Homeಕರೋನಾ ತಲ್ಲಣಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

- Advertisement -
- Advertisement -

ಕೊರೊನಾದ ಹೊಸ ರೂಪದ ವೈರಸ್ ಹರಡುತ್ತಿರುವ ಕಾರಣ ರಾಜ್ಯದಲ್ಲಿ ಬುಧವಾರದಿಂದ ಜನವರಿ 2 ರವರೆಗೆ ’ರಾತ್ರಿ ಕರ್ಫ್ಯೂ’ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಕೊರೊನಾ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಮುಖ್ಯಮಂತ್ರಿ, “ಈ ಆದೇಶವು ಇಡೀ ರಾಜ್ಯಕ್ಕೆ ಅನ್ವಯವಾಗಲಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ” ಎಂದು ತಿಳಿಸಿದ್ದಾರೆ.

ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್‌ಟಿ-ಪಿಸಿಆರ್ ವಿಧಾನದಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದಿದ್ದಾರೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ಡಿಸೆಂಬರ್‌ 21 ರಂದು ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದ್ದು, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 31 ರ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿತ್ತು.

ಕಳೆದ ಸೆಪ್ಟೆಂಬರ್‌ನಲ್ಲಿ ಇಂಗ್ಲೆಂಡ್‌ನ ವಿಜ್ಞಾನಿಗಳು ರೋಗಿಯೊಬ್ಬರಲ್ಲಿ ಹೊಸ ರೂಪದ ಕೊರೊನಾ ವೈರಸ್ ಅನ್ನು ಕಂಡು ಹಿಡಿದಿದ್ದರು. ಬ್ರಿಟನ್‌ನಲ್ಲಿ ನವೆಂಬರ್‌ ತಿಂಗಳಲ್ಲಿ ಹೆಚ್ಚಾದ ಕೊರೊನಾ ಪ್ರಕರಣಗಳಲ್ಲಿ ಈ ವೈರಸ್ ಹೆಚ್ಚಾಗಿದ್ದರಿಂದ ಡಿಸೆಂಬರ್ 11 ರಂದು ಸರ್ಕಾರಕ್ಕೆ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಯುಕೆಯಿಂದ ಬಂದ ಪ್ರಯಾಣಿಕರಿಗಾಗಿಯೇ ಈ ಹೊಸ ಎಸ್‌ಒಪಿ ಮಾರ್ಗಸೂಚಿ ಸಿದ್ಧಪಡಿಸಿದ್ದು, ರಾಜ್ಯ ಸಕಾರಗಳಿಗೆ ನಿಗಾ ವಹಿಸುವಂತೆ ಸೂಚನೆ ನೀಡಿದೆ. ಆರೋಗ್ಯ ಸಚಿವಾಲಯವು ತನ್ನ ಎಸ್‌ಒಪಿಗಳಲ್ಲಿ 2020 ರ ನವೆಂಬರ್ 25 ರಿಂದ ಡಿಸೆಂಬರ್ 8 ರ ನಡುವೆ ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸಿದ ಪ್ರಯಾಣಿಕರ ಮೇಲೆ ರಾಜ್ಯ ಸರ್ಕಾರ ನಿಗಾ ಇಟ್ಟು ಟೆಸ್ಟ್ ಮಾಡಿಸಲು ತಿಳಿಸಲಾಗಿದೆ. ಯುಕೆಯಿಂದ ಬಂದಿಳಿದಿರುವ ಪ್ರಯಾಣಿಕರನ್ನ ಆರ್​ಟಿಪಿಸಿಆರ್ ಟೆಸ್ಟ್​ಗೆ ಒಳಪಡಿಸುವುದು ಸೇರಿದಂತೆ ಹಲವು ನಿಯಮಗಳನ್ನು ಪರಿಚಯಿಸಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಮಾರ್ಗಸೂಚಿ ಹೊರಡಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...