Homeಮುಖಪುಟಗೋಯೆಂಕಾ ವಿವಿಯಲ್ಲಿ ನೈಜೀರಿಯಾ- ಭಾರತ ವಿದ್ಯಾರ್ಥಿಗಳ ಹೊಡೆದಾಟ; ಎರಡು ಗುಂಪುಗಳ ಮೇಲೂ ಎಫ್‌ಐಆರ್‌

ಗೋಯೆಂಕಾ ವಿವಿಯಲ್ಲಿ ನೈಜೀರಿಯಾ- ಭಾರತ ವಿದ್ಯಾರ್ಥಿಗಳ ಹೊಡೆದಾಟ; ಎರಡು ಗುಂಪುಗಳ ಮೇಲೂ ಎಫ್‌ಐಆರ್‌

- Advertisement -
- Advertisement -

ಗುರುಗ್ರಾಮ: ಫುಟ್‌ಬಾಲ್ ಆಡುವಾಗ ಭಾರತೀಯ ಮತ್ತು ನೈಜೀರಿಯಾ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಜಿ.ಡಿ.ಗೋಯೆಂಕಾ ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಕನಿಷ್ಠ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉಭಯ ಗುಂಪುಗಳ ಮೇಲೂ ಎಫ್‌ಐಆರ್‌ ದಾಖಲಾಗಿದೆ. ಮತ್ತೊಂದೆಡೆ ವಿಶ್ವವಿದ್ಯಾಲಯವು ವಿಚಾರಣೆಯನ್ನು ಕೈಗೆತ್ತುಕೊಂಡಿದೆ. ಎಂಟು ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯರಿಂದ ಕಿರುಕುಳ ಎದುರಾಗಿದೆ ಎಂದು ಆರೋಪಿಸಿರುವ ನೈಜೀರಿಯಾದ ವಿದ್ಯಾರ್ಥಿಗಳು ಕ್ಯಾಂಪಸ್ ತೊರೆಯಲು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ ವಿಶ್ವವಿದ್ಯಾನಿಲಯವು ಇದನ್ನು ನಿರಾಕರಿಸಿದೆ.

ರಾಯಭಾರ ಕಚೇರಿ ಮಧ್ಯಪ್ರವೇಶಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. “ನಮಗೆ ಸ್ಥಳೀಯರಿಂದ ಕಿರುಕುಳವಾಗುತ್ತಿದೆ. ನಿನ್ನೆ ಸಂಜೆ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಮತ್ತು ಫುಟ್‌ಬಾಲ್ ಮೈದಾನದಲ್ಲಿ ನಮ್ಮನ್ನು ಕ್ರೂರವಾಗಿ ಥಳಿಸಲಾಯಿತು. ನಾವು ಈಗ ದೆಹಲಿಗೆ ಬಂದು ರಾಯಭಾರ ಕಚೇರಿಯ ಅಧಿಕಾರಿಗಳನ್ನು ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದೇವೆ” ಎಂದು ರಬಿಯು ಎಂಬುವರು ನೀಡಿದ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ನೈಜೀರಿಯಾದ ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಫಾರ್ಮಸಿ ವಿದ್ಯಾರ್ಥಿ ಸುಲ್ತಾನ್ ಖಾನ್ ಅವರು ಪ್ರತಿ ದೂರು ದಾಖಲಿಸಿದ್ದಾರೆ.

ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ.ಧೀರೇಂದ್ರ ಸಿಂಗ್ ಪರಿಹಾರ್ ಪ್ರತಿಕ್ರಿಯಿಸಿ, “ಆಟಗಾರನನ್ನು ಬದಲಿಸುವ ಬಗ್ಗೆ ವಿದ್ಯಾರ್ಥಿಗಳು ವಾದಿಸಿದಾಗ ಶುಕ್ರವಾರ ವಿವಾದ ಉಂಟಾಯಿತು. ಸಮಸ್ಯೆ ಬಗೆಹರಿದಿತ್ತು. ಆದರೆ ಶನಿವಾರ ಮತ್ತೆ ಮರುಜೀವ ಪಡೆಯಿತು” ಎಂದು ತಿಳಿಸಿದ್ದಾರೆ.

