Homeಮುಖಪುಟಗೋಯೆಂಕಾ ವಿವಿಯಲ್ಲಿ ನೈಜೀರಿಯಾ- ಭಾರತ ವಿದ್ಯಾರ್ಥಿಗಳ ಹೊಡೆದಾಟ; ಎರಡು ಗುಂಪುಗಳ ಮೇಲೂ ಎಫ್‌ಐಆರ್‌

ಗೋಯೆಂಕಾ ವಿವಿಯಲ್ಲಿ ನೈಜೀರಿಯಾ- ಭಾರತ ವಿದ್ಯಾರ್ಥಿಗಳ ಹೊಡೆದಾಟ; ಎರಡು ಗುಂಪುಗಳ ಮೇಲೂ ಎಫ್‌ಐಆರ್‌

- Advertisement -
- Advertisement -

ಗುರುಗ್ರಾಮ: ಫುಟ್‌ಬಾಲ್ ಆಡುವಾಗ ಭಾರತೀಯ ಮತ್ತು ನೈಜೀರಿಯಾ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಜಿ.ಡಿ.ಗೋಯೆಂಕಾ ವಿಶ್ವವಿದ್ಯಾಲಯದ ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಕನಿಷ್ಠ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉಭಯ ಗುಂಪುಗಳ ಮೇಲೂ ಎಫ್‌ಐಆರ್‌ ದಾಖಲಾಗಿದೆ. ಮತ್ತೊಂದೆಡೆ ವಿಶ್ವವಿದ್ಯಾಲಯವು ವಿಚಾರಣೆಯನ್ನು ಕೈಗೆತ್ತುಕೊಂಡಿದೆ. ಎಂಟು ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯರಿಂದ ಕಿರುಕುಳ ಎದುರಾಗಿದೆ ಎಂದು ಆರೋಪಿಸಿರುವ ನೈಜೀರಿಯಾದ ವಿದ್ಯಾರ್ಥಿಗಳು ಕ್ಯಾಂಪಸ್ ತೊರೆಯಲು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ ವಿಶ್ವವಿದ್ಯಾನಿಲಯವು ಇದನ್ನು ನಿರಾಕರಿಸಿದೆ.

ರಾಯಭಾರ ಕಚೇರಿ ಮಧ್ಯಪ್ರವೇಶಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. “ನಮಗೆ ಸ್ಥಳೀಯರಿಂದ ಕಿರುಕುಳವಾಗುತ್ತಿದೆ. ನಿನ್ನೆ ಸಂಜೆ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಮತ್ತು ಫುಟ್‌ಬಾಲ್ ಮೈದಾನದಲ್ಲಿ ನಮ್ಮನ್ನು ಕ್ರೂರವಾಗಿ ಥಳಿಸಲಾಯಿತು. ನಾವು ಈಗ ದೆಹಲಿಗೆ ಬಂದು ರಾಯಭಾರ ಕಚೇರಿಯ ಅಧಿಕಾರಿಗಳನ್ನು ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದೇವೆ” ಎಂದು ರಬಿಯು ಎಂಬುವರು ನೀಡಿದ ದೂರಿನ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ನೈಜೀರಿಯಾದ ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಫಾರ್ಮಸಿ ವಿದ್ಯಾರ್ಥಿ ಸುಲ್ತಾನ್ ಖಾನ್ ಅವರು ಪ್ರತಿ ದೂರು ದಾಖಲಿಸಿದ್ದಾರೆ.

ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ.ಧೀರೇಂದ್ರ ಸಿಂಗ್ ಪರಿಹಾರ್ ಪ್ರತಿಕ್ರಿಯಿಸಿ, “ಆಟಗಾರನನ್ನು ಬದಲಿಸುವ ಬಗ್ಗೆ ವಿದ್ಯಾರ್ಥಿಗಳು ವಾದಿಸಿದಾಗ ಶುಕ್ರವಾರ ವಿವಾದ ಉಂಟಾಯಿತು. ಸಮಸ್ಯೆ ಬಗೆಹರಿದಿತ್ತು. ಆದರೆ ಶನಿವಾರ ಮತ್ತೆ ಮರುಜೀವ ಪಡೆಯಿತು” ಎಂದು ತಿಳಿಸಿದ್ದಾರೆ.

