Homeಕರೋನಾ ತಲ್ಲಣರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬಿಬಿಎಂಪಿ ಕೂಡಾ ಕ್ರಿಸ್ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ

- Advertisement -
- Advertisement -

ರೂಪಾಂತರಿ ಕೊರೊನಾ ವೈರಸ್‌ ಕಂಡು ಬಂದಿರುವ ಹಿನ್ನಲೆಯಲ್ಲಿ ಗುರುವಾರ ರಾತ್ರಿಯಿಂದ ಜನವರಿ 2 ರ ಮುಂಜಾನೆಯವರೆಗೆ ’ರಾತ್ರಿ ಕರ್ಫ್ಯೂ’ವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು. ಇದೀಗ ಈ ರಾತ್ರಿ ಕರ್ಫ್ಯೂವಿನ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.

ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಾಗಿ ಕರ್ಫ್ಯೂ ಜಾರಿಯಾಗಲಿದೆ. ದೀರ್ಘ ಪ್ರಯಾಣದ, ಬಸ್, ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಸರಕು ವಾಹನಗಳ ಸಂಚಾರಕ್ಕೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ. 50% ರಷ್ಟು ಮಾನವ ಶಕ್ತಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ರೀತಿಯ ಕೈಗಾರಿಕಾ ಸಂಸ್ಥೆಗಳಿಗೂ ರಾಜ್ಯ ಸರ್ಕಾರ ಸಡಿಲಿಕೆ ನೀಡಿದೆ. ಆದರೆ ಇದಕ್ಕೆ ಆ ಸಂಸ್ಥೆಯ ಗುರುತಿನ ಚೀಯನ್ನು ಇಟ್ಟುಕೊಳ್ಳುವುದು ಅವಶ್ಯಕವಾಗಿದೆ.

ಇದನ್ನೂ ಓದಿ: ರೂಪಾಂತರಿ ಕೊರೊನಾ ವೈರಸ್ ಭೀತಿ: ರಾತ್ರಿ ಕರ್ಫ್ಯೂ ದಿನಾಂಕ ಬದಲಿಸಿದ ಮುಖ್ಯಮಂತ್ರಿ!

ರಾತ್ರಿ 11 ರಿಂದ ಬೆಳಗ್ಗೆ 5 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜನರ ಪ್ರಯಾಣಕ್ಕೆ ನಿಷೇಧ ಹೇರಲಾಗಿದೆ. ದಿನದ 24 ಗಂಟೆ ಕರ್ತವ್ಯ ನಿರ್ವಹಿಸುತ್ತಿರುವ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಯಾವುದೇ ರೀತಿಯ ನಿರ್ಬಂಧವಿಲ್ಲದೆ ನಿರಂತರ ಕಾರ್ಯಾಚರಣೆ ನಡೆಸಲು ಅನುಮತಿಯಿದೆ.

ಅಲ್ಲದೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಂದ ಪ್ರಯಾಣಿಕರನ್ನು ಕರೆತರಲು ಹಾಗೂ ಕರೆದೊಯ್ಯುವ ಟ್ಯಾಕ್ಸಿ ಹಾಗೂ ಆಟೋಗಳಿಗೆ ಅನುಮತಿಯಿದೆ. ಆದರೆ ಈ ವೇಳೆ ಪ್ರಯಾಣದ ಟಿಕೆಟ್​​ಅನ್ನು ಪ್ರಯಾಣಿಕರು ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಕ್ರಿಸ್ಮಸ್ ಆಚರಣೆಗೆ ಅವಕಾಶ ನೀಡಲಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಬಹುದು ಎಂದು ಮುಖ್ಯಮಂತ್ರಿ ಸಂಜೆ ಟ್ವೀಟ್ ಮಾಡಿ ತಿಳಿಸಿದ್ದರು.

ಇದನ್ನೂ ಓದಿ: ಇಂದಿನಿಂದ ರಾಜ್ಯದಲ್ಲಿ ’ರಾತ್ರಿ ಕರ್ಫ್ಯೂ’ ಜಾರಿ: ಮುಖ್ಯಮಂತ್ರಿ ಯಡಿಯೂರಪ್ಪ

ಕ್ರಿಸ್ಮಸ್‌ ಹಾಗೂ ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ

ಚರ್ಚ್‌, ದೇವಸ್ಥಾನ, ಮಸೀದಿ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು, ಹಸ್ತಲಾಘವ ಮತ್ತು ಆಲಿಂಗನದಿಂದ ದೂರವಿರಬೇಕು ಎಂದು ಬಿಬಿಎಂಪಿ ತನ್ನ ಮಾರ್ಗಸೂಚಿಯಲ್ಲಿ ಹೇಳಿದೆ.

ಡಿಸೆಂಬರ್‌ 30 ರಿಂದ 2021ರ ಜನವರಿ 2 ರವರೆಗೆ ಕ್ಲಬ್‌, ಪಬ್, ರೆಸ್ಟೋರೆಂಟ್‌ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಿಕೆ, ವಿಶೇಷ ಡಿಜೆ, ನೃತ್ಯ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿಗಳನ್ನು ನಿಷೇಧಿಸಲಾಗಿದೆ. ಆದರೆ, ಕ್ಲಬ್‌, ಪಬ್‌, ರೆಸ್ಟೋರೆಂಟ್‌ಗಳು ಎಂದಿನಂತೆ ತೆರೆದಿರಲಿದೆ ಎಂದು ಬಿಬಿಎಂಪಿ ಆದೇಶದಲ್ಲಿ ತಿಳಿಸಿದೆ.

ಈ ಸಮಯದಲ್ಲಿ 65 ವರ್ಷದ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಿದ್ದು, ಹೋಟೆಲ್‌, ಮಾಲ್‌, ಪಬ್‌, ರೆಸ್ಟೋರೆಂಟ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ ಎಂದು ಹೇಳಿದೆ. ಅಲ್ಲದೆ ಆನ್‌ಲೈನ್‌ ಅಥವಾ ಟೋಕನ್‌ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಹೊಸ ಕೊರೊನಾ ಆತಂಕ: ಲಂಡನ್‌ನಿಂದ ಬಂದಿದ್ದ 6 ಮಂದಿಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...