“ಜಗಳ ನಡೆದು ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಎಂಟು ವಿದ್ಯಾರ್ಥಿಗಳಿಗೆ ದೀರ್ಘ ರಜೆ ತೆಗೆದುಕೊಳ್ಳಲು ಹೇಳಿದ್ದೇವೆ. ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ” ಎಂದಿದ್ದಾರೆ. ಈ ಹಿಂದೆಯೂ ನಮಾಜ್ ಮಾಡುವ ವಿಚಾರದಲ್ಲಿ ಫುಟ್ಬಾಲ್ ಮೈದಾನದಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿತ್ತು.

ಭಾರತೀಯ ಮತ್ತು ನೈಜೀರಿಯಾ ವಿದ್ಯಾರ್ಥಿಗಳ ನಡುವೆ ಜಗಳ ನಡೆದ ಎರಡು ದಿನಗಳ ನಂತರ, ಜಿಡಿ ಗೋಯೆಂಕಾ ವಿಶ್ವವಿದ್ಯಾಲಯದ ಕ್ಯಾಂಪಸ್ ಸ್ತಬ್ಧವಾಗಿದೆ. ಈ ವಿಷಯದ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಲಾಯಿತು. ನೈಜೀರಿಯಾದ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ರಾಜಕಾರಣದಲ್ಲಿ ದಲಿತರನ್ನು ಒಡೆದು ಆಳುವುದು ಸುಲಭವೇ?

ಪೊಲೀಸರ ಪ್ರಕಾರ ಕ್ಯಾಂಪಸ್‌ನಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಶುಕ್ರವಾರ ನಡೆದ ಘರ್ಷಣೆಯಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿಶ್ವವಿದ್ಯಾನಿಲಯದ ಸುಮಾರು 50 ನೈಜೀರಿಯನ್ ವಿದ್ಯಾರ್ಥಿಗಳು ಭಾರತೀಯ ವಿದ್ಯಾರ್ಥಿಗಳ ಕಿರುಕುಳವನ್ನು ಆರೋಪಿಸಿ ತಾತ್ಕಾಲಿಕವಾಗಿ ಕ್ಯಾಂಪಸ್ ತೊರೆದಿದ್ದಾರೆ ಎಂದು ವರದಿಯಾಗಿದೆ.

ವಿಶ್ವವಿದ್ಯಾನಿಲಯ ಆಡಳಿತವು ಅಂತಹ ಬೆಳವಣಿಗೆಯಾಗಿಲ್ಲ ಎಂದು ಹೇಳಿಕೆ ನೀಡಿದೆ. ಈ ವಿಷಯವನ್ನು ಗಮನಿಸಿ, ನೈಜೀರಿಯಾ ರಾಯಭಾರಿ ಕಚೇರಿಯ ತಂಡ ಶನಿವಾರ ರಾತ್ರಿ ವಿಶ್ವವಿದ್ಯಾನಿಲಯಕ್ಕೆ ತೆರಳಿ ನೈಜೀರಿಯಾದ ವಿದ್ಯಾರ್ಥಿಗಳೊಂದಿಗೆ ಘರ್ಷಣೆ ನಡೆಸಿದ ಭಾರತೀಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ.

“ದೆಹಲಿಯ ಸಮೀಪವಿರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನೈಜೀರಿಯಾದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ. 30,000 ನೈಜೀರಿಯನ್ ವಿದ್ಯಾರ್ಥಿಗಳು ಹಣ ಪಾವತಿಸಿ ಭಾರತದಲ್ಲಿ ವ್ಯಾಸಂಗ ಮಾಡುತ್ತಿದ್ದರೆ, 50,000 ಭಾರತೀಯರು ಹಣ ಸಂಪಾದಿಸಲು ನೈಜೀರಿಯಾದಲ್ಲಿ ವಾಸಿಸುತ್ತಿದ್ದಾರೆ” ಎಂದು ಬರಹಗಾರ ಅಶೋಕ್ ಸ್ವೈನ್‌ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...