“ಜಗಳ ನಡೆದು ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಎಂಟು ವಿದ್ಯಾರ್ಥಿಗಳಿಗೆ ದೀರ್ಘ ರಜೆ ತೆಗೆದುಕೊಳ್ಳಲು ಹೇಳಿದ್ದೇವೆ. ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ” ಎಂದಿದ್ದಾರೆ. ಈ ಹಿಂದೆಯೂ ನಮಾಜ್ ಮಾಡುವ ವಿಚಾರದಲ್ಲಿ ಫುಟ್ಬಾಲ್ ಮೈದಾನದಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿತ್ತು.

ಭಾರತೀಯ ಮತ್ತು ನೈಜೀರಿಯಾ ವಿದ್ಯಾರ್ಥಿಗಳ ನಡುವೆ ಜಗಳ ನಡೆದ ಎರಡು ದಿನಗಳ ನಂತರ, ಜಿಡಿ ಗೋಯೆಂಕಾ ವಿಶ್ವವಿದ್ಯಾಲಯದ ಕ್ಯಾಂಪಸ್ ಸ್ತಬ್ಧವಾಗಿದೆ. ಈ ವಿಷಯದ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಲಾಯಿತು. ನೈಜೀರಿಯಾದ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ರಾಜಕಾರಣದಲ್ಲಿ ದಲಿತರನ್ನು ಒಡೆದು ಆಳುವುದು ಸುಲಭವೇ?

ಪೊಲೀಸರ ಪ್ರಕಾರ ಕ್ಯಾಂಪಸ್‌ನಲ್ಲಿ ಫುಟ್‌ಬಾಲ್ ಪಂದ್ಯದ ವೇಳೆ ಶುಕ್ರವಾರ ನಡೆದ ಘರ್ಷಣೆಯಲ್ಲಿ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿಶ್ವವಿದ್ಯಾನಿಲಯದ ಸುಮಾರು 50 ನೈಜೀರಿಯನ್ ವಿದ್ಯಾರ್ಥಿಗಳು ಭಾರತೀಯ ವಿದ್ಯಾರ್ಥಿಗಳ ಕಿರುಕುಳವನ್ನು ಆರೋಪಿಸಿ ತಾತ್ಕಾಲಿಕವಾಗಿ ಕ್ಯಾಂಪಸ್ ತೊರೆದಿದ್ದಾರೆ ಎಂದು ವರದಿಯಾಗಿದೆ.

ವಿಶ್ವವಿದ್ಯಾನಿಲಯ ಆಡಳಿತವು ಅಂತಹ ಬೆಳವಣಿಗೆಯಾಗಿಲ್ಲ ಎಂದು ಹೇಳಿಕೆ ನೀಡಿದೆ. ಈ ವಿಷಯವನ್ನು ಗಮನಿಸಿ, ನೈಜೀರಿಯಾ ರಾಯಭಾರಿ ಕಚೇರಿಯ ತಂಡ ಶನಿವಾರ ರಾತ್ರಿ ವಿಶ್ವವಿದ್ಯಾನಿಲಯಕ್ಕೆ ತೆರಳಿ ನೈಜೀರಿಯಾದ ವಿದ್ಯಾರ್ಥಿಗಳೊಂದಿಗೆ ಘರ್ಷಣೆ ನಡೆಸಿದ ಭಾರತೀಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ.

“ದೆಹಲಿಯ ಸಮೀಪವಿರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನೈಜೀರಿಯಾದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ. 30,000 ನೈಜೀರಿಯನ್ ವಿದ್ಯಾರ್ಥಿಗಳು ಹಣ ಪಾವತಿಸಿ ಭಾರತದಲ್ಲಿ ವ್ಯಾಸಂಗ ಮಾಡುತ್ತಿದ್ದರೆ, 50,000 ಭಾರತೀಯರು ಹಣ ಸಂಪಾದಿಸಲು ನೈಜೀರಿಯಾದಲ್ಲಿ ವಾಸಿಸುತ್ತಿದ್ದಾರೆ” ಎಂದು ಬರಹಗಾರ ಅಶೋಕ್ ಸ್ವೈನ್‌ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...