮಸ್ಯೆಯಲ್ಲ, ಇದು ಜಾಗತಿಕ ಸ್ಥಿರತೆಗೆ, ಮಾನವೀಯತೆಗೆ ಮತ್ತು ರಾಷ್ಟ್ರಗಳ ಸಾರ್ವಭೌಮ ಸಮಾನತೆಗೆ ನೇರ ಬೆದರಿಕೆಯಾಗಿದೆ” ಎಂದು ನಿಕೋಲಸ್ ಮಡುರೊ ಗುಯೆರಾ ಹೇಳಿದ್ದಾಗಿ ಸಿಎನ್‌ಎನ್ ಉಲ್ಲೇಖಿಸಿದೆ.

ಅಮೆರಿಕವು ಮಡುರೊ ವಿರುದ್ಧ ಮಾದಕವಸ್ತು ಭಯೋತ್ಪಾದನೆ (Narco Terrorism)ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ಇತರ ಆರೋಪಗಳನ್ನು ಹೊರಿಸಿದೆ. ವೆನೆಜುವೆಲಾ ಸರ್ಕಾರ ಈ ಆರೋಪಗಳನ್ನು ತಿರಸ್ಕರಿಸಿದೆ.

ವೆನೆಜುವೆಲಾ ಸರ್ಕಾರವು ಅಮೆರಿಕದ ಕೃತ್ಯವನ್ನು ‘ಮಿಲಿಟರಿ ಆಕ್ರಮಣ’ ಎಂದು ಬಣ್ಣಿಸಿದೆ. ಮಡುರೊ ಮತ್ತು ಫ್ಲೋರ್ಸ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಭಾನುವಾರ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರು ಹಂಗಾಮಿ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಮೆರಿಕದೊಂದಿಗೆ ಸಹಕರಿಸಲು ಅವರು ನಿರ್ಧರಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂದೇಶವೊಂದರಲ್ಲಿ ರೊಡ್ರಿಗಸ್ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ‘ಗೌರವಯುತ ಸಂಬಂಧಗಳನ್ನು’ ಸ್ಥಾಪಿಸುವ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...